ಆ್ಯಪ್ನಗರ

ಕನ್ನಡ ಸಮ್ಮೇಳನ: ಪ್ರತಿನಿಧಿಗಳಿಗೆ ಝೂಗೆ ಉಚಿತ ಪ್ರವೇಶ

ಮಲ್ಲಿಗೆ ನಗರಿ ಮೈಸೂರಿನಲ್ಲಿ ನ.24ರಿಂದ 26ರವರೆಗೆ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ನೋಂದಾಯಿತ ಪ್ರತಿನಿಧಿಗಳಿಗೆ ಚಾಮರಾಜೇಂದ್ರ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

Vijaya Karnataka 23 Nov 2017, 10:47 pm

ಮೈಸೂರು: ಮಲ್ಲಿಗೆ ನಗರಿ ಮೈಸೂರಿನಲ್ಲಿ ನ.24ರಿಂದ 26ರವರೆಗೆ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇಳೆ ನೋಂದಾಯಿತ ಪ್ರತಿನಿಧಿಗಳಿಗೆ ಚಾಮರಾಜೇಂದ್ರ ಮೃಗಾಲಯಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ.

''ಸಮ್ಮೇಳನದ ವೇಳೆ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಸಂಭ್ರಮದ ಸಮಯದಲ್ಲಿ ಮೈಸೂರು ಮೃಗಾಲಯ 125ನೇ ವರ್ಷಾಚರಣೆ ಆಚರಿಸುತ್ತಿದೆ. ಅಕ್ಷರ ಜಾತ್ರೆಯ ಅಂಗವಾಗಿ ಸಮ್ಮೇಳನಕ್ಕೆ ದೇಶದ ಮತ್ತು ನಾಡಿನ ವಿವಿಧೆಡೆಗಳಿಂದ ಆಗಮಿಸಿ ಅಧಿಕೃತವಾಗಿ ನೋಂದಾಯಿಸಿಕೊಂಡಿರುವ ಸಾಹಿತ್ಯಾಸಕ್ತ ಪ್ರತಿನಿಧಿಗಳಿಗೆ ಮೃಗಾಲಯಕ್ಕೆ ಮೂರು ದಿನಗಳು (ನ. 24ರಿಂದ 26ರವರೆಗೆ) ಉಚಿತ ಪ್ರವೇಶ ಕಲ್ಪಿಸಲಾಗಿದೆ,'' ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್‌ ತಿಳಿಸಿದ್ದಾರೆ.

''ಕನ್ನಡದ ಹಬ್ಬ ನಮ್ಮ ಮೈಸೂರಿನಲ್ಲಿ ನಡೆಯುತ್ತಿರುವುದು ಸಂತಸ ತಂದಿದ್ದು, ಸಾಹಿತ್ಯಾಸಕ್ತರಿಗೆ ವಿಶೇಷ ಉಚಿತ ಪ್ರವೇಶ ಸೌಲಭ್ಯ ಕಲ್ಪಿಸಲಾಗಿದೆ. ಸಾಹಿತ್ಯಾಸಕ್ತರು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ಪ್ರವೇಶ ಪಡೆಯಬಹುದಾಗಿದೆ,'' ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ