ಆ್ಯಪ್ನಗರ

ದಸರಾ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ ಎಚ್‌ಡಿಕೆ

ಸಿಎಂ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ದಸರಾ ಮೆರವಣಿಗೆಯಲ್ಲಿ ಸಾಗುವ ವಿವಿಧ ಕಲಾ ತಂಡಗಳ ಪ್ರದರ್ಶನಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Vijaya Karnataka Web 19 Oct 2018, 4:58 pm
ಮೈಸೂರು: ಮೈಸೂರು ದಸರಾ ಜಂಬೂ ಸವಾರಿಗೆ ಶುಕ್ರವಾರ ಮಧ್ಯಾಹ್ನ ಅಧಿಕೃತ ಚಾಲನೆ ದೊರೆತಿದೆ. ಜಂಬೂಸವಾರಿಯಲ್ಲಿ ಸಾಗುವ ಅಂಬಾರಿಯನ್ನು ಅರ್ಜುನನ ಹೆಗಲಿಗೆ ಕ್ರೇನ್ ಸಹಾಯದಿಂದ ಅರ್ಜುನ ಆನೆಗೆ ಕಟ್ಟಲು ಅರಮನೆಯಲ್ಲಿ ಇರಿಸಲಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆಯ ಬಲ ಭಾಗಕ್ಕೆ ತರಲಾಯಿತು. ಬಳಿಕ ಅಲ್ಲಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಜಂಬೂ ಸವಾರಿಗೆ ಚಾಲನೆ ನೀಡಿದ್ದಾರೆ.
Vijaya Karnataka Web Mysore dasara


ಅದಕ್ಕೂ ಮೊದಲು ಸಿಎಂ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ನಂತರ ದಸರಾ ಮೆರವಣಿಗೆಯಲ್ಲಿ ಸಾಗುವ ವಿವಿಧ ಕಲಾ ತಂಡಗಳ ಪ್ರದರ್ಶನಕ್ಕೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ದಸರಾ ಜಂಬೂ ಸವಾರಿ ವೀಕ್ಷಿಸಲು ಸಾವಿರಾರು ಸಂಖ್ಯೆಯ ಜನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಕಾತರದಿಂದ ಕಾಯುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ