ಆ್ಯಪ್ನಗರ

ಕೇರಳ ಕಸದ ಲಾರಿ ವಶ

ಕೇರಳದಿಂದ ಬರುತ್ತಿದ್ದ ಕಸ ತುಂಬಿದ ಲಾರಿಯೊಂದನ್ನು ಪಾಲಿಕೆ ಅಧಿಕಾರಿಗಳು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Vijaya Karnataka 8 Jun 2018, 5:00 am
ಮೈಸೂರು: ಕೇರಳದಿಂದ ಬರುತ್ತಿದ್ದ ಕಸ ತುಂಬಿದ ಲಾರಿಯೊಂದನ್ನು ಪಾಲಿಕೆ ಅಧಿಕಾರಿಗಳು ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
Vijaya Karnataka Web mysuru kerala garbage lorry sieze
ಕೇರಳ ಕಸದ ಲಾರಿ ವಶ


ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ಗಮನಿಸಿದ ಸಾರ್ವಜನಿಕರು ಪಾಲಿಕೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ದೌಡಾಯಿಸಿದ ಆರೋಗ್ಯ ಅಧಿಕಾರಿ ಡಾ.ರಾಮಚಂದ್ರ ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ ಪ್ಲಾಸ್ಟಿಕ್‌ ಕಸ ತುಂಬಿದ್ದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಾಹನವನ್ನು ವಶಕ್ಕೆ ಪಡೆದರು. ನಂತರ ಲಾರಿಯನ್ನು ಮಾಲಿನ್ಯ ನಿಯಂತ್ರಣ ಮಂಡಳಿಯ ವಶಕ್ಕೆ ಒಪ್ಪಿಸಿದರು. ಈ ಸಂದರ್ಭ ಚಾಲಕ ಪರಾರಿಯಾಗಿದ್ದಾನೆ. ವಾಹನವು ಕೇರಳದಿಂದ ತಿ.ನರಸೀಪುರ ತಾಲೂಕಿನ ಕಗ್ಗಲೀಪುರಕ್ಕೆ ಹೋಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ