ಆ್ಯಪ್ನಗರ

ಮೈಸೂರು ಪಾಲಿಕೆ ಚುನಾವಣೆ ಬೆನ್ನಲ್ಲೇ ಸಾ.ರಾ ಮಹೇಶ್ ವಿರುದ್ಧ ಅಸಮಾಧಾನ ಹೊರ ಹಾಕಿದ ಶಾಸಕ ಜಿ ಟಿ ದೇವೇಗೌಡ

ಮೈಸೂರು ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆ ಮುಗಿದಿದ್ದು ಶಾಸಕ ಜಿ ಟಿ ದೇವೇಗೌಡ ಜಿಲ್ಲೆಗೆ ಶಾಸಕ ಸಾ.ರಾ ಮಹೇಶ್ ಅವರೇ ಜೆಡಿಎಸ್ ವರಿಷ್ಠರಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Vijaya Karnataka Web 18 Jan 2020, 4:27 pm
ಮೈಸೂರು : ಇಂದು ಬಹು ನಿರೀಕ್ಷಿತ ಮೈಸೂರು ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆ ಮುಗಿದಿದ್ದು,ಮೈಸೂರು ಮಹಾನಗರ ಪಾಲಿಕೆ 22ನೇ ಮೇಯರ್ ಆಗಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಅಭ್ಯರ್ಥಿ ತಸ್ಲೀಂ ಅವರು ಹಾಗೂ ಉಪ ಮೇಯರ್ ಆಗಿ ಸಿ.ಶ್ರೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜಿ ಟಿ ದೇವೇಗೌಡ ಜಿಲ್ಲೆಗೆ ಶಾಸಕ ಸಾ.ರಾ ಮಹೇಶ್ ಅವರೇ ಜೆಡಿಎಸ್ ವರಿಷ್ಠರಾಗಿದ್ದಾರೆ ಎಂದು ಹೇಳುವ ಮೂಲಕ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.
Vijaya Karnataka Web gt deve gowda


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಜಿಲ್ಲೆಗೆ ಶಾಸಕ ಸಾ.ರಾ ಮಹೇಶ್ ಅವರೇ ಜೆಡಿಎಸ್ ವರಿಷ್ಠರಾಗಿದ್ದಾರೆ. ಹೈಕಮಾಂಡ್ ಅವರಿಗೆ ಹೇಳಿದ್ದನ್ನು ಅವರು ನಮಗೆ ತಿಳಿಸುತ್ತಾರೆ. ನಾವು ಅದನ್ನು ಪಾಲಿಸುತ್ತೇವೆ. ಮೊದಲಿನಿಂದಲೂ ಹಾಗೆ ನಡೆಸಿಕೊಂಡು ಬಂದಿದ್ದೇವೆ. ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಎಂಬುದಿಲ್ಲ ಎಂದು ತಿಳಿಸಿದರು.

ಇದಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಸಾ ರಾ ಮಹೇಶ್‌, ಮೈಸೂರು ಮಹಾನಗರ ಪಾಲಿಕೆಯಲ್ಲಿ ದೋಸ್ತಿ ಮುಂದುವರೆದಿದ್ದು, ಮಾಡಿಕೊಂಡ ಒಪ್ಪಂದದಂತೆ ನಾವು ಮೇಯರ್ ಸ್ಥಾನಕ್ಕೆ ದೊರಕಿದೆ. ಮಾಜಿ ಸಚಿವಜಿಟಿ ದೇವೇಗೌಡರ ಸಲಹೆ ಸೂಚನೆ ಪಡೆದೇ ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. ಜಿಟಿಡಿಯವರು ನಿನ್ನೆಯೂ ಈ ಬಗ್ಗೆ ಮಾತನಾಡಿದ್ದಾರೆ. ಅವರು ಸ್ವಲ್ಪ ಬೇಜಾರಿನಲ್ಲಿ ಇದ್ದಾರೆ. ಅವರೇ ನಮ್ಮ ನಾಯಕರು‌ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ