ಆ್ಯಪ್ನಗರ

ಬುಡಕಟ್ಟು ಉತ್ಪನ್ನಗಳಿಗೆ 'ಮೈಸೂರು ಟ್ರೈಬಲ್' ಬ್ರಾಂಡ್

ಈ ಬಗ್ಗೆ ತಾಂತ್ರಿಕ ಯೋಜನಾ ವರದಿಯನ್ನು ತಯಾರಿಸಲು ಕೂಡಲೇ ತಂತ್ರಜ್ಞರನ್ನು ನಿಯೋಜಿಸಲಾಗುವುದು. ಜಿಲ್ಲಾ ತಾಂತ್ರಿಕ ಯೋಜನಾ ವರದಿಯನ್ನು 15 ದಿನಗಳ ಒಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗುವುದು

Vijaya Karnataka Web 22 Jan 2021, 8:18 pm
ಮೈಸೂರು: ಮೈಸೂರು ಜಿಲ್ಲೆಯ ಬುಡಕಟ್ಟು ಜನರು ಉತ್ಪಾದಿಸುವ ಉತ್ಪನ್ನಗಳಿಗೆ `ಮೈಸೂರು ಟ್ರೈಬಲ್' ಎಂಬ ಬ್ರಾಂಡ್ ನೀಡಿ, ಭಾರತೀಯ ಬುಡಕಟ್ಟು ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟ (ಟ್ರೈಫೆಡ್) ಸಂಸ್ಥೆಯ ಮುಖಾಂತರ ಸೂಕ್ತ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಟೈಫೈಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪ್ರವೀರ್ ಕೃಷ್ಣ ಅವರಿಗೆ ಮನವಿ ಮಾಡಿದರು.
Vijaya Karnataka Web ರೋಹಿಣಿ ಸಿಂಧೂರಿ, ಪ್ರವೀರ್ ಕೃಷ್ಣ
ರೋಹಿಣಿ ಸಿಂಧೂರಿ, ಪ್ರವೀರ್ ಕೃಷ್ಣ


ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೇಂದ್ರ ಸರಕಾರದ ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಭಾರತೀಯ ಬುಡಕಟ್ಟು ಮಾರುಕಟ್ಟೆ ಅಭಿವೃದ್ಧಿ ಒಕ್ಕೂಟದ (ಟೈಫೈಡ್) ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಪ್ರವೀರ್ ಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ವಾಸವಿರುವ ಬುಡಕಟ್ಟು ಜನರು ಉತ್ಪಾದಿಸುವ ವಸ್ತುಗಳಿಗೆ ಸೂಕ್ತ ಬೆಲೆಯನ್ನು ನೀಡಲು ಚರ್ಚಿಸಿದರು.

ಹುಣಸೂರು ತಾಲೂಕು ಪಕ್ಷಿರಾಜಪುರದಲ್ಲಿ ವಾಸಿಸುವ ಬುಡಕಟ್ಟು ಜನರು ಉತ್ಪಾದಿಸುವ ಎಣ್ಣೆ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಬೇಕು. ಬುಡಕಟ್ಟು ಜನರಿಗೆ ತರಬೇತಿ ನೀಡಿ ಅವರ ಉತ್ಪನ್ನಗಳಿಗೆ (ಟ್ರೇಡ್) ನಿಗದಿಪಡಿಸಿ ಅಭಿವೃದ್ಧಿಪಡಿಸಬೇಕು ಎಂದು ವಿವರಿಸಿದರು.

ಜಿಲ್ಲಾ ಮಟ್ಟದಲ್ಲಿ ತ್ರೈಮಾಸಿಕವಾಗಿ ಬುಡಕಟ್ಟು ಜನರ ಉತ್ಪನ್ನಗಳ ಪ್ರದರ್ಶನಾಲಯ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಸಲು ತಿಳಿಸಿದರು. ನಾಗಾಪುರ, ಪಕ್ಷಿರಾಜಪುರ ಸೇರಿದಂತೆ ಹುಣಸೂರು ತಾಲ್ಲೂಕಿನ ಪ್ರದೇಶಗಳಲ್ಲಿ ಬರುವ ಬುಡಕಟ್ಟು ಜನರಿಗೆ ಮಾರುಕಟ್ಟೆ ಒದಗಿಸಲು ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಚರ್ಚಿಸಿದರು.

ಟೈಫೈಡ್ ವ್ಯವಸ್ಥಾಪಕ ನಿರ್ದೇಶಕ ಪ್ರವೀರ್ ಕೃಷ್ಣ ಅವರು ಮಾತನಾಡಿ, ಈ ಬಗ್ಗೆ ತಾಂತ್ರಿಕ ಯೋಜನಾ ವರದಿಯನ್ನು ತಯಾರಿಸಲು ಕೂಡಲೇ ತಂತ್ರಜ್ಞರನ್ನು ನಿಯೋಜಿಸಲಾಗುವುದು. ಜಿಲ್ಲಾ ತಾಂತ್ರಿಕ ಯೋಜನಾ ವರದಿಯನ್ನು 15 ದಿನಗಳ ಒಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಬಿ.ಎ.ಪರಮೇಶ್, ಎನ್.ಆರ್.ಎಲ್.ಎಂ ಯೋಜನಾ ನಿರ್ದೇಶಕಿ ಸುಶೀಲಾ, ಟೈಫೈಡ್ ಪ್ರಾದೇಶಿಕ ವ್ಯವಸ್ಥಾಪಕ ರಾಮನಾಥ್, ಸಹಕಾರ ಇಲಾಖೆಯ ಜಂಟಿ ನಿರ್ದೇಶಕ ಲಿಂಗರಾಜು, ಲ್ಯಾಂಪ್ಸ್ ಸಹಕಾರ ಸಂಘದ ವಿಜಯಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಬಿ.ಎಂ.ಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ