ಆ್ಯಪ್ನಗರ

ಮೈಸೂರು | ಖಾಸಗಿ ಹೋಟೆಲ್‌ನಲ್ಲಿ ಡಿಕೆಶಿ, ಸುರ್ಜೇವಾಲಾ ಭೇಟಿಯಾದ ಎಚ್‌.ವಿಶ್ವನಾಥ್‌: ಏನಾಯ್ತು ಮಾತುಕತೆ?

H Vishwanath Meets DK Shivakumar: ಎಂಎಲ್‌ಸಿ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ ಸೇರುವುದು ಖಚಿತವಾಗಿದೆ. ಅಧಿಕೃತವಾಗಿ ಪಕ್ಷ ಸೇರ್ಪಡೆಗೂ ಮುನ್ನ ಡಿ.ಕೆ.ಶಿವಕುಮಾರ್‌ ಮತ್ತು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ. ಮೂರು ತಿಂಗಳ ಹಿಂದೆಯೇ ವಿಶ್ವನಾಥ್‌ ಅವರ ಮಗ ಕಾಂಗ್ರೆಸ್‌ ಪಕ್ಷ ಸೇರಿದ್ದಾರೆ.

Edited byಹೇಮಂತ್ ಕುಮಾರ್ ಎಸ್ | Lipi 27 Jan 2023, 6:14 pm

ಹೈಲೈಟ್ಸ್‌:

  • ಹಳ್ಳಿ ಹಕ್ಕಿಯು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೆ ವೇದಿಕೆ ಸಜ್ಜು
  • ಕಾಂಗ್ರೆಸ್‌ ಪಕ್ಷದಿಂದಲೇ 40 ವರ್ಷ ರಾಜಕೀಯ ಮಾಡಿದ ಅನುಭವ
  • ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ಧಂತೆ ಪಕ್ಷ ಚೇಂಜ್‌
  • ಸಿದ್ಧಾಂತಗಳ ವಿಚಾರದಲ್ಲಿ ಸಿದ್ದರಾಮಯ್ಯ-ವಿಶ್ವನಾಥ್‌ ನಡುವೆ ಭಿನ್ನಾಭಿಪ್ರಾಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web H VIshwanath with DK Shivakumar in Mysuru
ಡಿಕೆ ಶಿವಕುಮಾರ್‌, ಸುರ್ಜೇವಾಲಾ ಭೇಟಿಯಾದ ಎಚ್‌.ವಿಶ್ವನಾಥ್‌
ಮೈಸೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ಧಂತೆ ಪಕ್ಷಾಂತರ ಪರ್ವವೂ ಶುರುವಾಗಿದೆ. ಕಳೆದ ಕೆಲವು ತಿಂಗಳಿಂದ ಬೆಂಬಲಿತ ಬಿಜೆಪಿ ಪಕ್ಷಕ್ಕೆ ವಿರುದ್ಧ ಹೇಳಿಕೆಗಳನ್ನು ನೀಡುತ್ತ, ಪಕ್ಷದ ಬದಲಿಸುವ ಸೂಚನೆ ನೀಡಿದ್ದರು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ (H Vishwanath). ಅವರು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಗೆ ವೇದಿಕೆ ಸಜ್ಜಾಗುತ್ತಿರುವುದು ಸ್ಪಷ್ಟವಾಗಿದೆ. ಶುಕ್ರವಾರ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಯಾವಾಗ ಕಾಂಗ್ರೆಸ್‌ ಸೇರಬೇಕು ಎಂಬುದರ ಬಗ್ಗ ಚರ್ಚೆ ನಡೆದಿರುವುದಾಗಿ ತಿಳಿದು ಬಂದಿದೆ. ಹಳೇ ಮೈಸೂರು ಭಾಗದಲ್ಲಿ ಕೆಲವು ಮುಖಂಡರ ಬೆಂಬಲ ಹಾಗೂ ವರ್ಚಸ್ಸು ಹೊಂದಿರುವ ವಿಶ್ವನಾಥ್‌ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದೆಂದು ಅಂದಾಜಿಸಲಾಗಿದೆ. ಯುಗಾದಿ ವೇಳೆಗೆ ಅವರು ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ ಇದೆ. ಶನಿವಾರ ವಿಶ್ವನಾಥ್‌ ಮಾಧ್ಯಮಗೋಷ್ಠಿ ಕರೆದಿದ್ದು, ಅಲ್ಲಿ ಸ್ಪಷ್ಟ ಮಾಹಿತಿ ಹೊರಬೀಳಲಿದೆ.
ಶಾದಿ ಭಾಗ್ಯ ಕೊಟ್ಟಿದ್ದಕ್ಕೆ ಸಿದ್ದರಾಮಯ್ಯಗೆ ದೌರ್ಭಾಗ್ಯ ಬಂತು: ಸಿಎಂ ಬೊಮ್ಮಾಯಿ
ಕಾಂಗ್ರೆಸ್ ನನ್ನ ತಾಯಿ:
ಮುಂದಿನ ರಾಜಕೀಯ ನಡೆಯ ಬಗ್ಗೆ ಮೌನವಹಿಸಿರುವ ವಿಶ್ವನಾಥ್ ಆಪ್ತರ ಜೊತೆ ಕೆಲವೊಂದು ವಿಚಾರ ಹಂಚಿಕೊಂಡಿದ್ದಾರೆ . ನಾನು ಯಾವುದೇ ಪಕ್ಷದಲ್ಲಿದ್ರೂ ಕಾಂಗ್ರೆಸ್ ನನ್ನ ತಾಯಿ ಎಂದು ವಿಶ್ವನಾಥ್ ಹೇಳಿಕೊಂಡಿದ್ದಾರೆ.

ನಾನು ಬಿಜೆಪಿ ಸೇರಿ ಯಾವುದೇ ಪಕ್ಷಕ್ಕೆ ಸೇರಿದವನಲ್ಲ. ನಾನು ಎಲ್ಲಾ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವೆ. ಡಿ.ಕೆ.ಶಿವಕುಮಾರ್ ಅವರು ಬನ್ನಿ ಮಾತನಾಡೋಣ ಎಂದು ಕರೆದಿದ್ದರು. ರಣದೀಪ್ ಸಿಂಗ್ ಸುರ್ಜೇವಾಲ ನನ್ನ ಅನುಭವ ಕೇಳಲು ಕರೆದಿದ್ದರು. ನಾನು 40 ವರ್ಷ ಕಾಂಗ್ರೆಸ್‌ನಲ್ಲೇ ಇದ್ದು ರಾಜಕಾರಣ ಮಾಡಿದ್ದೆ. ನಾನು ಯಾವುದಕ್ಕೂ ಕೆಡಿಸಿಕೊಳ್ಳುವುದಿಲ್ಲ. ಸಿದ್ದರಾಮಯ್ಯ ಹಾಗೂ ನನಗೂ ವೈಯುಕ್ತಿಕವಾಗಿ ಯಾವುದೇ ರೀತಿ ದ್ವೇಷವಿಲ್ಲ. ಸಿದ್ಧಾಂತಗಳ ವಿಚಾರದಲ್ಲಷ್ಟೇ ಇಬ್ಬರ ನಡುವೆ ಭಿನ್ನಾಭಿಪ್ರಾಯ ಇರುವ ಬಗ್ಗೆ ವಿಶ್ವನಾಥ್‌ ಚರ್ಚಿಸಿರುವುದಾಗಿ ತಿಳಿದು ಬಂದಿದೆ.
Leopard Captured - ಟಿ .ನರಸೀಪುರದಲ್ಲಿ ನರಭಕ್ಷಕ ಚಿರತೆ ಸೆರೆ; ಹೊಡೆದು ಸಾಯಿಸುವಂತೆ ಗ್ರಾಮಸ್ಥರ ಪಟ್ಟು
ವಿಶ್ವನಾಥ್ ಅವರ ಮಗ ಪೂರ್ವಜ್ 3 ತಿಂಗಳ ಹಿಂದೆ ಕಾಂಗ್ರೆಸ್ ಸೇರಿದ್ದಾರೆ. ಆಗಿನಿಂದಲೂ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದೆ ಹಾಗೂ ಹಳ್ಳಿಹಕ್ಕಿ ಸಹ ಕೈ ನಾಯಕರ ಮೇಲೆ ಸಾಫ್ಟ್ ಕಾರ್ನರ್ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೆಳವಣಿಗೆಗಳು ಬಿಜೆಪಿ ಪಾಳಯಕ್ಕೆ ಮುಜುಗರ ತಂದಿತ್ತು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ