ಆ್ಯಪ್ನಗರ

ಲಖನೌನಲ್ಲಿ ಅಪಘಾತ; ರಂಗಕರ್ಮಿ ಕೆ.ಮುದ್ದುಕೃಷ್ಣ ದಂಪತಿ ಸಾವು

ಅಪಘಾತದಲ್ಲಿ ಮುದ್ದುಕೃಷ್ಣ ಅವರ ಕಾಲು ಮುರಿದಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಅವರು ಪತ್ನಿ ಸಾವಿನ ಆಘಾತದಿಂದ ಕೊನೆಯುಸಿರೆಳೆದಿದ್ದಾರೆ.

Vijaya Karnataka Web 8 Jul 2019, 2:07 pm
ಮೈಸೂರು: ಲಖನೌ ಬಳಿ ಸಂಭವಿಸಿದ ಕಾರು ಅಪಘಾತದಲ್ಲಿ ಮೈಸೂರಿನ ರಂಗಕರ್ಮಿ ಕೆ.ಮುದ್ದುಕೃಷ್ಣ (61) ಹಾಗೂ ಅವರ ಪತ್ನಿ ಬಿ.ಇಂದ್ರಾಣಿ (58) ಮೃತಪಟ್ಟಿದ್ದಾರೆ.
Vijaya Karnataka Web ಮುದ್ದುಕೃಷ್ಣ ದಂಪತಿ


ದಂಪತಿ ಲಖನೌ ಪ್ರವಾಸದಲ್ಲಿದ್ದರು. ಭಾನುವಾರ ಸಂಜೆ ನಡೆದ ಕಾರು ಅಪಘಾತದಲ್ಲಿ ಪತಿ- ಪತ್ನಿ ಇಬ್ಬರು ಸಹ ಗಾಯಗೊಂಡಿದ್ದರು.

ತೀವ್ರವಾಗಿ ಗಾಯಗೊಂಡ ಮುದ್ದುಕೃಷ್ಣ ಹಾಗೂ ಇಂದ್ರಾಣಿ ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪತ್ನಿ ಮೃತಪಟ್ಟಿದ್ದರು.

ಸೋಮವಾರ ಬೆಳಗ್ಗೆ ಮುದ್ದುಕೃಷ್ಣ ಅವರಿಗೆ ಪತ್ನಿ ಸಾವಿನ ಸುದ್ದಿ ತಿಳಿಸಲಾಗಿದ್ದು, ಅದನ್ನು ಕೇಳಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ವಿಪರ್ಯಾಸವೆಂದರೆ ಇಂದು ಇಂದ್ರಾಣಿ ಅವರ ಜನ್ಮದಿನವಾಗಿದ್ದು, ಇದೇ ಸಂದರ್ಭದಲ್ಲಿ ಪತಿ ಪತ್ನಿ ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ