ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪದವಿ ಪಡೆದಿರುವ ವಿದ್ಯಾರ್ಥಿಗಳ ಸಂಕಷ್ಟ ಪರಿಹಾರ ಮಾಡುವ ನಿಟ್ಟಿನಲ್ಲಿ ಮುಂದಿನ ವಾರ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಖಾಸಗಿ ವಾಹಿನಿಗೆ ನವದೆಹಲಿಯಲ್ಲಿ ಮಾತನಾಡಿರುವ ಅವರು, ಪದವಿ ಪೂರ್ಣ ಮಾಡಿದ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಈ ಅವಧಿಯಲ್ಲಿ ತಪ್ಪೆಸಗಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಮುಕ್ತ ವಿವಿಯನ್ನು ಹೊಸ ಮಾರ್ಗಸೂಚಿ ಅನ್ವಯ 2018-19ರಿಂದ ಆರಂಭ ಮಾಡುವ ಸಂಬಂಧ ಗಮನ ಹರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.