ಆ್ಯಪ್ನಗರ

ನಾಳೆ ಕನ್ನಡ ವೈದ್ಯ ಬರಹಗಾರರ ಪ್ರಥಮ ರಾಜ್ಯ ಸಮ್ಮೇಳನ

ಭಾರತೀಯ ವೈದ್ಯಕೀಯ ಸಂಘ ರಾಜ್ಯ ಶಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಕನ್ನಡ ವೈದ್ಯ ಬರಹಗಾರರ ಪ್ರಥಮ ರಾಜ್ಯ ಸಮ್ಮೇಳನ ಮಾ. 17ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.

Vijaya Karnataka 16 Mar 2019, 5:00 am
ಮೈಸೂರು : ಭಾರತೀಯ ವೈದ್ಯಕೀಯ ಸಂಘ ರಾಜ್ಯ ಶಾಖೆ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಕನ್ನಡ ವೈದ್ಯ ಬರಹಗಾರರ ಪ್ರಥಮ ರಾಜ್ಯ ಸಮ್ಮೇಳನ ಮಾ. 17ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.
Vijaya Karnataka Web nale kannada vaidya barahagarara prathama rajya sammalana
ನಾಳೆ ಕನ್ನಡ ವೈದ್ಯ ಬರಹಗಾರರ ಪ್ರಥಮ ರಾಜ್ಯ ಸಮ್ಮೇಳನ


ಬೆಳಗ್ಗೆ 10.30ರಿಂದ ಸಂಜೆ 5ರವರೆಗೆ ಶಾರದಾ ವಿಲಾಸ ಕಾನೂನು ಕಾಲೇಜು ಆವರಣದಲ್ಲಿರುವ ಎಂ.ವೆಂಕಟಕೃಷ್ಣಯ್ಯ ಸಭಾಂಗಣದಲ್ಲಿ ನಿಯೋಜಿತ ಸರ್ವಾಧ್ಯಕ್ಷ ಡಾ.ಎಸ್‌.ಪಿ.ಯೋಗಣ್ಣ ಅವರ ಬದುಕು ಮತ್ತು ಬರಹ ವಿಚಾರ ಸಂಕಿರಣ ನಡೆಯಲಿದೆ.

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಉದ್ಘಾಟಿಸಲಿದ್ದು, ಐಎಂಎ ರಾಜ್ಯ ಶಾಖೆ ನಿಯೋಜಿತ ಅಧ್ಯಕ್ಷ ಡಾ.ಮಧುಸೂದನ ಕಾರಿಗನೂರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಎಸ್‌.ಪಿ.ಯೋಗಣ್ಣನವರ ಕುರಿತ ಕಿರು ಹೊತ್ತಗೆಯನ್ನು ನಿವೃತ್ತ ವೈದ್ಯಶಾಸ್ತ್ರ ಪ್ರಾಧ್ಯಾಪಕ ಡಾ.ಎಸ್‌.ಚಿಕ್ಕಮೊಗ ಬಿಡುಗಡೆ ಮಾಡಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಎರಡು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಸಂಜೆ 4.15ಕ್ಕೆ ಸಂವಾದ, 5.15ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ ಎಂದರು.

ಐಎಂಎ ರಾಜ್ಯಶಾಖೆ ಹಿರಿಯ ಉಪಾಧ್ಯಕ್ಷ ಡಾ.ಸುರೇಶ್‌ ರುದ್ರಪ್ಪ, ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ನೀಲಕಂಠ ತಮ್ಮಣ್ಣಗೌಡ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್‌, ಅನಂತಮೂರ್ತಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ