ಆ್ಯಪ್ನಗರ

ಬೈಕ್‌ಗಳ ಡಿಕ್ಕಿ : ಯುವಕ ಸಾವು, ಮೂವರಿಗೆ ಗಾಯ

ರಾಣಾಪ್ರತಾಪ ಸಿಂಹ ರಸ್ತೆಯಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಯುವಕನೊಬ್ಬ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

Vijaya Karnataka 28 Apr 2018, 5:00 am

ಮೈಸೂರು : ರಾಣಾಪ್ರತಾಪ ಸಿಂಹ ರಸ್ತೆಯಲ್ಲಿ ಗುರುವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಯುವಕನೊಬ್ಬ ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.

ನಗರದ ರಾಮಾನುಜ ರಸ್ತೆ ನಿವಾಸಿ ಮಂಜುನಾಥ್‌ ಅವರ ಮಗ ಎಂ.ಎಸ್‌.ಶಶಾಂಕ್‌(20) ಮೃತಪಟ್ಟವರು.

ಶುಕ್ರವಾರ ಶಶಾಂಕ್‌, ಜೆ.ಸಿ. ಲೇಔಟ್‌ ನಿಂದ ತನ್ನ ಸ್ನೇಹಿತನೊಂದಿಗೆ ಪಲ್ಸರ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮುಂಭಾಗದಿಂದ ಬಂದ ಸ್ಕೂಟರ್‌ಗೆ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಶಶಾಂಕ್‌ ಮೃತಪಟ್ಟಿದ್ದು, ಶಶಾಂಕ್‌ ಸ್ನೇಹಿತ ಪುನೀತ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆತ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಿದ್ದಾರ್ಥನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ