ಆ್ಯಪ್ನಗರ

ಕೊಡಗು ಜನರ ರಕ್ಷಣೆಗಾಗಿ ಸಹಾಯ ಮಾಡಿ

ಕೊಡಗು ಪ್ರದೇಶದಲ್ಲಿ ಗುಡ್ಡ ಕುಸಿದು, ನದಿ ಉಕ್ಕಿ ಹರಿದು ಮನೆಗಳು ಮುಳುಗಡೆಯಾಗಿದ್ದು, ಜನರು ನಿರಾಶ್ರಿತರಾಗಿದ್ದಾರೆ. ಅವರ ರಕ್ಷಣೆಗಾಗಿ ಕೈಲಾದ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

Vijaya Karnataka 19 Aug 2018, 5:00 am
ಮೈಸೂರು: ಕೊಡಗು ಪ್ರದೇಶದಲ್ಲಿ ಗುಡ್ಡ ಕುಸಿದು, ನದಿ ಉಕ್ಕಿ ಹರಿದು ಮನೆಗಳು ಮುಳುಗಡೆಯಾಗಿದ್ದು, ಜನರು ನಿರಾಶ್ರಿತರಾಗಿದ್ದಾರೆ. ಅವರ ರಕ್ಷಣೆಗಾಗಿ ಕೈಲಾದ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.
Vijaya Karnataka Web mysore help protect the people of kodagu
ಕೊಡಗು ಜನರ ರಕ್ಷಣೆಗಾಗಿ ಸಹಾಯ ಮಾಡಿ


ಜಿಲ್ಲಾಡಳಿತದ ವತಿಯಿಂದ ಪ್ರವಾಹ ಪೀಡಿತರ ನೆರವಿಗಾಗಿ ಸಾಮಾಗ್ರಿಗಳನ್ನು ಶೇಖರಿಸುತ್ತಿರುವ ಪುರಭವನಕ್ಕೇ ಭೇಟಿ ನೀಡಿದ ಅವರು ಮಾತನಾಡಿದರು. ನಗರದಲ್ಲಿ ಈಗಾಗಲೇ ಜಿಲ್ಲಾಡಳಿತ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಕೊಡಗು ಜನತೆಗೆ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಸ್ವಯಂ ಆಗಿ ಕಾರ್ಯನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಈ ನಿಟ್ಟಿನಲ್ಲಿ ಪ್ರತಿಯೊಂದು ಕುಟುಂಬದವರು ಸಂಕಷ್ಟದಲ್ಲಿರುವವರಿಗೆ ಸಹಾಯವನ್ನು ಮಾಡುವ ಕಾರ್ಯ ಮಾಡಬೇಕಿದೆ. ಮೈಸೂರು ಭಾಗದಲ್ಲಿ ನಂಜನಗೂಡು ಭಾಗಕ್ಕೆ ಅನೇಕ ಸಚಿವರೊಂದಿಗೆ ಭೇಟಿ ನೀಡಿ ವೀಕ್ಷಿಸಲಾಯಿತು. ನಮ್ಮ ಜಿಲ್ಲೆಯಲ್ಲಿ ಯವುದೇ ಅನಾಹುತ ಘಟಿಸಿದಂತೆ ಅಧಿಕಾರಿಗಳು ಎಚ್ಚರಿಕೆ ಯಿಂದ ಕಾರ್ಯನಿರ್ವಹಿಸಿದ್ದಾರೆ. ಹಾಗಾಗಿಯೂ ಗದ್ದೆಗಳು, ಮನೆಗಳು ಮುಳುಗಡೆಯಾಗಿದ್ದು, ಗಂಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಮಾಧ್ಯಮದವರು ಸೇರಿದಂತೆ ಮೈಸೂರಿನ ಜನರು ತುರ್ತು ಸಹಾಯ ಮಾಡುತ್ತಿರುವುದು ಉತ್ತಮ ಕಾರ್ಯ. ಕೊಡಗು ಜನತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯ ವಸ್ತುಗಳಾದ ಬಟ್ಟೆ, ಆಹಾರ ಸೇರಿದಂತೆ ಇನ್ನಿತರ ವಸ್ತುಗಳನ್ನು ಸರಕಾರದ ಜೊತೆಗೆ ಜನರು ಕೈಜೋಡಿಸಿರುವುದು ನಿಜಕ್ಕೂ ಮೆಚ್ಚುವಂತಹ ಸಂಗತಿಯಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ