ಆ್ಯಪ್ನಗರ

ಆರೋಪಿಗಳ ಬೆಂಬಲಿಸುವ ಜಮೀರ್‌ಗೆ ಸಿದ್ದರಾಮಯ್ಯ ಕೃಪಾಕಟಾಕ್ಷ: ಪ್ರತಾಪ್ ಸಿಂಹ ಲೇವಡಿ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ಪಡಿತರ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಜಮೀರ್‌ ಅಹಮದ್‌ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದಾರೆ. ಜಮೀರ್‌ ಅವರ ಈ ಮನಸ್ಥಿತಿ ಹಿಂದೆ ಸಿದ್ದರಾಮಯ್ಯ ಕೃಪಾಕಟಾಕ್ಷ ಇದೆ ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯಗೆ ಜಮೀರ್‌ ವೈಸ್‌ ಕ್ಯಾಪ್ಟ್‌ನ್‌ ಎಂದು ವ್ಯಂಗ್ಯವಾಡಿದ್ದಾರೆ.

Edited byಅವಿನಾಶ ವಗರನಾಳ | Lipi 29 Apr 2022, 3:48 pm

ಹೈಲೈಟ್ಸ್‌:


  • ಜಮೀರ್‌ ಅಹಮದ್‌, ಸಿದ್ದರಾಮಯ್ಯ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ
  • ʼಗಲಭೆ ಆರೋಪಿಗಳ ಬೆಂಬಲಿಸುವುದು ಜಮೀರ್‌ ಅಹಮದ್‌ ಮನಸ್ಥಿತಿʼ
  • ಆ ಮನಸ್ಥಿತಿಗೆ ಸಿದ್ದರಾಮಯ್ಯ ಕೃಪಾಕಟಾಕ್ಷ ಇದೆ ಎಂದು ಪ್ರತಾಪ್‌ ಸಿಂಹ ಕಿಡಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Pratap Simha
ಮೈಸೂರು: ಗಲಭೆ ಆರೋಪಿಗಳಿಗೆ ಬೆಂಬಲ ನೀಡುವುದು ಜಮೀರ್‌ ಅಹಮದ್‌ ಮನಸ್ಥಿತಿ. ಇದು ಸಿದ್ದರಾಮಯ್ಯ ಅವರ ಕೃಪಾಕಟಾಕ್ಷದಿಂದಲೇ ಆಗಿದೆ ಎಂದು ಸಂಸದ ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಹುಬ್ಬಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ಶಾಸಕ ಜಮೀರ್ ಅಹಮದ್ ಪಡಿತರ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ ಅವರು, ಇದು ಸಿದ್ದರಾಮಯ್ಯ ಕೃಪಾಕಟಾಕ್ಷದಿಂದಲೇ ಆಗಿದೆ. ಈ ಹಿಂದೆ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯಲ್ಲಿ ಕೂಡ ಇವರು ಆರೋಪಿಗಳ ಪರ ಇದ್ದರು. ಕಾಂಗ್ರೆಸ್ ಪಕ್ಷದಲ್ಲಿ ಹಿಂದೂ ಪರ ಇರುವ ಒಬ್ಬ ನಾಯಕನೂ ಇಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ವೈಸ್ ಕ್ಯಾಪ್ಟನ್ ಜಮೀರ್ ಅಹಮದ್‌ ಆದ್ರೆ, ಡಿಕೆ ಶಿವಕುಮಾರ್ ವೈಸ್ ಕ್ಯಾಪ್ಟನ್ ಮೊಹಮದ್‌ ಹ್ಯಾರಿಸ್‌ ನಲಪಾಡ್. ಇವರಿಬ್ಬರ ಮೂಲಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ಮುಸ್ಲಿಂ ಹಾಗೂ ಕ್ರೈಸ್ತರ ಓಲೈಕೆಗೆ ನಿಂತಿದ್ದಾರೆ. ಪೊಲೀಸರ ಮೇಲೆ ನಡೆದ ಎಲ್ಲಾ ದೌರ್ಜನ್ಯದ ಹಿಂದೆ ಸಿದ್ದರಾಮಯ್ಯ ಇದ್ದಾರೆ. ದನಗಳ್ಳನ ಹಿಡಿದ ಪೊಲೀಸರನ್ನು ಅಮಾನತು ಮಾಡುತ್ತಾರೆ. ದನಗಳ್ಳನಿಗೆ ಪರಿಹಾರ ಕೊಡಿಸುತ್ತಾರೆ. ಜಮೀರ್ ಅಹಮದ್‌ ಅಂತಹವರಿಂದ ಬೇರೆ ಏನು ನಿರೀಕ್ಷೆ ಮಾಡಬಹುದು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ನಡೆದ ಗಲಭೆಗಳೆಲ್ಲವೂ ಕಾಂಗ್ರೆಸ್‌ ಪ್ರೇರಿತ ಜಿಹಾದ್ ! ಬಿಜೆಪಿ ಆರೋಪ
ಇನ್ನು, ಪಿಎಸ್‌ಐ ಪರೀಕ್ಷಾ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, ಪರೀಕ್ಷೆಯಲ್ಲಿ ಯಾರು ಅಕ್ರಮವೆಸಗಿದ್ದಾರೆ ಅವರ ಮೇಲೆ ಮಾತ್ರ ಕ್ರಮ ಕೈಗೊಳ್ಳಿ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.

ಒಂದು ಹೆಣ್ಣು ಮಗಳನ್ನ ಹಿಡಿಯೋಕೆ 20 ದಿನ ಬೇಕಂದ್ರೆ ವೈಫಲ್ಯ ಅಲ್ವಾ : ಸಿದ್ದರಾಮಯ್ಯ ಆಕ್ರೋಶ
ಪ್ರಿಯಾಂಕ್‌ ಖರ್ಗೆ ವಿರುದ್ಧ ವಾಗ್ದಾಳಿ
ಸಿಐಡಿ ನೋಟಿಸ್‌ಗೆ ಶಾಸಕ ಪ್ರಿಯಾಂಕ್ ಖರ್ಗೆ ಉತ್ತರ ನೀಡದ ಕುರಿತು ಮಾತನಾಡಿದ ಪ್ರತಾಪ್ ಸಿಂಹ, ಪ್ರಿಯಾಂಕ್ ಖರ್ಗೆ ಹಿಟ್ ಅಂಡ್ ರನ್ ನಾಯಕ. ಉಗುಳಿ ಓಡಿ ಹೋಗಿದ್ದಾರೆ ಅಷ್ಟೇ, ಆತ ಹೇಳಿಕೆ ಶೂರ. ಆತನನ್ನು ಗಂಭೀರವಾಗಿ ಪರಿಗಣಿಸಬೇಡಿ. ಸಾಕ್ಷಿ ಇದ್ದಿದ್ದರೆ ಕೊಡಲು ಏಕೆ ಭಯ. ಹಿಂದೆ ಬಿಟ್ ಕಾಯಿನ್ ವಿಚಾರದಲ್ಲೂ ಇದೇ ರೀತಿ ಮಾಡಿದ್ದರು. ಸುಖಾ ಸುಮ್ಮನೆ ನಮ್ಮನ್ನು ಟಾರ್ಗೆಟ್ ಮಾಡುತ್ತಾರೆ ಎಂದು ಆರೋಪ ಮಾಡುತ್ತಾರೆ. ಸಾಕ್ಷಿ ಕೊಡಿ ಅಂದ್ರೆ ಹಿಟ್ ಅಂಡ್ ರನ್ ಮಾಡುತ್ತಾರೆ. ಇವರಿಂದ ಬೇರೆ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಪಿಎಸ್‌ಐ ಪರೀಕ್ಷೆ ಅಕ್ರಮ : ರಾಜಕೀಯ ಮೇಲಾಟಕ್ಕೆ ಕಾರಣವಾಗಿರುವ ಸಿಐಡಿ ನೋಟಿಸ್‌ !
ಮೈಸೂರಿನಲ್ಲಿ ಫ್ಲೆಕ್ಸ್‌ ಬ್ಯಾನ್‌ ಮಾಡಿ!
ಹಲವು ದಿನಗಳಿಂದ ಮೈಸೂರಿನಲ್ಲಿ ಫ್ಲೆಕ್ಸ್ ಅಳವಡಿಸಿ ನಗರವನ್ನು ಹಾಳು ಮಾಡ್ತಿದ್ದಾರೆ. ರಾಜಕೀಯ ಮುಖಂಡರು ಹುಟ್ಟುಹಬ್ಬ, ರಾಜಕೀಯ ಸಮಾರಂಭಕ್ಕೆ ಫ್ಲೆಕ್ಸ್ ಹಾಕ್ತಿದ್ದಾರೆ. ಇದರಿಂದ ಮೈಸೂರು ನಗರ ಗಬ್ಬೆದ್ದು ಹೋಗುತ್ತಿದೆ. ಬೆಂಗಳೂರು ನಗರದಲ್ಲೇ ಫ್ಲೆಕ್ಸ್ ಗಳನ್ನು ತೆಗದು ಹಾಕ್ತಿದ್ದಾರೆ. ಆದರೆ, ಮೈಸೂರಿನಲ್ಲಿ ಯಾಕೆ ಅದಕ್ಕೆ ಅವಕಾಶ ಕೊಟ್ಟಿದ್ದಾರೆ. ಯಾವುದೇ ರಾಜಕೀಯ ಪಕ್ಷಗಳು ಫ್ಲೆಕ್ಸ್ ಹಾಕಿದ್ರೂ ದಂಡ ಹಾಕಿ. ಬಿಜೆಪಿಯವರೂ ಫ್ಲೆಕ್ಸ್ ಹಾಕಿದ್ರೂ ಕೂಡಾ ದಂಡ ಹಾಕಬೇಕು ಎಂದು ಪ್ರತಾಪ್‌ ಸಿಂಹ ಒತ್ತಾಯಿಸಿದ್ದಾರೆ.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ