ಆ್ಯಪ್ನಗರ

ಮೈಸೂರಿನಲ್ಲಿ ವ್ಯಕ್ತಿಯ ಚೇಸಿಂಗ್ ವೇಳೆ ಲೈಟ್‌ ಕಂಬಕ್ಕೆ ಡಿಕ್ಕಿ ಹೊಡೆದ ಪೊಲೀಸರ ‘ಗರುಡ’ ವಾಹನ

ಗಾಯತ್ರಿಪುರಂನಲ್ಲಿನ ಮದ್ಯದಂಗಡಿಯೊಂದರಲ್ಲಿ ನಡೆಯುತ್ತಿದ್ದ ಗಲಾಟೆ ಸಂಬಂಧ ವ್ಯಕ್ತಿಯೊಬ್ಬನನ್ನು ಅಟ್ಟಿಸಿಕೊಂಡು ಹೋಗುತ್ತಿದ್ದಾಗ ಗರುಡ ವಾಹನ ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

Vijaya Karnataka Web 21 Sep 2020, 11:36 am
ಮೈಸೂರು: ಮೈಸೂರು ನಗರದ ಗಾಯತ್ರಿಪುರಂನಲ್ಲಿನ ಮದ್ಯದಂಗಡಿಯೊಂದರಲ್ಲಿ ನಡೆಯುತ್ತಿದ್ದ ಗಲಾಟೆ ಸಂಬಂಧ ವ್ಯಕ್ತಿಯೊಬ್ಬರನ್ನು ಪೊಲೀಸರು ತಮ್ಮ ಗರುಡ ವಾಹನದಲ್ಲಿ ಬೆನ್ನಟ್ಟುತ್ತಿದ್ದ ಸಮಯದಲ್ಲಿ ಗರುಡ ವಾಹನ ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮವಾಗಿ ವಿದ್ಯುತ್ ಕಂಬ ಧರೆಗುರುಳಿದೆ.
Vijaya Karnataka Web Gayathri Puram


ಘಟನೆ ನಡೆದ ಬಳಿಕ ಸಾರ್ವಜನಿಕರು ಸುತ್ತುವರೆದಿದ್ದಾರೆ. ಈ ವೇಳೆ ಕೆಲವರು ಗರುಡ ವಾಹನದ ಚಾಲಕ ಮದ್ಯಪಾನ ಮಾಡಿದ್ದಾನೆ ಎಂದು ಹೇಳಿ ಗಲಾಟೆ ಆರಂಭಿಸಿದ್ದಾರೆ. ಈ ಸಂಬಂಧ ವಿಡಿಯೋ ಮಾಡಿ ವಾಟ್ಸ್ ‌ಆ್ಯಪ್‌ಗಳಲ್ಲಿ ಹರಿಯಬಿಟ್ಟಿದ್ದಾರೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್‌ ಆಗಿದೆ. ಆದರೆ ಘಟನೆ ಬಗ್ಗೆ ಸಂಚಾರ ವಿಭಾಗದ ಎಸಿಪಿ ಸಂದೇಶ್‌ಕುಮಾರ್ ಪ್ರತಿಕ್ರಿಯಿಸಿ, ನಮ್ಮ ಲಕಶೇಖರ್‌ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಅವರು ಮದ್ಯಪಾನ ಮಾಡಿಲ್ಲ ಎಂದು ಗೊತ್ತಾಗಿದೆ. ಅಲ್ಲದೇ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಹಿಡಿಯಲು ವೇಗವಾಗಿ ಹೋಗಿದ್ದರಿಂದ ಘಟನೆ ಸಂಭವಿಸಿದೆ ಎಂದಿದ್ದಾರೆ.

ಇನ್ನು ಅವಘಡಕ್ಕೀಡಾದ ಪೊಲೀಸ್ ವಾಹನವು ನಜರ್ ಬಾದ್ ಪೊಲೀಸ್ ಠಾಣೆಗೆ ಸೇರಿದ್ದಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಪೊಲೀಸ್‌ ಅಧಿಕಾರಿಗಳು ಸಹ ಆಗಮಿಸಿ ಪರಿಶೀಲಿಸಿ ನಡೆಸಿ, ನೆರೆದಿದ್ದ ಜನರನ್ನು ಚದುರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ