ಆ್ಯಪ್ನಗರ

ಶ್ರೀಕಂಠೇಶ್ವರನಿಗೆ 2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥ; ನಿರ್ಮಾಣ ಸೇವೆಗೆ ಶಾಸಕ ಹರ್ಷವರ್ಧನ್ ಚಾಲನೆ

ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಿ ರಥ ಮತ್ತು 75 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ಮೂರು ವರ್ಷಗಳ ನಂತರ ಇಂದು ನಾನು ಕಾರ್ಯರೂಪಕ್ಕೆ ತರುತ್ತಿದ್ದೇನೆ. ಸುಮಾರು 2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥವನ್ನು ನಿರ್ಮಾಣ ಮಾಡಲಾಗುತ್ತದೆ. 16 ಅಡಿ ಎತ್ತರ, 6 ಅಡಿ ಅಗಲದ ಬೆಳ್ಳಿರಥವನ್ನು 8 ತಿಂಗಳಲ್ಲಿ ಮಾಡಿ ಮುಗಿಸುವುದಾಗಿ ತಿಳಿಸಿದರು. ರಥ ನಿರ್ಮಾಣದ ಗುತ್ತಿಗೆ ಪಡೆದಿರುವ ಶಿಲ್ಪಿಗಳು ಮರ ಕೆತ್ತನೆ ಮಾಡಿ ಬೆಳ್ಳಿಯ ತಗಡನ್ನು ಹೊದಿಸುವ ಮೂಲಕ ರಥ ನಿರ್ಮಾಣಕ್ಕೆ ಚಾಲನೆ ನೀಡಿದರು.

Edited byಚೇತನ್ ಓ.ಆರ್. | Vijaya Karnataka Web 14 Oct 2022, 7:23 pm
ನಂಜನಗೂಡು: ನಂಜನಗೂಡು ಪಟ್ಟಣದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿರಥ ನಿರ್ಮಾಣಕ್ಕೆ ಶಾಸಕ ಬಿ. ಹರ್ಷವರ್ಧನ್ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.
Vijaya Karnataka Web Nanjanagudu MLA Harshavardhan give start to silver chariot making works for Nanjanagudu Srikanteshwara worth Rs. 2.90 crore
ನಂಜನಗೂಡು ದೇವಾಲಯದಲ್ಲಿ ಬೆಳ್ಳಿ ರಥ ನಿರ್ಮಾಣ ಕುರಿತ ಹೋಮಕ್ಕೆ ಚಾಲನೆ ನೀಡಿದ ಶಾಸಕ ಹರ್ಷವರ್ದನ್.


ಬಳಿಕ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಿ ರಥ ಮತ್ತು 75 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ರಥ ಸೇವೆಯ ಪರಿಕಲ್ಪನೆಯನ್ನು ಮೂರು ವರ್ಷಗಳ ನಂತರ ಇಂದು ನಾನು ಕಾರ್ಯರೂಪಕ್ಕೆ ತರುತ್ತಿದ್ದೇನೆ. ಸುಮಾರು 2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥವನ್ನು ನಿರ್ಮಾಣ ಮಾಡಲಾಗುತ್ತದೆ. 16 ಅಡಿ ಎತ್ತರ, 6 ಅಡಿ ಅಗಲದ ಬೆಳ್ಳಿರಥವನ್ನು 8 ತಿಂಗಳಲ್ಲಿ ಮಾಡಿ ಮುಗಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಬೇಕಿತ್ತು, ಆದರೆ ಪಕ್ಷದ ಕಾರ್ಯಕ್ರಮ ಇರುವುದರಿಂದ ಅವರು ಬಂದಿಲ್ಲ. ಅದಕ್ಕೆ ತಡ ಮಾಡುವುದು ಬೇಡ ಎಂದು ಜನರಿಗೆ ಕೊಟ್ಟ ಭರವಸೆಯಂತೆ ನಾನು ಇಂದು ಬೆಳ್ಳಿರಥ ನಿರ್ಮಾಣಕ್ಕೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.

Nanjangud | ಶ್ರೀಕಂಠೇಶ್ವರಸ್ವಾಮಿ ದೇಗುಲ ಮುಂಭಾಗದಿಂದ ಅದ್ಧೂರಿ ಜಾಥಾ: ದಸರಾ ಆನೆ ಗೋಪಿಗೆ ಪೂಜೆ
ಇದೇ ಸಂದರ್ಭದಲ್ಲಿ, ರಥ ನಿರ್ಮಾಣದ ಗುತ್ತಿಗೆ ಪಡೆದಿರುವ ಶಿಲ್ಪಿಗಳಾದ ಮುರುಡೇಶ್ವರದ ಗಂಗಾಧರಗಜಾನನ ಹಾಗೂ ಕೃಷ್ಣಮೂರ್ತಿ ಆಚಾರ್ ಅವರು ಮರ ಕೆತ್ತನೆ ಮಾಡಿ ಬೆಳ್ಳಿಯ ತಗಡನ್ನು ಹೊದಿಸುವ ಮೂಲಕ ರಥ ನಿರ್ಮಾಣಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಮಹದೇವಸ್ವಾಮಿ, ಬಿಜೆಪಿ ಅಧ್ಯಕ್ಷ ಮಹೇಶ್, ಮುಖಂಡರಾದ ಚಿಕ್ಕರಂಗನಾಯಕ ಸುಬ್ಬಣ್ಣ ಬಾಲಚಂದ್ರು ಪುಟ್ಟಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.


ನಂಜನಗೂಡು ಭಕ್ತರ ನೆಚ್ಚಿನ ತಾಣ..!

ನಂಜನಗೂಡು ಹಲವರಿಗೆ ಅತ್ಯಂತ ನಂಬಿಕೆಯ ಪುಣ್ಯಕ್ಷೇತ್ರ. ಪ್ರತಿನಿತ್ಯ ಇಲ್ಲಿಗೆ ಸಾವಿರಾರು ಜನರು ಆಗಮಿಸಿ ಶ್ರೀಕಂಠೇಶ್ವರನ ದರ್ಶನ ಪಡೆಯುತ್ತಾರೆ.ಇದೀಗ ಬೆಳ್ಳಿ ರಥ ಕೂಡ ನಿರ್ಮಾಣವಾಗುತ್ತಿದ್ದು, ಭಕ್ತರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ಕೇರಳ , ತಮಿಳುನಾಡು ಆಂಧ್ರ ರಾಜ್ಯದಿಂದಲೂ ನಂಜನಗೂಡಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸುವುದು ಹೆಚ್ಚಾಗಿದೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ