ಆ್ಯಪ್ನಗರ

ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು ಸರಿಯಲ್ಲ; ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಯತೀಂದ್ರ ಸಿದ್ದರಾಮಯ್ಯ

​ರಾಜ್ಯದ 56 ನಗರಸಭೆ, 112 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ನಿಗದಿಯಾಗಿದ್ದ ಮೀಸಲಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ಸಂಬಂಧ ಪ್ರತಿಕ್ರಿಯಿಸಿದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಈ ಸಮಯದಲ್ಲಿ ಮೀಸಲಾತಿ ರದ್ದು ಸರಿಯಲ್ಲ. ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

Vijaya Karnataka Web 20 Nov 2020, 5:51 pm
ಮೈಸೂರು: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಿಗದಿಪಡಿಸಿದ್ದ ಮೀಸಲನ್ನು ರದ್ದುಪಡಿಸಿರುವುದು ಸರಿಯಲ್ಲ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
Vijaya Karnataka Web mla yathindra siddaramaiah on cancelation of cmc tmc tp reservation
ಸ್ಥಳೀಯ ಸಂಸ್ಥೆ ಮೀಸಲಾತಿ ರದ್ದು ಸರಿಯಲ್ಲ; ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಯತೀಂದ್ರ ಸಿದ್ದರಾಮಯ್ಯ


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದರ ಆಧಾರದಲ್ಲಿ ಈ ತೀರ್ಮಾನವನ್ನು ಹೈಕೋರ್ಟ್‌ ತೆಗೆದುಕೊಂಡಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ, ಸರಕಾರ ನಿಗದಿಪಡಿಸಿದ್ದ ಮೀಸಲಾತಿ ರದ್ದುಪಡಿಸಿರುವುದರಿಂದ ಅನವಶ್ಯಕ ರಾಜಕೀಯ ಚಟುವಟಿಕೆಗಳು ನಡೆಯುತ್ತವೆ ಎಂದು ತಿಳಿಸಿದರು.

ಕೋರ್ಟ್‌ ಆದೇಶಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು 10 ದಿನ ಕಾಲಾವಕಾಶವಿದೆ. ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು. ಮೂರೂ ವಿಭಾಗಗಳಿಗೆ ಸರಕಾರ ಹೊರಡಿಸಿದ್ದ ಮೂರು ಪ್ರತ್ಯೇಕ ಅಧಿಸೂಚನೆಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ 25 ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಆರ್‌ ದೇವದಾಸ್‌ ಅವರಿದ್ದ ಏಕಸದಸ್ಯಪೀಠ ಗುರುವಾರ ತೀರ್ಪು ಪ್ರಕಟಿಸಿತ್ತು.

ಪೌರಾಡಳಿತ ಸಂಸ್ಥೆ ಮೀಸಲಾತಿ ರದ್ದು, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಹೈಕೋರ್ಟ್‌ ತಡೆ

ರಾಜ್ಯದ 56 ನಗರಸಭೆ, 112 ಪುರಸಭೆ ಹಾಗೂ 100 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಸರಕಾರ ಮೀಸಲು ನಿಗದಿಪಡಿಸಿ ಅಕ್ಟೋಬರ್‌ 8ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಗೊಳಿಸಿತ್ತು. ಆದರೆ, ಮೇಲ್ಮನವಿ ಸಲ್ಲಿಸಲು ಹೈಕೋರ್ಟ್‌ ಅವಕಾಶ ನೀಡಿದ್ದು, ತನ್ನ ಆದೇಶಕ್ಕೆ ಪೀಠವೇ 10 ದಿನ ತಡೆಯಾಜ್ಞೆ ನೀಡಿದ್ದು, ಸದ್ಯಕ್ಕೆ ಯತಾಸ್ಥಿತಿ ಮುಂದುವರೆದಿದೆ.

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಮತ್ತೆ ವಿಘ್ನ..! ಸರಕಾರದ ಮೀಸಲು ಆದೇಶಕ್ಕೆ ಹೈಕೋರ್ಟ್‌ ತಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ