ಆ್ಯಪ್ನಗರ

ದಸರಾ ಲೆಕ್ಕ: ಒಂದೂವರೆ ಕೋಟಿಯಲ್ಲಿ 10 ದಿನದ ಆಚರಣೆ, 7.8 ಕೋಟಿ ಉಳಿತಾಯ

ಈ ಬಾರಿಯ ಮೈಸೂರು ದಸರಾವನ್ನು ಅತ್ಯಂತ ಸರಳವಾಗಿ ಆಚರಣೆ ಮಾಡಲಾಗಿದೆ. ಕಾರಣ ಕೋವಿಡ್‌ ಸೋಂಕು ದೇಶಾದ್ಯಂತ ಅಟ್ಟಹಾಸ ಮೆರೆಯುತ್ತಿರುವುದು. ಅಷ್ಟಕ್ಕೂ ಈ ಬಾರಿಯ ದಸರಾಗೆ ಆದ ಖರ್ಚೆಷ್ಟು? ಈ ಮಾಹಿತಿಯನ್ನು ಎಸ್‌ಟಿ ಸೋಮಶೇಖರ್‌ ನೀಡಿದ್ದಾರೆ.

Vijaya Karnataka Web 8 Nov 2020, 2:28 pm
ಮೈಸೂರು: ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ಈ ಬಾರಿಯ ಸರಳ ದಸರಾಗೆ ಒಂದುವರೆ ಕೋಟಿ ಖರ್ಚಾಗಿದೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್‌ ಲೆಕ್ಕ ನೀಡಿದ್ದಾರೆ.
Vijaya Karnataka Web mysuru dasara


ಪಿರಿಯಾಪಟ್ಟಣದ ಬೆಟ್ಟದಪುರದಲ್ಲಿ ಮಾತನಾಡಿದ ಅವರು, ದಸರಾಕ್ಕೆ ಸಂಬಂಧಿಸಿದಂತೆ ಲೆಕ್ಕ ಕೊಡುವುದಿಲ್ಲ ಎಂಬ ಆರೋಪ ಪ್ರತಿವರ್ಷ ಕೇಳಿಬರುತ್ತಿತ್ತು. ಹಾಗಾಗಿ ದಸರಾ ಮುಗಿದ ತಕ್ಷಣ ಲೆಕ್ಕ ಕೊಟ್ಟಿದ್ದೇವೆ.
ಈ ಬಾರಿ ಒಂದೂವರೆ ಕೋಟಿಯಲ್ಲಿ 10 ದಿನದ ದಸರಾ ಆಚರಣೆ ಮಾಡಿ ಸರಳವಾಗಿ ಮಾಡಿ ತೋರಿಸಲಾಗಿದೆ. ಒಟ್ಟಾರೆಯಾಗಿ 7.8 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸಚಿವರು ತಿಳಿಸಿದರು.

ಸರಳ ದಸರಾ ಮಾದರಿಯಲ್ಲಿ ಪಂಚಲಿಂಗ ದರ್ಶನ | ತಜ್ಞರ ವರದಿ ಆಧರಿಸಿ ಕಾರ್ಯಕ್ರಮ ಎಂದ ಸಚಿವರು

ಕೋವಿಡ್‌ ಕಾರಣಕ್ಕಾಗಿ ಈ ಬಾರಿಯ ದಸರಾವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಹೀಗಿದ್ದರೂ ಮೈಸೂರು ಅರಮನೆಯ ಸುತ್ತ ದೀಪಾಲಂಕಾರಕ್ಕೆ ಸಾಮಾಜಿಕ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು.

ಎಪಿಎಂಸಿ ಕಾಯ್ದೆಯಿಂದ ರೈತರಿಗೆ ಲಾಭ

ನಾವು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿದ್ದರಿಂದ ರೈತರಿಗೆ ಈಗ ತಮ್ಮ ಬೆಳೆಯನ್ನು ರಾಜ್ಯದ ಎಲ್ಲಿಬೇಕಾದರೂ ಮಾರಾಟ ಮಾಡುವ ಅಧಿಕಾರವನ್ನು ನೀಡಿದಂತಾಗಿದೆ ಎಂದು ಎಸ್‌ಟಿ ಸೋಮಶೇಖರ್ ತಿಳಿಸಿದರು.
ಎಪಿಎಂಸಿ ಪರವಾನಗಿ ಹೊಂದಿ ಬೇರೆಡೆ ಮಾರಾಟ ಮಾಡಿದರೆ ದಂಡ ವಿಧಿಸುವುದಲ್ಲದೆ, ಪರವಾನಗಿಯನ್ನೇ ರದ್ದುಪಡಿಸಲಾಗುತ್ತಿತ್ತು. ಈಗ ನಮ್ಮ ಸರ್ಕಾರ ಈ ಕಾನೂನು ತೊಡಕನ್ನು ನಿವಾರಿಸಿದೆ ಎಂದು ತಿಳಿಸಿದರು. ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಹ ರೈತರಿಗೆ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲಗಳು ಆಗುತ್ತಿದೆ ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ