ಆ್ಯಪ್ನಗರ

ಶಾಸಕ ರಾಮದಾಸ್‌ಗೆ ಕೊರೊನಾ ದೃಢ; ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಆತಂಕ!

ಶಾಸಕ ರಾಮದಾಸ್ ಕೊರೊನಾ ಪಾಸಿಟಿವ್ ದೃಢಪಟ್ಟ ನಂತರವೂ ನಿನ್ನೆ ಸಭೆ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಇದರಿಂದಾಗಿ ಸಚಿವ ಮತ್ತು ಶಾಸಕರು, ಮುಖಂಡರಲ್ಲಿ ಆತಂಕ ಎದುರಾಗಿದೆ. ನಿನ್ನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ರಾಜೀವ್, ಸಂಸದ ಪ್ರತಾಪ್ ಸಿಂಹ, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇದೀಗ ಆತಂಕ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

Vijaya Karnataka Web 15 Apr 2021, 12:12 pm
ಮೈಸೂರು: ಬಿಜೆಪಿ ಶಾಸಕ ರಾಮದಾಸ್‌ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮಧ್ಯೆ ಶಾಸಕ ರಾಮದಾಸ್ ನಿನ್ನೆ ಸಭೆ ಸಮಾರಂಭದಲ್ಲಿ ಪಾಲ್ಗೊಂಡಿದ್ದು, ಇದರಿಂದಾಗಿ ಸಚಿವ ಮತ್ತು ಶಾಸಕರು, ಮುಖಂಡರಲ್ಲಿ ಆತಂಕ ಎದುರಾಗಿದೆ.
Vijaya Karnataka Web mla ramadas attend the public event in mysuru after tested corona positive
ಶಾಸಕ ರಾಮದಾಸ್‌ಗೆ ಕೊರೊನಾ ದೃಢ; ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಆತಂಕ!


ಕೊರೊನಾ ಸೋಂಕು ದೃಢಪಟ್ಟ ನಂತರ ಕೋವಿಡ್ ಆಸ್ಪತ್ರೆಗೆ ದಾಖಲಾಗಬೇಕು. ಅಥವಾ ಹೋಂ ಐಸೋಲೇಷನ್‌ನಲ್ಲಿ ಇರಬೇಕು. ಆದರೆ ಶಾಸಕ ರಾಮದಾಸ್ ಅವರಿಗೆ ಕಳೆದ ಎರಡ್ಮೂರು ದಿನಗಳಿಂದ ಕೊರೊನಾ ಗುಣಲಕ್ಷಣವಿದ್ದರೂ ಬುಧವಾರ ಮೈಸೂರಿನಲ್ಲಿ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಶಾಸಕ ರಾಮದಾಸ್‌ಗೆ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗಾಗಿ ಸ್ಯಾಂಪಲ್ ನೀಡಿದ್ದರು. ಇದೀಗ ಶಾಸಕ ರಾಮದಾಸ್ ಸಭೆ ಸಮಾರಂಭಗಳಲ್ಲಿ ಪಾಲ್ಗೊಂಡ ನಂತರ ವರದಿ ಬಂದಿದ್ದು , ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಸಾರಿಗೆ ನೌಕರರ ಮುಷ್ಕರದಿಂದ ಸಾರಿಗೆ ನಿಗಮಕ್ಕೆ 152 ಕೋಟಿ ರೂಪಾಯಿ ನಷ್ಟ!
ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ಎಲ್. ನಾಗೇಂದ್ರ, ಮುಡಾ ಅಧ್ಯಕ್ಷ ರಾಜೀವ್, ಸಂಸದ ಪ್ರತಾಪ್ ಸಿಂಹ, ಮೇಯರ್ ರುಕ್ಮಿಣಿ ಮಾದೇಗೌಡ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇದೀಗ ಆತಂಕ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಿದೆ

ಮೈಸೂರಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಜಾಸ್ತಿಯಾಗಿದ್ದು, ನಗರದಾದ್ಯಂತ ತೀವ್ರ ಆತಂಕ ಎದುರಾಗಿದೆ. ಬೆಂಗಳೂರಿನ ನಂತರ ಮೈಸೂರು ಸೂಕ್ಷ್ಮ ಪ್ರದೇಶವಾಗಿದ್ದು ಜಿಲ್ಲೆಯಾದ್ಯಂತ ಟಫ್ ರೂಲ್ಸ್ ಜಾರಿಯಲ್ಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ