ಆ್ಯಪ್ನಗರ

ನೀವು ಬೀಫ್‌ ತಿಂದರೆ ಇಡೀ ಕುರುಬ ಸಮಾಜ ತಿಂದಂತೆ ಆಗುತ್ತಾ? ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ಪ್ರಶ್ನೆ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕೊಡವರು ಬೀಫ್‌ ತಿನ್ನುತ್ತಾರೆ ಎಂಬ ಹೇಳಿಕೆ ವಿವಾದದ ರೂಪ ಪಡೆದಿದ್ದು, ಈ ಸಂಬಂಧ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್‌ ಸಿಂಹ ನೀವು ಬೀಫ್‌ ತಿಂದರೆ ಇಡೀ ಕುರುಬ ಸಮಾಜ ತಿಂದಂತೆ ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

Vijaya Karnataka Web 25 Dec 2020, 10:39 pm
ಮೈಸೂರು: ನಿಮಗೆ ಗೊತ್ತಿರುವ ಒಂದಿಬ್ಬರು ಕೊಡವರು ಗೋಮಾಂಸ ತಿನ್ನಬಹುದು. ಅದೇ ಕಾರಣಕ್ಕೆ ಇಡೀ ಕೊಡವರನ್ನು ಗೋಮಾಂಸ ತಿನ್ನುತ್ತಾರೆ ಎನ್ನುವುದು ಎಷ್ಟು ಸರಿ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಸದ ಪ್ರತಾಪ್‌ ಸಿಂಹ ಟಾಂಗ್‌ ನೀಡಿದರು.
Vijaya Karnataka Web Pratap Simha, Siddaramaiah
ಪ್ರತಾಪ್‌ ಸಿಂಹ, ಸಿದ್ದರಾಮಯ್ಯ (ಸಂಗ್ರಹ ಚಿತ್ರ)


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀವು ಗೋಮಾಂಸ ತಿನ್ನುತ್ತೀರಿ ಅಂತ ಇಡೀ ಕುರುಬ ಸಮಾಜವೇ ಬೀಫ್‌ ತಿನ್ನುತ್ತದೆ ಎಂದು ಹೇಳಲು ಸಾಧ್ಯವೇ? ಎಂದು ಪ್ರಶ್ನಿಸಿದರು. ಇಡೀ ದೇಶದ ಹಿಂದುಗಳು ಗೋವನ್ನು ಮಾತೆಯಂತೆ ಪೂಜಿಸುತ್ತಾರೆ. ಇದರ ಬಗ್ಗೆ ಸಿದ್ದರಾಮಯ್ಯ ವಿವೇಚನೆ ಇಲ್ಲದೆ ಮಾತನಾಡುತ್ತಿದ್ದಾರೆ. ಆತ್ಮದ್ರೋಹದ ಮಾತುಗಳನ್ನು ಆಡಲು ಕಾಂಗ್ರೆಸ್‌ನವರಿಂದ ಮಾತ್ರ ಸಾಧ್ಯ ಎಂದು ವ್ಯಂಗ್ಯವಾಡಿದರು.

ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಸಿದ್ದರಾಮಯ್ಯ ಅವರಿಗೆ ತಮ್ಮ ತಪ್ಪಿನ ಅರಿವಾಗಿ ಅದನ್ನು ತಪ್ಪಾಗಿ ಅರ್ಥೈಸಲಾಗಿದೆ ಅಂತ ಸಮರ್ಥನೆ ಮಾಡಿಕೊಂಡಿದ್ದಾರೆ. ಆದರೆ, ಇನ್ಮುಂದೆ ಕೊಡವರಿಗೆ ನೋವಾಗುವಂತೆ ಮಾತನಾಡಬೇಡಿ ಎಂದರು.

ಮೈಸೂರಿನ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮೇಯರ್‌ ಸ್ಥಾನ ಬೇಕೇ ಬೇಕು: ಪ್ರತಾಪ್‌ ಸಿಂಹ

ಮಾಸ್ಕ್‌ ಹೆಸರಲ್ಲಿ ತೊಂದರೆ ಕೊಡಬೇಡಿ
ಮಾರ್ಚ್‌ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೇ ಇದ್ದಾರೆ. ಜನರನ್ನು ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸುತ್ತೀರಾ? ಇನ್ನಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್‌ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.

ಸಗಣಿ ಬಾಚಿ-ಸ್ವಚ್ಚಗೊಳಿಸಿ ಗೋವುಗಳ ಪೂಜೆ ಮಾಡಿ ಅಟಲ್‌ ಜೀ ಹುಟ್ಟುಹಬ್ಬವನ್ನು ಆಚರಿಸಿದ ಪ್ರತಾಪ್‌ ಸಿಂಹ

ಎಲ್ಲಾ ಕಡೆ ಕೊರೊನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೆ ಜನರನ್ನು ಹೆಚ್ಚು ದಿನ ನಿರ್ಬಂಧಿಸಲು ಸಾಧ್ಯವಿಲ್ಲ. ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್‌ ಕಡ್ಡಾಯ ಮಾಡಿ, ಆದರೆ ಮಾಸ್ಕ್‌ ಹೆಸರಿನಲ್ಲಿ ಕಾರು, ಬೈಕ್‌ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ ಎಂದರು.

ಮಾಸ್ಕ್ ಹೆಸರಿನಲ್ಲಿ ಜನರನ್ನು ಲೂಟಿ ಮಾಡುವ ಕೆಲಸ ನಿಲ್ಲಿಸಿ : ಸಂಸದ ಪ್ರತಾಪ್ ಸಿಂಹ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ