ಆ್ಯಪ್ನಗರ

Sa Ra Mahesh | ಸಾ.ರಾ.ಮಹೇಶ್ vs ರೋಹಿಣಿ ಸಿಂಧೂರಿ: ಐಎಎಸ್‌ ಅಧಿಕಾರಿ ವಿರುದ್ಧ 1,200 ಪುಟಗಳ ದಾಖಲೆ ಸಲ್ಲಿಕೆ

IAS Rohini Sindhuri: ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ಕುರಿತ ತನಿಖೆ ಇದೀಗ ಆರಂಭವಾಗಿದ್ದು, ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ ಡಾ ಜೆ.ರವಿಶಂಕರ್ ನೇತೃತ್ವದಲ್ಲಿ ಮೈಸೂರು ಡಿಸಿ ಕಚೇರಿಯ ಸಭಾಂಗಣದಲ್ಲಿ ತನಿಖೆ ನಡೆದಿದೆ. ಎಡಿಸಿ ಮಂಜುನಾಥ್ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಹಿಂದೆ ಪ್ರಕರಣಗಳ ಕುರಿತು ಶಾಸಕ ಸಾ.ರಾ.ಮಹೇಶ್‌ಗೆ ಡಾ.ಜೆ.ರವಿಶಂಕರ್ ನೋಟಿಸ್ ನೀಡಿದ್ದರು.

Edited byಹೇಮಂತ್ ಕುಮಾರ್ ಎಸ್ | Lipi 19 Aug 2022, 8:55 pm

ಹೈಲೈಟ್ಸ್‌:

  • ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪ
  • ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ ಡಾ ಜೆ.ರವಿಶಂಕರ್ ನೇತೃತ್ವದಲ್ಲಿ ತನಿಖೆ
  • ಐಎಎಸ್ ಅಧಿಕಾರಿಗೆ ಈ ಪ್ರಕರಣದಿಂದ ಅಮಾನತು ಮಾಡಬೇಕಾಗಿದೆ ಎಂದ ಸಾ.ರಾ.ಮಹೇಶ್‌

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Rohini sinduri vs sara mahesh
ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಶಾಸಕ ಸಾ.ರಾ.ಮಹೇಶ್
ಮೈಸೂರು: ಕಳೆದ ಕೆಲ ವರ್ಷಗಳಲ್ಲಿ ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಮರ ಎಲ್ಲರ ಗಮನ ಸೆಳೆದಿದೆ. ಇದೀಗ ಈ ವಿಚಾರ ಇನ್ನೊಂದು ಹಂತಕ್ಕೆ ಹೋಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕರ್ತವ್ಯ ಲೋಪ, ಹಣ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗೆ ಶಾಸಕ ಸಾ.ರಾ.ಮಹೇಶ್ 1200 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದ್ದಾರೆ.
ಸಾರಾ ಮಹೇಶ್‌ ವಿರುದ್ಧ ಎಫ್‌ಐಆರ್‌ ದಾಖಲು : "ನನ್ನನ್ನು ಬಂಧಿಸಿ" ಎಂದ ಶಾಸಕ
ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣ ಕುರಿತ ತನಿಖೆ ಇದೀಗ ಆರಂಭವಾಗಿದ್ದು, ವಸತಿ ಇಲಾಖೆ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ ಡಾ ಜೆ.ರವಿಶಂಕರ್ ನೇತೃತ್ವದಲ್ಲಿ ಮೈಸೂರು ಡಿಸಿ ಕಚೇರಿಯ ಸಭಾಂಗಣದಲ್ಲಿ ತನಿಖೆ ನಡೆದಿದೆ. ಎಡಿಸಿ ಮಂಜುನಾಥ್ ಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ರೋಹಿಣಿ ಸಿಂಧೂರಿಗೆ 'ಬಟ್ಟೆ ಬ್ಯಾಗ್' ಕಂಟಕ! ಹಗರಣದ ತನಿಖೆಗೆ ಸರ್ಕಾರದ ಆದೇಶ, ಸಾರಾ ಮಹೇಶ್‌ಗೆ ಮೇಲುಗೈ
ಈ ಹಿಂದೆ ಪ್ರಕರಣಗಳ ಕುರಿತು ಶಾಸಕ ಸಾ.ರಾ.ಮಹೇಶ್‌ಗೆ ಡಾ.ಜೆ.ರವಿಶಂಕರ್ ನೋಟಿಸ್ ನೀಡಿದ್ದರು. ಇದೀಗ ತನಿಖಾಧಿಕಾರಿ, ರವಿಶಂಕರ್ ಅವರಿಗೆ ಶಾಸಕ ಸಾ.ರಾ.ಮಹೇಶ್ 1200 ಪುಟಗಳಷ್ಟು ದಾಖಲೆಗಳನ್ನು ಸಲ್ಲಿಸಿದರು.

ಇದೇ ವಿಚಾರವಾಗಿ ಶಾಸಕ ಸಾ.ರಾ.ಮಹೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇನ್ನು 30 ದಿನದಲ್ಲಿ ವಿಚಾರಣೆ ಪ್ರಕ್ರಿಯೆ ಮುಗಿಯುತ್ತದೆ. ಈ ಪ್ರಕರಣದಲ್ಲಿ ನಾನು ಮಾಡಿದ್ದ ಎಲ್ಲಾ ಆರೋಪಕ್ಕೂ ದಾಖಲೆಗಳನ್ನು ನೀಡಿದ್ದೇನೆ. ಐಎಎಸ್ ಅಧಿಕಾರಿಗೆ ಈ ಪ್ರಕರಣದಿಂದ ಅಮಾನತು ಮಾಡಬೇಕಾಗಿದೆ. ನನಗೆ ತನಿಖೆಯ ಮೇಲೆ ವಿಶ್ವಾಸವಿದೆ‌. ನಾನು ಯಾವ ದುರುದ್ದೇಶದಿಂದಲೂ ಈ ಆರೋಪಗಳನ್ನು ಮಾಡಿಲ್ಲ ಎಂದರು.
ಮೈಸೂರು: ​ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಗಳಗಳನೆ ಅತ್ತ ಶಾಸಕ ಸಾರಾ ಮಹೇಶ್..!
ಐಎಎಸ್ ಅಧಿಕಾರಿ ನನ್ನ ಮೇಲೆ ದುರುದ್ದೇಶದ ಭೂ ಅಕ್ರಮ ಆರೋಪ ಮಾಡಿದ್ದರು. ಈ ತನಿಖೆಯ ವರದಿ ಬಂದ ಮೇಲೆ ಜನರಿಗೆ ಆ ಅಧಿಕಾರಿಯ ನಿಜ ಬಣ್ಣ ಗೊತ್ತಾಗಲಿದೆ‌. ಆ ಐಎಎಸ್ ಅಧಿಕಾರಿಯ ಬಣ್ಣ ಬಯಲು ಮಾಡುವುದೇ ನನ್ನ ಉದ್ದೇಶವಾಗಿದೆ. ಐಎಎಸ್ ಅಧಿಕಾರಿಯ ಮೇಲೆ ಮಾಡಿರುವ ಆರೋಪ ಸಾಬೀತಾಗುವ ವಿಶ್ವಾಸವಿದೆ. ಆಗಲೂ ಐಎಎಸ್ ಅಧಿಕಾರಿ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳದಿದ್ದರೇ ಸದನದ ಒಳಗೆ-ಹೊರಗೂ ಮಾತ್ರವಲ್ಲದೇ ನ್ಯಾಯಾಲಯದಲ್ಲೂ ಹೋರಾಟ ನಡೆಸುತ್ತೇನೆ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಗಳಗಳನೆ ಅತ್ತಿದ್ದ ಮಹೇಶ್

ಶಾಸಕರ ಕಾರ್ಯ ವೈಖರಿ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನೆ ಮಾಡಿದ್ದಕ್ಕೆ ಬೇಸರಗೊಂಡ ಶಾಸಕ ಸಾ.ರಾ. ಮಹೇಶ್ ಕಣ್ಣೀರು ಹಾಕಿದ ಘಟನೆ ಇತ್ತೀಚೆಗಷ್ಟೇ ಕೆ.ಆರ್ ನಗರದಲ್ಲಿ ನಡೆದಿತ್ತು. ಅದರ ವಿಡಿಯೊ ಸಹ ವೈರಲ್‌ ಆಗಿತ್ತು.
ನಿಮ್ಮ ಮಗನನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸಿದರೆ ಮತ್ತೆ ಗೆಲುವು ನನ್ನದೇ; ಜಿಟಿಡಿಗೆ ಸಾರಾ ಮಹೇಶ್‌ ಟಾಂಗ್‌
ಕಾಲೇಜೊಂದರ ಕಾರ್ಯಕ್ರಮದಲ್ಲಿ ಮಾತನಾಡುತ್ತ ಅವರು, ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದರೂ ಏಕೆ ಈ ರೀತಿ ಮಾತನಾಡುತ್ತೀರಾ ಎಂದು ಬೇಸರ ವ್ಯಕ್ತಪಡಿಸಿದ್ದರು. ಕಾಲೇಜು ಕಟ್ಟಡ ಉದ್ಘಾಟನೆ ವಿಚಾರವಾಗಿ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿ ಸಾ.ರಾ ವಿರುದ್ಧ ಪೋಸ್ಟ್ ಹಾಕಿದ್ದ. ಇದನ್ನ ನೆನೆದು ಅವರು ಭಾವುಕರಾಗಿದ್ದರು.
ಸಾರಾ ಮಹೇಶ್ ಗೆದ್ದರೆ ಮಾತ್ರ ನಾನು ಮತ್ತೆ ಸಿಎಂ ಆಗಲು ಸಾಧ್ಯ: ಎಚ್‌.ಡಿ.ಕುಮಾರಸ್ವಾಮಿ
ವೇದಿಕೆಯಲ್ಲೇ ವಿದ್ಯಾರ್ಥಿ ಹಾಕಿದ್ದ ಪೋಸ್ಟ್ ಓದುತ್ತಾ ವಿದ್ಯಾರ್ಥಿಗೆ ಸಾ.ರಾ. ಮಹೇಶ್ ಎಚ್ಚರಿಕೆ ನೀಡಿದ್ದರು. 'ಇಂತಹ ಅಯೋಗ್ಯನನ್ನು ಇಟ್ಟುಕೊಂಡಿದ್ದೀರಲ್ಲಾ? ಎಂದು ಪ್ರಾಂಶುಪಾಲರಿಗೆ ಪ್ರಶ್ನೆ ಮಾಡಿದರು. ನಾನು ಮನಸ್ಸು ಮಾಡಿದ್ದರೇ ಸಸ್ಪೆಂಡ್ ಮಾಡಿಸುತ್ತಿದ್ದೆ. ನಮ್ಮ ಅಪ್ಪ-ಅಮ್ಮ ನನಗೆ ಸಂಸ್ಕಾರ ಕಲಿಸಿದ್ದಾರೆ. ನಾನು ನಿಮ್ಮ ಜಾತಿಯವನ್ನಲ್ಲಾ ಎಂಬ ಕಾರಣಕ್ಕೆ ಕೆಟ್ಟ ಪದ ಉಪಯೋಗಿಸಿದ್ದೀರಾ. ನನಗೂ ಸ್ವಾಭಿಮಾನ ಇದೆ. ಪ್ರತಿ ನಿತ್ಯ ಟಿಫನ್ ಬಾಕ್ಸ್ ತೆಗೆದುಕೊಂಡು ವಿದ್ಯಾರ್ಥಿಗಳ ರೀತಿ ಕೆಲಸ ಮಾಡುತ್ತಿದ್ದೇನೆ. ಇಷ್ಟೆಲ್ಲಾ ಕೆಲಸ ಮಾಡಿದ್ದೇನೆ. ಮನಸಾಕ್ಷಿ ಬೇಡವೇ ನಿಮಗೆ. ಇಂತಹ ವ್ಯವಸ್ಥೆಯಲ್ಲಿ ರಾಜಕಾರಣ ಮಾಡಬೇಕಾ' ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ