ಆ್ಯಪ್ನಗರ

ಇಮ್ಮಾವು ರೈತರ ಪ್ರತಿಭಟನೆಗೆ ಪ್ರತಾಪ್‌ ಸಿಂಹ ಬೆಂಬಲ..! 3-4 ದಿನಗಳಲ್ಲಿ ಸಮಸ್ಯೆ ಬಗೆಹರಿಸುವ ಭರವಸೆ

ನಂಜನಗೂಡು ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಸಂಸದ ಪ್ರತಾಪ್‌ ಸಿಂಹ ಬೆಂಬಲ ನೀಡಿದ್ದಾರೆ. ಏಷಿಯನ್‌ ಪೇಂಟ್ಸ್‌ ಕಾರ್ಖಾನೆಯ ಆಡಳಿತ ಮಂಡಳಿ ಜೊತೆ ಕೈಗಾರಿಕಾ ಸಚಿವರ ಸಮ್ಮುಖದಲ್ಲಿ ಮಾತನಾಡಿ ರೈತರ ಸಮಸ್ಯೆಯನ್ನು ಬಗೆಹರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

Vijaya Karnataka Web 4 Jan 2021, 11:41 pm
ನಂಜನಗೂಡು (ಮೈಸೂರು): ತಾಲೂಕಿನ ಇಮ್ಮಾವು ಕೈಗಾರಿಕಾ ಪ್ರದೇಶದಲ್ಲಿರುವ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್‌ಸಿಂಹ ಸೋಮವಾರ ಭೇಟಿ ಮಾಡಿ ಭೂ ಸಂತ್ರಸ್ಥರ ಹೋರಾಟಕ್ಕೆ ಬೆಂಬಲ ಸೂಚಿಸಿದರು.
Vijaya Karnataka Web PRATAP SIMHA
ಇಮ್ಮಾವು ಪ್ರತಿಭಟನಾಕಾರರ ಸಭೆಯಲ್ಲಿ ಸಂಸದ ಪ್ರತಾಪ್‌ ಸಿಂಹ


ಧರಣಿ ನಿರತರನ್ನು ಭೇಟಿ ಮಾಡಿ ಸಮಾಲೋಚಿಸಿದ ಅವರು ಬಳಿಕ ಮಾತನಾಡಿ, ಕಾರ್ಖಾನೆ ಆರಂಭಕ್ಕೆ ಭೂಮಿ ನೀಡಿರುವ ಕುಟುಂಬದ ಸದಸ್ಯರಿಗೆ ಇನ್ನು ಉದ್ಯೋಗ ನೀಡುವಿಕೆಗೆ ಸಂಬಂಧಿಸಿದಂತೆ ಇನ್ನು ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಕೈಗಾರಿಕಾ ಸಚಿವರ ಸಮ್ಮುಖ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರಿಗೆ ಏಷಿಯನ್‌ ಪೇಂಟ್ಸ್‌ ಕಾರ್ಖಾನೆ ಮುಂಭಾಗ ರೈತರು ನಡೆಸುತ್ತಿರುವ ಪ್ರತಿಭಟನೆಯ ಸಂಗತಿಯನ್ನು ಪ್ರಸ್ತಾಪಿಸಿದಾಗ ಜಿಲ್ಲಾಡಳಿತ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಧಿಕಾರಿಗಳ ಮೂಲಕ ಪಡೆದುಕೊಂಡಿರುವ ವರದಿಯಲ್ಲೂ ರೈತರು ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದೆ ಎಂದು ಖಚಿತವಾಗಿದೆ ಎಂದು ಹೇಳಿದ್ದಾರೆ ಎಂದರು.

ಮೈಸೂರಿನಿಂದ ದಿಲ್ಲಿ, ಮುಂಬೈಗೆ ಶೀಘ್ರ ವಿಮಾನ ಸಂಚಾರ: ಸಂಸದ ಪ್ರತಾಪ್‌ ಸಿಂಹ

ಒಪ್ಪಂದದ ಪ್ರಕಾರ ಭೂ ನೀಡಿರುವ ಕುಟುಂಬದವರಿಗೆ ಉದ್ಯೋಗ ಕೊಡಬೇಕಿದೆ. ಹೀಗಾಗಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಕೈಗಾರಿಕಾ ಸಚಿವರ ಸಮ್ಮುಖ ಏಷ್ಯನ್‌ ಪೇಂಟ್ಸ್‌ ಆಡಳಿತ ಮಂಡಳಿಯ ಮುಖ್ಯಸ್ಥರನ್ನು ಕರೆಸಿ ಸಂಧಾನದ ಮೂಲಕ ಸಂತ್ರಸ್ಥರಿಗೆ ಉದ್ಯೋಗ ಕೊಡುವಂತೆ ಸೂಚನೆ ನೀಡಲಾಗುವುದು. ಒಂದು ವೇಳೆ ಆಡಳಿತ ಮಂಡಳಿಯವರು ಒಪ್ಪದಿದ್ದಲ್ಲಿ ಕಾನೂನು ರೀತಿ ಕ್ರಮ ಜರುಗಿಸುವುದಾಗಿ ಅವರು ತಿಳಿಸಿದ್ದಾರೆ ಎಂದು ಹೇಳಿದರು.

ನೀವು ಬೀಫ್‌ ತಿಂದರೆ ಇಡೀ ಕುರುಬ ಸಮಾಜ ತಿಂದಂತೆ ಆಗುತ್ತಾ? ಸಿದ್ದರಾಮಯ್ಯಗೆ ಪ್ರತಾಪ್‌ ಸಿಂಹ ಪ್ರಶ್ನೆ

ಇನ್ನು, ಕಾರ್ಖಾನೆ ನನ್ನ ಮತ ಕ್ಷೇತ್ರದ ವ್ಯಾಪ್ತಿಗೆ ಬರದಿದ್ದರೂ ನಂಜನಗೂಡು ಮೈಸೂರು ಜಿಲ್ಲೆಗೆ ಸೇರಿದ್ದು, ಕೈಗಾರಿಕಾ ಸಚಿವರ ಸೂಚನೆ ಮೇರೆಗೆ ಸಮಸ್ಯೆ ಪರಿಹರಿಸುವ ಸಲುವಾಗಿ ಭೇಟಿ ನೀಡಿದ್ದೇನೆ. ಇನ್ನು, ಉದ್ಯೋಗದ ಭರವಸೆಯನ್ನು ನಂಬಿ ಕಾರ್ಖಾನೆ ಆರಂಭಕ್ಕೆ ಭೂಮಿ ನೀಡಿರುವವರಿಗೆ ಉದ್ಯೋಗ ಕೊಡಬೇಕು ಎಂಬುದು ನಮ್ಮ ಒತ್ತಾಯವೂ ಆಗಿದ್ದು, ರೈತರ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದರು.

ಮೈಸೂರು: ಇನ್ನೆರಡು ವರ್ಷದಲ್ಲಿ ಮಲ್ಟಿ ಮಾಡಲ್‌ ಲಾಜಿಸ್ಟಿಕ್‌ ಪಾರ್ಕ್ ಆರಂಭ

ಈ ಸಂದರ್ಭದಲ್ಲಿ ರೈತ ಸಂಘದ ಕಾರ್ಯದರ್ಶಿ ಹೆಜ್ಜಿಗೆ ಪ್ರಕಾಶ್‌, ಪಿ.ಮರಂಕಯ್ಯ, ಸಚಿನ್‌, ಪ್ರಮೋದ್‌ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ