ಆ್ಯಪ್ನಗರ

ಸಗಣಿ ಬಾಚಿ-ಸ್ವಚ್ಚಗೊಳಿಸಿ ಗೋವುಗಳ ಪೂಜೆ ಮಾಡಿ ಅಟಲ್‌ ಜೀ ಹುಟ್ಟುಹಬ್ಬವನ್ನು ಆಚರಿಸಿದ ಪ್ರತಾಪ್‌ ಸಿಂಹ

ಮೈಸೂರಿನ ಪಿಂಜರಾಪೋಲ್ ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಪ್ರತಾಪ್‌ ಸಿಂಹ, ಗೋವುಗಳನ್ನು ಸ್ವಚ್ಛಗೊಳಿಸಿ ನಂತರ ಗೋ ಪೊಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್‌ ತಿನ್ನುತ್ತಾರೆ ಎನ್ನಲು ಆಗುತ್ತಾ ?ಎಂದು ಪ್ರಶ್ನಿಸಿದರು.

Vijaya Karnataka Web 25 Dec 2020, 3:12 pm
ಮೈಸೂರು: ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಹಿನ್ನೆಲೆ, ಸಂಸದ ಪ್ರತಾಪ್‌ಸಿಂಹ ಗೋಶಾಲೆಯಲ್ಲಿ ಶ್ರಮದಾನ ಮಾಡಿದರು. ಗೋಪಾಲಕನಾಗಿ ಗೋಶಾಲೆಯಲ್ಲಿ ಸಗಣಿ ಬಾಚಿ ಸೇವೆ ಮಾಡಿದರು. ಗೋ ಪೂಜೆಗಾಗಿ ತಾನೇ ಹಸುವಿನ ಮೈತೊಳೆದು, ಮೇವು ತಿನ್ನಿಸಿ ಹಾರೈಕೆ ಮಾಡಿದರು.
Vijaya Karnataka Web Pratap Simha


ಮೈಸೂರಿನ ಪಿಂಜರಾಪೋಲ್ ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಪ್ರತಾಪ್‌ ಸಿಂಹ, ಗೋವುಗಳನ್ನು ಸ್ವಚ್ಛಗೊಳಿಸಿ ನಂತರ ಗೋ ಪೊಜೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕೊಡಗಿನವರು ಗೋ ಮಾಂಸ ಸೇವಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ನೀವು ಗೋಮಾಂಸ ತಿನ್ನುತ್ತೀರಿ ಎಂದು ಇಡೀ ಕುರುಬ ಸಮಾಜದವರು ಬೀಫ್‌ ತಿನ್ನುತ್ತಾರೆ ಎನ್ನಲು ಆಗುತ್ತಾ ? ., ಸಿದ್ದರಾಮಯ್ಯ ಅವರು ವಿವೇಚನೆ ಇಲ್ಲದೆ ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಎನ್ನುವದೇ ನನಗೆ ಅರ್ಥವಾಗುತ್ತಿಲ್ಲ.


ಆತ್ಮದ್ರೋಹದ ಮಾತುಗಳನ್ನು ಕಾಂಗ್ರೆಸ್‌ನವರು ಮಾತ್ರ ಮಾತನಾಡೋಕೆ ಸಾಧ್ಯ. ಕೊಡವರ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಅವರು ಗೋವನ್ನು ಎರಡನೇ ತಾಯಿಯಾಗಿ ನೋಡುತ್ತಾರೆ. ಕೋಟ್ಯಂತರ ಜನರ ಭಾವನೆಗೆ ಧಕ್ಕೆ ತರುವ, ಕೊಡವರಿಗೆ ನೋವಾಗುವಂತಹ ಮಾತುಗಳನ್ನಾಡಬೇಡಿ ಎಂದು ತಿಳಿಸಿದರು.
ಕೊರೊನಾ ಆತಂಕದ ನಡುವೆ ಮೈಸೂರಿನಲ್ಲಿ ವೈಕುಂಠ ಏಕಾದಶಿ ಆಚರಣೆ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ