ಆ್ಯಪ್ನಗರ

Mysuru Yuva Dasara | ಯುವ ದಸರಾದಲ್ಲಿ 'ಉಪ್ಪಿ' ಡೈಲಾಗ್ ಪಂಚ್: ಮತ್ತೆ ಮತ್ತೆ ನೆನಪಾದ 'ಅಪ್ಪು'

Sandalwood stars in Yuva Dasara: ಮೈಸೂರಿನ (Mysuru) ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ 3ನೇ ದಿನದ ಯುವ ದಸರಾದ ಸ್ಯಾಂಡಲ್ ವುಡ್ ನೈಟ್‌ನಲ್ಲಿ ಉಪೇಂದ್ರ ಹಾಗೂ ಸಾಧುಕೋಕಿಲ ಅವರು ರಕ್ತ ಕಣ್ಣೀರು ಚಿತ್ರದ ಹಾಡನ್ನು ಹಾಡುವುದರ ಜೊತೆಗೆ ನರ್ತಿಸಿ ಅಭಿಮಾನಿಗಳನ್ನು ರಂಜಿಸಿದರು. ಚಿಕ್ಕಣ್ಣ ಅವರು ಮಾತನಾಡಿ, ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ. ಅದನ್ನು ಯಶಸ್ವಿಯಾಗಿ ಬೆಳೆಸಬೇಕು ಎಂದು ಹೇಳಿ, ಪುನೀತ್ ರಾಜ್ ಕುಮಾರ್ ಅವರಿಗಾಗಿ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡಿದರು.

Edited byಹೇಮಂತ್ ಕುಮಾರ್ ಎಸ್ | Lipi 30 Sep 2022, 11:31 pm

ಹೈಲೈಟ್ಸ್‌:


  • ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಹಾಸ್ಯ ಚಟಾಕಿ
  • ಮುಕುಂದ ಮುರಾರಿ ಚಿತ್ರದ 'ನೀನೆ ರಾಮ, ನೀನೇ ಶಾಮ...' ಹಾಡಿಗೆ ತಲೆದೂಗಿದ ಪ್ರೇಕ್ಷಕರು
  • ಸೋನು, ದೀರನ್ ರಾಮ್ ಕುಮಾರ್, ನಿಧಿ ಸುಬ್ಬಯ್ಯ ಹಾಗೂ ಹರ್ಷಿಕಾ ಪೂಣಚ್ಛ ಅವರಿಂದ ನೃತ್ಯ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Upendra in Mysuru yuva dasara
ಮೈಸೂರು ಯುವ ದಸರಾದಲ್ಲಿ ಉಪೇಂದ್ರ ಮತ್ತು ಸಾಧು ಕೋಕಿಲಾ
ಮೈಸೂರು: ಒಂದು ಕಡೆ ಧರೆಗೆ ಮಳೆಯ ಸಿಂಚನವಾಗುತ್ತಿದ್ದರೆ ಇನ್ನೊಂದು ಕಡೆ ಮಳೆಗೆ ಸೆಡ್ಡು ಹೊಡೆಯುವಂತೆ ನೆರೆದಿದ್ದ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದು ರಿಯಲ್ ಸ್ಟಾರ್ ಉಪೇಂದ್ರ ಅವರ ಮತ್ತೇರಿಸುವಂತಹ ಡೈಲಾಗ್ಸ್, ಸಾಧುಕೋಕಿಲ ಹಾಗೂ ಚಿಕ್ಕಣ್ಣ ಅವರ ಹಾಸ್ಯ ಚಟಾಕಿ ಹಾಗೂ ಕಲಾವಿದರ ಸಂಗಮ.

ಇಂತಹ ದೃಶ್ಯ ಕಂಡು ಬಂದಿದ್ದು ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆಯುತ್ತಿರುವ 3ನೇ ದಿನದ ಯುವ ದಸರಾದ ಸ್ಯಾಂಡಲ್ ವುಡ್ ನೈಟ್‌ನಲ್ಲಿ. ವೇದಿಕೇಯ ಮೇಲೆ ಉಪೇಂದ್ರ ಹಾಗೂ ಸಾಧುಕೋಕಿಲ ಅವರು ರಕ್ತ ಕಣ್ಣೀರು ಚಿತ್ರದ ಹಾಡನ್ನು ಹಾಡುವುದರ ಜೊತೆಗೆ ನರ್ತಿಸಿ ಅಭಿಮಾನಿಗಳನ್ನು ರಂಜಿಸಿದರು.
Mysuru Dasara: ಈ ಬಾರಿ ಪುಸ್ತಕ ಮೇಳವೇ ಇಲ್ಲ! ಇದೆಂಥಾ ಮೈಸೂರು ದಸರಾ?
ಚಿಕ್ಕಣ್ಣ ಅವರು ಮಾತನಾಡಿ, ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ. ಅದನ್ನು ಯಶಸ್ವಿಯಾಗಿ ಬೆಳೆಸಬೇಕು ಎಂದು ಹೇಳಿ, ಪುನೀತ್ ರಾಜ್ ಕುಮಾರ್ ಅವರಿಗಾಗಿ ರಾಜಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡಿದರು.

ವೇದಿಕೆಯ ಮೇಲೆ ಸಾಧುಕೋಕಿಲ ಅವರು ಮುಕುಂದ ಮುರಾರಿ ಚಿತ್ರದ 'ನೀನೆ ರಾಮ, ನೀನೇ ಶಾಮ...' ಹಾಡು ಹಾಡಿ ತಲೆದೂಗುವಂತೆ ಮಾಡಿದರು. ಪುನೀತ್ ರಾಜ್‌ಕುಮಾರ್ ಅವರ ಕುರಿತು ಮಾತನಾಡಿ, ಅವರು ಎಲ್ಲೂ ಹೋಗಿಲ್ಲ. ನಮ್ಮ ನಿಮ್ಮ ನಡುವೆಯೇ ಇದ್ದಾರೆ ಎಂದು ಅವರಿಗಾಗಿ 'ಸೂಚನೆಯೂ, ಯೋಚನೆಯೂ ಇರಲಿಲ್ಲ ನೀ ಹೋದ ಕಾರಣ ತಿಳಿದಿಲ್ಲ...' ಎಂದು ಭಾವುಕರಾಗಿ ಹಾಡುವ ಮೂಲಕ ಪುನೀತ್ ಅವರಿಗೆ ನಮನ ಸಲ್ಲಿಸಿದರು.
Mysuru Dasara | ಯುವ ದಸರಾದಲ್ಲಿ ಕನ್ನಿಕಾ ಕಪೂರ್ ಗಾಯನ ಝಲಕ್: ಕುಣಿದು ಕುಪ್ಪಳಿಸಿದ ಫ್ಯಾನ್ಸ್
ಸೋನು, ದೀರನ್ ರಾಮ್ ಕುಮಾರ್, ನಿಧಿ ಸುಬ್ಬಯ್ಯ ಹಾಗೂ ಹರ್ಷಿಕಾ ಪೂಣಚ್ಛ ಅವರ ನೃತ್ಯ ನೋಡುಗರ ಆಕರ್ಷಣೆಯಾಗಿತ್ತು. ಕೆಂಡ ಸಂಪಿಗೆಯ ನಾಯಕಿ ಮಾನ್ವಿತ ಅವರು ಪುನೀತ್ ರಾಜ್‍ಕುಮಾರ್ ಹಾಗೂ ದರ್ಶನ್ ಅವರ ಗೀತೆಗಳಿ ನೃತ್ಯ ಮಾಡಿ ನೆರೆದಿದ್ದವರನ್ನು ರಂಜಿಸಿದರು. ಗುರುಶಿಷ್ಯರು ಚಿತ್ರದ ನಾಯಕಿ ನಿಶ್ವಿಕ ನಾಯ್ಡು ಅವರು ತಮ್ಮದೆ ಚಿತ್ರದ ಗೀತೆಗೆ ನರ್ತಿಸಿದರು.

ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಕಲಾವಿದರ ತಂಡದಿಂದ ವೇದಿಕೆ ಮೇಲೆ ವಿವಿಧ ಪ್ರಕಾರದ ಜಾನಪದ ನೃತ್ಯಗಳನ್ನು ಮಾಡಿ ನೆರೆದಿದ್ದ ಕಲಾರಸಿಕರನ್ನು ರಂಜಿಸಿದರು. ಮೈಸೂರಿನ ಎಸ್.ಕೆ.ವಿ.ಪದವಿ ಪೂರ್ವ ಕಾಲೇಜಿನ ಬಾಲಕಿಯರು ಶಿವಾರಜ್ ಕುಮಾರ್ ಅಭಿನಯದ ಜೋಗಿ ಚಿತ್ರದ ಚೆಲ್ಲಿದರೂ ಮಲ್ಲಿಗೆಯಾ ಹಾಗೂ ಜನುಮದ ಜೋಡಿ ಚಿತ್ರದ ಶುಭವಾಗುತೈತೆ ಕಣಮೋ ಗೀತೆಗೆ, ಪುನೀತ್ ನಟಿಸಿರುವ ಹುಡುಗರು ಚಿತ್ರದ ಗಲ್ಲು ಗಲ್ಲು ಎನ್ನುತಾವು ಗೆಜ್ಜೆ ಹಾಗೂ ಸತ್ಯ ಹರಿಶ್ಚಂದ್ರ ಚಿತ್ರದ ಕುಲದಲ್ಲಿ ಕಿಳ್ಯಾವೊದು ಹಾಡಿಗೆ ಹೆಜ್ಜೆ ಹಾಕಿ ಸಭಿಕರಿಂದ ಸೈ ಎನಿಸಿಕೊಂಡರು.
Mysuru Dasara: ರಂಗಾಯಣ ಆವರಣದಲ್ಲಿ ರಾಜಋಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನಪು
ಸ್ಲಂ ಡಾಗ್ ಚಿತ್ರದ ಜೈಹೋ ಹಾಡಿಗೆ ಹಾಗೂ ಚಾಲೆಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಚಿತ್ರದ ಅಂಬಾರಿ ಊರಿನಲ್ಲಿ ಗೀತೆ ಹಾಗೂ ರವಿಚಂದ್ರನ್ ಅಭಿನಯದ ಸಿಪಾಯಿ, ಕಲಾವಿದ ಚಿತ್ರ ಸೇರಿದಂತೆ ಹಲವಾರು ಚಿತ್ರಗಳಿಗೆ ಮನಮೋಹಕವಾಗಿ ನೃತ್ಯ ಮಾಡಿದ ಸ್ಥಳೀಯ ನೃತ್ಯ ತಂಡವು ಪ್ರೇಕ್ಷಕರನ್ನು ಮೈ ಮರೆಸುವಂತೆ, ಕುಣಿಯುವಂತೆ ಮಾಡಿದರು.

ಡಾರ್ಲಿಂಗ್ ಕೃಷ್ಣ, ಅಭಿಷೇಕ್ ಅಂಬರೀಶ್, ಧನ್ವೀರ್, ಪ್ರಜ್ಞಾ, ಸೇರಿದಂತೆ ಅನೇಕ ನಟ-ನಟಿಯರು ಯುವ ದಸಾರ ಕಾರ್ಯಕ್ರಮಕ್ಕೆ ಮೆರಗು ತಂದರು.
ಮೈಸೂರು ತಾಲ್ಲೂಕಿನಲ್ಲಿ ದೇವರ ರಥಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗ್ರಾಮೀಣ ದಸರಾ ಆಚರಣೆ
ಯುಕ್ರೇನ್ ದೇಶದ ಲೇಸರ್ ಆ್ಯಕ್ಟ್ ಹಾಗೂ ಸಿಗ್ನೇಚರ್ ಗ್ರೂಪ್ ನೃತ್ಯ ತಂಡದಿಂದ ನಡೆದ ನಾಟ್ಯವು ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಶಾಸಕ ಎಲ್.ನಾಗೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಸೇರಿದಂತೆ ಇತರರು ಹಾಜರಿದ್ದರು.
ಲೇಖಕರ ಬಗ್ಗೆ
ಹೇಮಂತ್ ಕುಮಾರ್ ಎಸ್
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತನಾಗಿ 2022ರಿಂದ ಕಾರ್ಯನಿರ್ವಹಿಸುತ್ತಿರುವ ಹೇಮಂತ್ ಮಾಧ್ಯಮ ರಂಗಕ್ಕೆ ಅಧಿಕೃತ ಪ್ರವೇಶ ಆಗಿದ್ದು 2011ರಲ್ಲಿ ನ್ಯೂಸ್ ಚಾನೆಲ್ ಮೂಲಕ. ಅದಕ್ಕೂ ಹಿಂದಿನಿಂದ ವಾರಪತ್ರಿಕೆಗಳಿಗೆ ಪ್ರಚಲಿತ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಿಸಿದ ಲೇಖನಗಳ ಬರವಣಿಗೆಯಿಂದ ಬರಹದ ನಂಟು ಬೆಳೆಸಿಕೊಂಡಿದ್ದರು. ಸಿನಿಮಾ, ಕ್ರೈಂ, ರಾಜಕೀಯ, ಮೆಟ್ರೊ, ಕನ್ನಡ ಮತ್ತು ಸಂಸ್ಕೃತಿ, ಶಿಕ್ಷಣ, ರಾಷ್ಟ್ರ-ಅಂತಾರಾಷ್ಟ್ರೀಯ ವಿದ್ಯಮಾನಗಳು ಹಾಗೂ ಜಿಲ್ಲೆಗಳಲ್ಲಿನ ಬೆಳವಣಿಗೆಗಳ ಬಗ್ಗೆ ಆಸಕ್ತಿ ವಿಸ್ತರಿಸಿಕೊಂಡಿದ್ದಾರೆ. ಟಿವಿ, ಪತ್ರಿಕೆ, ಡಿಜಿಟಲ್‌/ ವೆಬ್‌, ಕೆಲ ಸಮಯ ರೇಡಿಯೊ ಚಾನೆಲ್‌ನಲ್ಲೂ ತೊಡಗಿಸಿಕೊಂಡ ಅನುಭವಿರುವ ಇವರ ಮಂತ್ರ 'ಬದುಕು ನಿರಂತರ'. ಚಾರಣ, ರಂಗಭೂಮಿ, ಪ್ರವಾಸ, ಓದು,...ಹೀಗೆ ಒಂದಷ್ಟು ಅಭ್ಯಾಸ-ಹವ್ಯಾಸಗಳು ಜೊತೆಗಿವೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ