ಆ್ಯಪ್ನಗರ

ಮಾಸ್ಕ್ ಹೆಸರಿನಲ್ಲಿ ಜನರನ್ನು ಲೂಟಿ ಮಾಡುವ ಕೆಲಸ ನಿಲ್ಲಿಸಿ : ಸಂಸದ ಪ್ರತಾಪ್ ಸಿಂಹ

​​ಕೊರೊನಾ ಹಿನ್ನೆಲೆ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.ಇದೆ ವೇಳೆ ಸಿದ್ದರಾ,ಯ್ಯ ವಿರುದ್ಧವು ಕಿಡಿಕಾರಿದರು.

Vijaya Karnataka Web 25 Dec 2020, 1:29 pm
ಮೈಸೂರು: ಕೊರೊನಾ ಹಿನ್ನೆಲೆ ಕಳೆದ ಮಾರ್ಚ್‌ನಿಂದಲೂ ಜನರು ನಿರ್ಬಂಧದ ವ್ಯವಸ್ಥೆಯಲ್ಲೆ ಇದ್ದಾರೆ. ಜನರನ್ನ ಇನ್ನೆಷ್ಟು ದಿನ ಮನೆಯಲ್ಲಿ ಕೂರಿಸ್ತಿರಾ.? ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
Vijaya Karnataka Web Pratap Simha


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಿನಲ್ಲಿ ಜನರು ಮನೆಯಲ್ಲಿ ಬಂಧಿಯಾಗಿದ್ದಾರೆ. ಇನ್ನು ಮುಂದಾದರೂ ಜನರನ್ನು ಓಡಾಡಲು ಬಿಡಿ. ಮಾಸ್ಕ್ ಹೆಸರಿನಲ್ಲಿ ಜನರಿಗೆ ಅನಗತ್ಯ ತೊಂದರೆ ಕೊಡಬೇಡಿ ನಾನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಿಗೆ ಹೋಗಿ ಬಂದಿದ್ದೇನೆ. ಎಲ್ಲಾ ಕಡೆ ಕೊರೋನಾ ರೂಪಾಂತರದ ಬಗ್ಗೆ ಚರ್ಚೆ ಇದೆ. ಆದರೇ ಜನರನ್ನು ಹೆಚ್ಚು ದಿನ‌ ನಿರ್ಬಂಧ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೊರೊನಾ ಹಿನ್ನೆಲೆ ಉದ್ಯಮ ಹಾಗೂ ಅವರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಕೊಡಬೇಕು. ಮಾಸ್ಕ್ ಕಡ್ಡಾಯ ಮಾಡಿ. ಆದರೇ ಮಾಸ್ಕ್ ಹೆಸರಿನಲ್ಲಿ ಕಾರು, ಬೈಕ್ ನಿಲ್ಲಿಸಿ ಜನರಿಗೆ ತೊಂದರೆ ಕೊಡಬೇಡಿ. ಸದ್ಯದಲ್ಲೇ ಕೊರೊನಾ ಲಸಿಕೆ ಸಹ ಬರುತ್ತಿದೆ ಎಂದು ತಿಳಿಸಿದರು. ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್‌ ತಿನ್ನುತ್ತಾರೆ ಎನ್ನಲು ಆಗುತ್ತಾ ? ., ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವದೇ ನನಗೆ ಅರ್ಥವಾಗುತ್ತಿಲ್ಲ.

ಮೈಸೂರು: ಕಾಡಾನೆ ದಾಳಿಗೆ ಫಾರೆಸ್ಟ್‌ ವಾಚರ್‌ ಬಲಿ; ಇಬ್ಬರು ಅರಣ್ಯ ಸಿಬ್ಬಂದಿಗೆ ಗಂಭೀರ ಗಾಯ

ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್‌ನವರು ಮಾತ್ರ ಮಾತನಾಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ