ಆ್ಯಪ್ನಗರ

ಕೊಲೆ ಪ್ರಕರಣ: 6 ಮಂದಿಗೆ ಜೀವಾವಧಿ ಶಿಕ್ಷೆ

ರೌಡಿ ಶೀಟರ್‌ ಕರಿಯಪ್ಪ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಎಂಟು ವರ್ಷದ ಹಿಂದಿನ ಕೊಲೆ ಪ್ರಕರಣದ ಆರೋಪಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ.

Vijaya Karnataka 19 Mar 2019, 5:00 am
ಮೈಸೂರು: ರೌಡಿ ಶೀಟರ್‌ ಕರಿಯಪ್ಪ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಎಂಟು ವರ್ಷದ ಹಿಂದಿನ ಕೊಲೆ ಪ್ರಕರಣದ ಆರೋಪಿಗಳು ಶಿಕ್ಷೆಗೆ ಗುರಿಯಾಗಿದ್ದಾರೆ.
Vijaya Karnataka Web murder case 6 people sentenced to life imprisonment
ಕೊಲೆ ಪ್ರಕರಣ: 6 ಮಂದಿಗೆ ಜೀವಾವಧಿ ಶಿಕ್ಷೆ


ಮೈಸೂರಿನ ಅಶೋಕ್‌, ಹೇಮಂತ್‌, ಮಂಜೇಶ್‌, ಪ್ರವೀಣ್‌, ರಮೇಶ್‌ ಮತ್ತು ಸೂರಜ್‌ಗೆ ಜೀವಾವಧಿ ಶಿಕ್ಷೆಯೊಂದಿಗೆ ತಲಾ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ತೊಣಚಿಕೊಪ್ಪಲು ಬಡಾವಣೆಯ ಬಿಸಿಲು ಮಾರಮ್ಮನ ದೇವಸ್ಥಾನದ ಹತ್ತಿರದ ಮನೆಯಲ್ಲಿ 2010ರ ಅಕ್ಟೋಬರ್‌ 3ರಂದು ಪಡುವಾರಹಳ್ಳಿಯ ನಿವಾಸಿ, ರೌಡಿ ಶೀಟರ್‌ ಕರಿಯಪ್ಪನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಸರಸ್ವತಿಪುರಂ ಠಾಣೆ ಪೊಲೀಸರು, 11 ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅದರಲ್ಲಿ ದೇವು ಮತ್ತು ವಿಜಯ್‌ ಕೊಲೆಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ.ಜಿ.ಕುರುವಟ್ಟಿ ಅವರು, ಆರು ಮಂದಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಉಳಿದಂತೆ ಆರೋಪ ಸಾಬೀತಾಗದ ಹಿನ್ನೆಲೆಯಲ್ಲಿ ಚಂದ್ರು, ಸ್ವಾಮಿ ಮತ್ತು ಸುನೀಲ್‌ನನ್ನು ಖುಲಾಸೆಗೊಳಿಸಲಾಗಿದೆ. ಸರಕಾರದ ಪರವಾಗಿ ಆನಂದ್‌ ಕುಮಾರ್‌ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ