ಆ್ಯಪ್ನಗರ

ನಂ.ಗೂಡು: ಗಿರಿಜಾ ಕಲ್ಯಾಣ ಮಹೋತ್ಸವ ಆರಂಭ

ಪುರಾಣ ಪ್ರಸಿದ್ಧ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ಗಿರಿಜಾ ಕಲ್ಯಾಣ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಆರಂಭಗೊಂಡಿತು.

Vijaya Karnataka 1 Jul 2018, 5:00 am
ನಂಜನಗೂಡು: ಪುರಾಣ ಪ್ರಸಿದ್ಧ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ಗಿರಿಜಾ ಕಲ್ಯಾಣ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಆರಂಭಗೊಂಡಿತು.
Vijaya Karnataka Web nanjanagudu girija kalyana jubilee begins
ನಂ.ಗೂಡು: ಗಿರಿಜಾ ಕಲ್ಯಾಣ ಮಹೋತ್ಸವ ಆರಂಭ


ಮೊದಲ ದಿನವೇ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪಾಲ್ಗೊಂಡು ಧಾರ್ಮಿಕ ಪೂಜಾ ಕಾರ‍್ಯ ನೆರವೇರಿಸಿದರು.

ಗಿರಿಜಾ ಕಲ್ಯಾಣ ಮಹೋತ್ಸವದ ಮೊದಲ ದಿನದ ಧಾರ್ಮಿಕ ಪೂಜಾ ಕಾರ‍್ಯಗಳು ಸಂಜೆ 5ರ ಸುಮಾರಿಗೆ ದೇವಾಲಯದ ಒಳಾವರಣದಲ್ಲಿ ವಿಧ್ಯುಕ್ತವಾಗಿ ಆರಂಭಗೊಂಡಿತು. ಸರ್ವಾಲಂಕೃತ ಶ್ರೀಕಂಠೇಶ್ವರಸ್ವಾಮಿ ಹಾಗೂ ಪಾರ್ವತಿ ದೇವಿಯ ಉತ್ಸವಮೂರ್ತಿಗಳನ್ನು ಮಂಗಳವಾದ್ಯಗೋಷ್ಠಿಯೊಂದಿಗೆ ದೇವಾಲಯದ ರಥ ಬೀದಿಯಲ್ಲಿ ಮೆರವಣಿಗೆ ನೆರವೇರಿಸಿ ಬಳಿಕ ದೇವಾಲಯದ ಒಳಾವರಣದ ಕಲ್ಯಾಣ ಮಂಪಟದಲ್ಲಿ ಪ್ರತಿಷ್ಠಾಪಿಸಲಾಯಿತು. ನಂತರ ರಾತ್ರಿ 8ರ ಸಮಯದಲ್ಲಿ ಜರುಗಿದ ವರಪೂಜಾ ಮಹೋತ್ಸವದಲ್ಲಿ ರಾಜವಂಶಸ್ಥ ಯದುವೀರ್‌ ಪಾಲ್ಗೊಂಡು ದೇವಾಲಯದ ಅರ್ಚಕರ ಮಾರ್ಗದರ್ಶನದಲ್ಲಿ ಧಾರ್ಮಿಕ ಪೂಜಾ ಕಾರ‍್ಯವನ್ನು ನೆರವೇರಿಸಿದರು.

ಇದಕ್ಕೂ ಮುನ್ನ ದೇವಾಲಯಕ್ಕೆ ಆಗಮಿಸಿದ ಯದುವೀರ್‌ ಅವರನ್ನು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ.ಕುಮಾರಸ್ವಾಮಿ, ಎಇಒ ಗಂಗಯ್ಯ, ಪ್ರಧಾನ ಆಗಮಿಕ ಜೆ.ನಾಗಚಂದ್ರ ದೀಕ್ಷಿತ್‌ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡರು. ಬಳಿಕ ಯದುವೀರ್‌, ಶ್ರೀಕಂಠೇಶ್ವರಸ್ವಾಮಿ ಗರ್ಭಗುಡಿ, ಪಾರ್ವತಿ, ಸುಬ್ರಹ್ಮಣ್ಯೇಶ್ವರ, ಚಂಡೀಕೇಶ್ವರ ಗುಡಿಗಳಲ್ಲಿ ಪೂಜೆ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ