ಆ್ಯಪ್ನಗರ

ಕೊಲೆ ಆರೋಪಿ ಬಿಡುಗಡೆ: ಹಾರ ಹಾಕಿ ಸ್ವಾಗತ !

ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಮುಖ ಆರೋಪಿ ಅಬೀದ್‌ ಪಾಷಗೆ ಜಾಮೀನು ಸಿಕ್ಕಿದೆ. ಜೈಲಿನಿಂದ ಹೊರಬಂದ ಆರೋಪಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Vijaya Karnataka 23 Feb 2018, 5:00 am

ವಿಕ ಸುದ್ದಿಲೋಕ ಮೈಸೂರು

ಬಿಜೆಪಿ ಕಾರ್ಯಕರ್ತ ರಾಜು ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಪ್ರಮುಖ ಆರೋಪಿ ಅಬೀದ್‌ ಪಾಷಗೆ ಜಾಮೀನು ಸಿಕ್ಕಿದೆ. ಜೈಲಿನಿಂದ ಹೊರಬಂದ ಆರೋಪಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಮೈಸೂರು ಜಿಲ್ಲಾ ನ್ಯಾಯಾಲಯ ಆರೋಪಿಗೆ ಜ.27ರಂದು ಜಾಮೀನು ಮಂಜೂರು ಮಾಡಿತ್ತು. ಆದರೆ, ಷರತ್ತುಗಳನ್ನು ಪೂರೈಸದ ಪರಿಣಾಮ ಬಿಡುಗಡೆ ವಿಳಂಬವಾಗಿತ್ತು. ಮೂರು ದಿನಗಳ ಹಿಂದೆ ಆರೋಪಿ ಜೈಲಿನಿಂದ ಹೊರಗೆ ಬಂದಾಗ ಅಭಿಮಾನಿಗಳು ಹೂ ಮಾಲೆ ಹಾಕಿ ಬರಮಾಡಿಕೊಂಡಿದ್ದಾರೆ. ಪಾಷನನ್ನು ಮುತ್ತಿಕ್ಕಿದ ಕೆಲವರು ಸೆಲ್ಫಿ ತೆಗೆಸಿಕೊಂಡು, ಘೋಷಣೆ ಕೂಗಿದ್ದಾರೆ. ಹುಣಸೂರಿನಲ್ಲಿರುವ ಮನೆಗೆ ತೆರಳಿದ ಆರೋಪಿಗೆ ಕುಟುಂಬದ ಸದಸ್ಯರು ಪ್ರವೇಶ ನಿರಾಕರಿಸಿದ್ದಾರೆ. ಪಾಷ ಮನೆಗೆ ಭೇಟಿ ನೀಡಿದ ಪೊಲೀಸರು ಕುಟುಂಬದ ಸದಸ್ಯರ ಹೇಳಿಕೆ ಪಡೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ