ಆ್ಯಪ್ನಗರ

ಮೈಸೂರಿನಲ್ಲಿ ಶೂಟೌಟ್: ಮನಿ ಡಬ್ಲಿಂಗ್‌ನಲ್ಲಿ ತೊಡಗಿದ್ದ ಮುಂಬಯಿ ಗ್ಯಾಂಗ್‌ಸ್ಟರ್ ಖತಂ

ಶೂಟೌಟ್ ಬಳಿಕ ಆರೋಪಿಗಳು ಗನ್ ಸಮೇತ ಪರಾರಿಯಾಗಿದ್ದಾರೆಂದು ತಿಳಿದು ಬಂದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Vijaya Karnataka Web 16 May 2019, 3:12 pm
ಮೈಸೂರು: ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ಓರ್ವ ಆರೋಪಿ ಸಾವನ್ನಪ್ಪಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ.

ಇಲ್ಲಿಯ ವಿಜಯನಗರ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರ ಹೊರ ಭಾಗದಲ್ಲಿ ಈ ಶೂಟೌಟ್ ನಡೆದಿದೆ. ಮುಂಬಯಿ ಮೂಲದ ನಾಲ್ವರು ಮನಿ ಡಬ್ಲಿಂಗ್ ದಂಧೆಯಲ್ಲಿ ತೊಡಗಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಪೊಲೀಸರು, ಆರೋಪಿಗಳನ್ನು ಹಿಡಿಯಲು ಫೈರಿಂಗ್ ಮಾಡಿದ್ದಾರೆ. ಈ ವೇಳೆ ಮುಂಬಯಿ ಮೂಲದ ಗ್ಯಾಂಗ್‌ಸ್ಟರ್, ದಂಧೆಕೋರನೊಬ್ಬ ಸಾವನ್ನಪ್ಪಿದ್ದರೆ, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ಶೂಟೌಟ್ ಬಳಿಕ ಆರೋಪಿಗಳು ಗನ್ ಸಮೇತ ಪರಾರಿಯಾಗಿದ್ದಾರೆಂದು ತಿಳಿದು ಬಂದಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಚೆಕ್ ಪೋಸ್ಟ್‌ಗಳಲ್ಲಿ ಅಲರ್ಟ್ ಆಗಿರುವಂತೆ ಸಿಬ್ಬಂದಿಗೆ ಪೊಲೀಸ್ ಇಲಾಖೆ ಸಂದೇಶ ರವಾನಿಸಿದೆ.

ಪೊಲೀಸರು ಆರೋಪಿಗಳು ಬಳಸಿದ್ದ ಕಾರ್‌ನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ ಮೈಸೂರಿನ ಮಂಡಿಮೊಹಲ್ಲಾ ನಿವಾಸಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

ನಕಲಿ ನೋಟು ಚಲಾವಣೆ ಮತ್ತು ನಿಷೇಧಿತ ನೋಟುಗಳ ವಿನಿಮಯ ದಂಧೆಯಲ್ಲಿ ತೊಡಗಿದ್ದ ಗ್ಯಾಂಗ್ ಮೇಲೆ ಇಂದು ಮುಂಜಾನೆ 9.15ರ ಸುಮಾರಿಗೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಶೂಟೌಟ್ ನಡೆದಿದ್ದು, ಓರ್ವ ಆರೋಪಿ ಹತನಾಗಿದ್ದಾನೆ ಎಂದು ಪೊಲೀಸ್ ಆಯುಕ್ತ ಕೆ.ಟಿ.ಬಾಲಕೃಷ್ಣ ಅವರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ