ಆ್ಯಪ್ನಗರ

ಪತಿಯಿಂದಲೇ ಪತ್ನಿ ಕೊಲೆ

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

Vijaya Karnataka 29 Jun 2019, 5:00 am
ತಿ.ನರಸೀಪುರ: ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಪತಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೈಯಂಬಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
Vijaya Karnataka Web murder of wife from husband
ಪತಿಯಿಂದಲೇ ಪತ್ನಿ ಕೊಲೆ


ತಾಲೂಕಿನ ಕೈಯಂಬಳ್ಳಿ ಗ್ರಾಮದ ಶಿವಮ್ಮ(40) ಎಂಬುವವರೇ ಪತಿ ಎಸ್‌.ಡಿ.ಜಯಕೃಷ್ಣನಿಂದ ಕೊಲೆಯಾದ ಗೃಹಿಣಿ

ನಾಗಲಗೆರೆ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಶಿವಮ್ಮ ಹಾಗೂ ಎಸ್‌.ಡಿ.ಜಯಕೃಷ್ಣ ಪ್ರೇಮ ವಿವಾಹವಾಗಿ ಒಂದೂವರೆ ದಶಕದಿಂದ ಕೈಯಂಬಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಆರಂಭದಿಂದಲೂ ಇಬ್ಬರ ನಡುವೆಯೂ ಹೊಂದಾಣಿಕೆ ಇಲ್ಲದ್ದರಿಂದ ನಿತ್ಯವೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.

ಕಳೆದ ಹದಿನೈದು ದಿನಗಳಿಂದ ಶಿವಮ್ಮ ಜಯಕೃಷ್ಣನನ್ನು ದೂರವಿರಿಸಿದ್ದರಿಂದ ಗುರುವಾರ ಸಂಜೆ ಕೈಯಂಬಳ್ಳಿ ಗ್ರಾಮಕ್ಕೆ ಆಗಮಿಸಿ ಆಕೆಯೊಂದಿಗೆ ಜಗಳ ಆರಂಭಿಸಿದ್ದಾನೆ. ಗಲಾಟೆ ವಿಕೋಪಕ್ಕೆ ತಿರುಗಿ ಜಯಕೃಷ್ಣ , ಚಾಕುವಿನಿಂದ ಶಿವಮ್ಮನ ಎದೆ ಹಾಗೂ ಬೆನ್ನಿಗೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮೈಸೂರಿನ ಕೆ.ಆರ್‌.ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಶವವನ್ನು ಕುಟುಂಬದ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಸ್ಥಳಕ್ಕೆ ಪೊಲೀಸ್‌ ಸರ್ಕಲ್‌ ಎಂ.ಆರ್‌. ಲವ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಎಸ್‌ಐ ಅಜರುದ್ಧೀನ್‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ