ಆ್ಯಪ್ನಗರ

ಮೈಸೂರು ಡಿಸಿ ದರ್ಪಣ್‌ ಜೈನ್‌ ಅಧಿಕಾರ ಸ್ವೀಕಾರ

ಬೆಂಗಳೂರಿನಲ್ಲಿ ಕೈಗಾರಿಕೆ ಅಭಿವೃದ್ಧಿ ಇಲಾಖೆ ಆಯುಕ್ತರಾಗಿದ್ದ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ದರ್ಪಣ್‌ ಜೈನ್‌ ಅವರು ಮಂಗಳವಾರ ಮೈಸೂರು ಜಿಲ್ಲಾಧಿಕಾರಿಯಾಗಿ ನಿಗರ್ಮಿತ ಡಿಸಿ ಕೆ.ಬಿ. ಶಿವಕುಮಾರ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

Vijaya Karnataka 18 Apr 2018, 5:00 am

ಮೈಸೂರು: ಬೆಂಗಳೂರಿನಲ್ಲಿ ಕೈಗಾರಿಕೆ ಅಭಿವೃದ್ಧಿ ಇಲಾಖೆ ಆಯುಕ್ತರಾಗಿದ್ದ ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ದರ್ಪಣ್‌ ಜೈನ್‌ ಅವರು ಮಂಗಳವಾರ ಮೈಸೂರು ಜಿಲ್ಲಾಧಿಕಾರಿಯಾಗಿ ನಿಗರ್ಮಿತ ಡಿಸಿ ಕೆ.ಬಿ. ಶಿವಕುಮಾರ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿಗೆ ಮಂಗಳವಾರ ಮಧ್ಯಾಹ್ನ ಆಗಮಿಸಿದ ದರ್ಪಣ್‌ ಜೈನ್‌ ಅವರು ಕೆ.ಬಿ. ಶಿವಕುಮಾರ್‌ ಅವರನ್ನು ಭೇಟಿ ಮಾಡಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರದ ಆದೇಶದಂತೆ ಮಾ.12 ರಂದು ಕೆ.ಬಿ. ಶಿವಕುಮಾರ್‌ ಅವರು ಹಿಂದಿನ ಜಿಲ್ಲಾಧಿಕಾರಿ ಡಿ. ರಂದೀಪ್‌ ಅವರಿಂದ ಮೈಸೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ ಕೇವಲ 36 ದಿನಗಳ ಅಂತರದಲ್ಲಿ ಚುನಾವಣೆ ಆಯೋಗ ಶಿವಕುಮಾರ್‌ ಅವರನ್ನು ವರ್ಗಾವಣೆ ಮಾಡಿ, ಆ ಜಾಗಕ್ಕೆ ದರ್ಪಣ್‌ ಜೈನ್‌ ಅವರನ್ನು ನೇಮಕ ಮಾಡಿದೆ.

ಇದಕ್ಕೂ ಮುನ್ನ ಮೈಸೂರಿನ ಅಧಿಕಾರಿ ವರ್ಗದ ವತಿಯಿಂದ ಸರಕಾರಿ ಅತಿಥಿಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ