ಆ್ಯಪ್ನಗರ

ಮೈಸೂರು ಪಾಲಿಕೆ ಮೈತ್ರಿ ವಿವಾದ: ಸಿದ್ದರಾಮಯ್ಯ ವಿರುದ್ಧ ತನ್ವೀರ್ ಸೇಠ್‌ ಬೆಂಬಲಿಗರಿಂದ ಪ್ರೊಟೆಸ್ಟ್

ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್‌ ಜೊತೆಗಿನ ಮೈತ್ರಿಗೆ ಕಾಂಗ್ರೆಸ್‌ನಲ್ಲಿ ಬಿರುಕು ಉಂಟಾಗಿದೆ. ಈ ಹಿನ್ನೆಲೆ ಶಾಸಕ ತನ್ವೀರ್‌ ಸೇಠ್‌ಗೆ ಕೆಪಿಸಿಸಿ ನೋಟಿಸ್‌ ನೀಡುವ ಸಾಧ್ಯತೆ ಇದೆ. ಇದರಿಂದ ಆಕ್ರೋಶಗೊಂಡಿರುವ ಶಾಸಕರ ಬೆಂಬಲಿಗರು ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು.

Lipi 26 Feb 2021, 11:59 am

ಹೈಲೈಟ್ಸ್‌:


  • ಕಾಂಗ್ರೆಸ್‌ನಲ್ಲಿ ಬಿರುಕು ಮೂಡಿಸಿದ ಮೈಸೂರು ಮಹಾನಗರ ಪಾಲಿಕೆಯ ಜೆಡಿಎಸ್‌ ಮೈತ್ರಿ
  • ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ತನ್ವೀರ್‌ ಸೇಠ್‌ ಬೆಂಬಲಿಗರಿಂದ ಪ್ರತಿಭಟನೆ
  • ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ತನ್ವೀರ್‌ ಸೇಠ್‌ ಬೆಂಬಲಿಗರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web mysuru
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನ್ವೀರ್‌ ಸೇಠ್‌ ಬೆಂಬಲಿಗರಿಂದ ಪ್ರತಿಭಟನೆ
ಮೈಸೂರು: ಮೈಸೂರು ಪಾಲಿಕೆ ಮೇಯರ್ ಮುಗಿದ ಬೆನ್ನಲ್ಲೇ ಜಿಲ್ಲಾ ಕಾಂಗ್ರೆಸ್ನಲ್ಲಿ ಸಂಚಲನ ಉಂಟಾಗುತ್ತಿದೆ. ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿಗೆ ಅಪಸ್ವರ ಕೇಳಿಬಂದಿದ್ದು, ಶಾಸಕ ತನ್ವೀರ್‌ ಸೇಠ್‌ ಅವರಿಗೆ ಕೆಪಿಸಿಸಿ ನೋಟಿಸ್‌ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ತನ್ವೀರ್‌ ಸೇಠ್‌ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ತನ್ವೀರ್‌ ಸೇಠ್‌ ನಿವಾಸದ ಮುಂದೆ ಸೇರಿದ ಶಾಸಕರ ಬೆಂಬಲಿಗರು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ಅಭಿಮಾನಿಗಳನ್ನು ಸಮಾಧಾನಪಡಿಸಲು ಶಾಸಕ ತನ್ವಿರ್ ಸೇಠ್ ಪ್ರಯತ್ನಪಟ್ಟರು. ನೋಟಿಸ್‌ ನೀಡಿದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ತನ್ವೀರ್‌ ಬೆಂಬಲಿಗರು ನೀಡಿದರು.

ಸ್ಥಳೀಯವಾಗಿ ಮೈಸೂರಲ್ಲಿ ಮೈತ್ರಿ ಆಗಿದೆ. ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಶಾಸಕ ತನ್ವೀರ್ ಸೇಠ್‌ ತಂತ್ರ ಉಪಯೋಗಿಸಿ ಪಾಲಿಕೆಯಲ್ಲಿ ಜೆಡಿಎಸ್ ಜತೆ ಮೈತ್ರಿಗೆ ಒಪ್ಪಿಕೊಂಡಿದ್ದಾರೆ. ಅಂಥವರಿಗೆ ಕೆಪಿಸಿಸಿಯಿಂದ ನೋಟಿಸ್ ನೀಡಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ ಎಂದು ಶಾಸಕರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು ಮೇಯರ್ ಚುನಾವಣೆ: ಜೆಡಿಎಸ್ ಜೊತೆಗಿನ ದೋಸ್ತಿಗೆ ಕಾಂಗ್ರೆಸ್‌ ನಾಯಕರ ಅಪಸ್ವರಸಿದ್ದರಾಮಯ್ಯ ಅವರಿಗೆ ಸ್ಥಳೀಯವಾಗಿ ಅಷ್ಟೊಂದು ಮಾಹಿತಿ ಇಲ್ಲ, ಕೆಳಮಟ್ಟದ ನಾಯಕರನ್ನ ಸಿದ್ದರಾಮಯ್ಯ ಬೆಳೆಯಲು ಬಿಡ್ತಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಅದಲ್ಲದೇ, ಮಾಜಿ ಸ್ಪೀಕರ್ ರಮೇಶ್ಕುಮಾರ್ ಯಾರೂ ಅಂತಾನೆ ಗೊತ್ತಿಲ್ಲ. ಅವರು, ತನ್ವೀರ್ ಬಗ್ಗೆ ಮಾತಾಡಿರೋದು ಅಸಹ್ಯಕರ ಎಂದ ಅವರು, ರಮೇಶ್ ಕುಮಾರ್ ಧೋರಣೆ ಬದಲಿಸಿಕೊಳ್ಳದಿದ್ರೆ ತಕ್ಕಪಾಠ ಕಲಿಸಬೇಕಾಗುತ್ತೆ ಎಂದು ವಾರ್ನಿಂಗ್‌ ನೀಡಿದರು.
ಮೈಸೂರು ಪಾಲಿಕೆ ಮೇಯರ್ ಎಲೆಕ್ಷನ್‌ನಲ್ಲಿ ಕೈ-ತೆನೆ ದೋಸ್ತಿ: ಡಿಕೆಶಿ ವಿರುದ್ಧ ಸಿದ್ದು ಗರಂ..?ಯಾವುದೇ ಕಾರಣಕ್ಕೂ ಜೆಡಿಎಸ್ ಜತೆ ಮೈತ್ರಿ ಬೇಡವೇ ಬೇಡ ಅಂದಿದ್ದ ಸಿದ್ದರಾಮಯ್ಯ ಮಾತನ್ನು ವಿರೋಧಿಸಿ ಶಾಸಕ ತನ್ವೀರ್ ಸೇಠ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಜುಗಲ್ಬಂದಿಯಲ್ಲಿ ಮೈಸೂರು ಪಾಲಿಕೆಯಲ್ಲಿ ದೋಸ್ತಿ ರಚನೆಯಾಗಿತ್ತು. ಅದೀಗ ಕಾಂಗ್ರೆಸ್‌ನಲ್ಲಿ ಬಿರುಕು ಮೂಡುವಂತೆ ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ