ಆ್ಯಪ್ನಗರ

ಮೈಸೂರು ದಸರಾ ಹೈಲೈಟ್ಸ್‌: ತಾಯಿ ಬಳಿ ಮೂರು ಬೇಡಿಕೆ, ಪ್ರವಾಸಿ ತಾಣಗಳ ನಿರ್ಬಂಧ ತೆರವು, ಖಾಸಗಿ ದರ್ಬಾರ್‌!

ಕನ್ನಡ ಕಣ್ಣಾಗಿರಬೇಕೇ ಹೊರತು ಕನ್ನಡಕವಾಗಬಾರದು. ಜಗತ್ತಿನಲ್ಲಿ ಬದುಕುವ ಭಾಷೆ ಇಂಗ್ಲಿಷ್ ಆಗಿದೆ. ಎರಡರ ನಡುವೆ ಸಮತೋಲನವಾಗಬೇಕು. ಇಂದು ನನಗಾಗಿ ನಾನು ಏನನ್ನೂ ಚಾಮುಂಡಿ ದೇವಿಯ ಬಳಿ ಬೇಡಿಲ್ಲ. ಕೊರೊನಾ ಲಸಿಕೆ ಬೇಗ ಬರಲಿ, ಕೊರೊನಾ ಸಂಪೂರ್ಣ ನಿವಾರಣೆಯಾಗಲಿ, ಜಲಪ್ರವಾಹ ಕಡಮೆಯಾಗಲಿ ಎಂದು ದೇವರ ಬಳಿ ಬೇಡಿದ್ದೇನೆ ಎಂದು ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

Vijaya Karnataka Web 17 Oct 2020, 12:52 pm
ಮೈಸೂರು: ಐತಿಹಾಸಿಕ, ನಾಡಹಬ್ಬ, ಮೈಸೂರಿನ 410ನೇ ದಸರೆ ಮಹೋತ್ಸವಕ್ಕೆ ಚಾಲನೆ ದೊರಕಿದೆ. 7.55ರ ಬ್ರಾಹ್ಮಿ ಶುಭ ಲಗ್ನದಲ್ಲಿ ಕೊರೊನಾ ವಾರಿಯರ್‌ ಆದ ಡಾ.ಸಿಎನ್‌ ಮಂಜುನಾಥ್‌ ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚೆನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು. ಇನ್ನು ಉದ್ಘಾಟನೆಗೂ ಮುನ್ನ ಇಂದು ಬೆಳಗಿನ ಜಾವದಿಂದಲೇ ಚಾಮುಂಡೇಶ್ವರಿ ತಾಯಿಗೆ ಗೆ ರುದ್ರಾಭಿಷೇಕ, ಪಂಚಾಮೃತಭಿಷೇಕ, ಮಹಾನ್ಯಾಸ ಸೇರಿದಂತೆ ವಿವಿಧ ಪೂಜೆಗಳು ನಡೆದವು.. ಈ ಬಾರಿ ತಾಯಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಅಲಂಕಾರ ಸಹ ನಡೆದಿದೆ. ಇನ್ನು ಮಂಜುನಾಥ್‌ ಅವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಹಲವು ಜನಪ್ರತಿನಿಧಿಗಳು ಸಾಥ್‌ ನೀಡಿದರು.
Vijaya Karnataka Web mysore dasara 2020 morning highlights
ಮೈಸೂರು ದಸರಾ ಹೈಲೈಟ್ಸ್‌: ತಾಯಿ ಬಳಿ ಮೂರು ಬೇಡಿಕೆ, ಪ್ರವಾಸಿ ತಾಣಗಳ ನಿರ್ಬಂಧ ತೆರವು, ಖಾಸಗಿ ದರ್ಬಾರ್‌!


ತಾಯಿ ಬಳಿ ಮೂರು ಬೇಡಿಕೆ ಇಟ್ಟ ಉದ್ಘಾಟಕರು!

ಇನ್ನು ಉದ್ಘಾಟನೆ ಬಳಿಕ ಮಾತನಾಡಿದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ , ಕನ್ನಡ ಕಣ್ಣಾಗಿರಬೇಕೇ ಹೊರತು ಕನ್ನಡಕವಾಗಬಾರದು. ಜಗತ್ತಿನಲ್ಲಿ ಬದುಕುವ ಭಾಷೆ ಇಂಗ್ಲಿಷ್ ಆಗಿದೆ. ಎರಡರ ನಡುವೆ ಸಮತೋಲನವಾಗಬೇಕು. ಇಂದು ನನಗಾಗಿ ನಾನು ಏನನ್ನೂ ಚಾಮುಂಡಿ ದೇವಿಯ ಬಳಿ ಬೇಡಿಲ್ಲ. ಕೊರೊನಾ ಲಸಿಕೆ ಬೇಗ ಬರಲಿ, ಕೊರೊನಾ ಸಂಪೂರ್ಣ ನಿವಾರಣೆಯಾಗಲಿ, ಜಲಪ್ರವಾಹ ಕಡಮೆಯಾಗಲಿ ಎಂದು ದೇವರ ಬಳಿ ಬೇಡಿದ್ದೇನೆ ಎಂದರು. ಮಾಡಬಾರದ್ದು ಮಾಡಿದರೆ, ತಿನ್ನಬಾರದ್ದನ್ನು ತಿಂದರೆ ಹೇಗೆ ವೈರಸ್ ಉತ್ಪಾದನೆ ಆಗುತ್ತದೆ ಎಂಬುದಕ್ಕೆ ಈ ವೈರಸ್ ಸಾಕ್ಷಿ. ಚೀನಾದಲ್ಲಿ ಸೃಷ್ಟಿಯಾದ ವೈರಸ್ ಇಡೀ ಪ್ರಪಂಚವನ್ನೇ ನಡುಗಿಸಿದೆ ಎಂದು ಕಿಡಿಕಾರಿದರು.

ಕೊರೊನಾದ ವಿರುದ್ಧ ಹೋರಾಡಿ ಮಡಿದವರನ್ನು ಕೊರೊನಾ ಹುತಾತ್ಮರೆಂದು ಕರೆಯಿರಿ: ಡಾ. ಮಂಜುನಾಥ್‌

ಪ್ರವಾಸಿ ತಾಣಗಳ ನಿರ್ಬಂಧ ತೆರವು!

ಇನ್ನು ದಸರಾ ಹಿನ್ನೆಲೆ ನಾಡಿನ ದೊರೆ ಬಿಎಸ್‌ ಯಡಿಯೂರಪ್ಪ ಪ್ರವಾಸಿಗರಿಗೆ ಬಿಗ್‌ ಗಿಫ್ಟ್‌ ಕೊಟ್ಟಿದ್ದಾರೆ. ಐದನೇ ಹಂತದ ಲಾಕ್‌ಡೌನ್‌ ವಿನಾಯಿತಿ ಅನ್ವಯ ಪ್ರವಾಸಿ ತಾಣಾಗಳ ವೀಕ್ಷಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಚಾಮುಂಡಿ ಬೆಟ್ಟ, ಮೃಗಾಲಯ, ಕೆಆರ್‌ಎಸ್‌, ತಲಕಾಡು, ನಂಜನಗೂಡು ಶ್ರೀಕಂಠೇಶ್ವರ ದೇಗುಲ ಸೇರಿದಂತೆ ವಿವಿಧ ತಾಣಗಳಿಗೆ ಪ್ರವಾಸಿಗರಿಗೆ ಅವಕಾಶ ಮಾಡಿಕೊಡಲಾಗಿದೆ. ಸದ್ಯ ದಸರಾಗೆ ಚಾಲನೆ ಮೂಲಕ ಮೈಸೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆಯಾದರು ಈ ಬಾರಿ ಕೊರೊನಾ ಹಿನ್ನೆಲೆ ಸರಳ ದಸರಾ ನಡೆಯಲಿದೆ. ಇನ್ನು ವರ್ಷ ವರ್ಷ ಲಕ್ಷ ಲಕ್ಷ ಸಂಖ್ಯೆಯಲ್ಲಿ ಪ್ರವಾಸಿಗರು ದಸರಾ ವೀಕ್ಷಿಸಲು ಆಗಮಿಸುತ್ತಿದ್ದರು.

ವಿಶ್ವ ವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ ನೀಡಿದ ಡಾ. ಮಂಜುನಾಥ್‌, ಸಿಎಂ ಬಿಎಸ್‌ವೈ ಮತ್ತಿತರು ಸಾಥ್‌!

ಖಾಸಗಿ ದರ್ಬಾರ್‌ ಆರಂಭ!

ದಸರಾ ಹಿನ್ನೆಲೆ ಅರಮನೆ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದೀಗ ಅರಮನೆಯಲ್ಲಿ ಖಾಸಗಿ ದರ್ಬಾರ್‌ ಆರಂಭವಾಗಿದೆ. ಅರಮನೆ ಒಳಾಂಗಣ ಪಾರಂಪರಿಕ ದಸರಾ ಕಾರ್ಯಕ್ರಮಗಳು ಶುರುವಾಗಿದೆ. ಶುಭ ಮಹೂರ್ತದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ನಡೆದಿದೆ. ಅಲ್ಲದೆ ಯದುವಂಶದ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ಗೆ ಕಂಕಣಧಾರಣೆ ಮಾಡಲಾಗಿದೆ. ಅಲ್ಲದೇ ಧಾರ್ಮಿಕ ಆಚರಣೆಗಳ ಮೂಲಕ ಖಾಸಗಿ ದರ್ಬಾರ್‌ ಆರಂಭಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ