ಮೈಸೂರು: ಡ್ರಗ್ಸ್ ಮಾಫಿಯಾ ವಿಚಾರದಲ್ಲಿ ಯಾರನ್ನು ಕೈ ಬಿಡುವ ಮಾತೇ ಇಲ್ಲ. ರಾಗಿಣಿ ಬಂಧನದಿಂದ ಬಿಜೆಪಿಗೆ ಯಾವುದೇ ಮುಜುಗರವಿಲ್ಲ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ರಾಗಿಣಿ ಸಿಲುಕಿದ್ದು ಸಿಸಿಬಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ತೆಗೆದುಕೊಳ್ಳಿ ಎಂದು ಬಿಜೆಪಿ ರಾಗಿಣಿಗೆ ಹೇಳಿರಲಿಲ್ಲ. ಡ್ರಗ್ಸ್ ವಿಚಾರದಲ್ಲಿ ಆ ಪಕ್ಷ ಈ ಪಕ್ಷ ಅಂತ ಬರಲ್ಲ. ಯಾವ ಪಕ್ಷದವರು ತಪ್ಪು ಮಾಡಿದರೂ ಅದು ತಪ್ಪೇ. ಈ ಸಂಬಂಧ ಯಾರು ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವಂತೆ ಕ್ಯಾಬಿನೆಟ್ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಒಂದರ್ಥದಲ್ಲಿ ಚಿತ್ರ ನಟ- ನಟಿಯರಿಗೆ ಸಮಾಜದಲ್ಲಿ ಜನಪ್ರಿಯತೆ ಇರುವುದು ಸಾಮಾನ್ಯ. ಅವರೇ ಡ್ರಗ್ಸ್ ಸೇವನೆ ಮಾಡಿದರೇ ಸಮಾಜಕ್ಕೆ ಯಾವ ರೀತಿ ಸಂದೇಶ ರವಾನೆ ಆಗುತ್ತದೆ ಎಂಬುದನ್ನು ತಿಳಿಯಬೇಕು. ಆದ್ದರಿಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಜಾನುವಾರುಗಳ ರಕ್ಷಣೆಗೂ ಬಂತು ಆಂಬ್ಯುಲೆನ್ಸ್ ವ್ಯವಸ್ಥೆ!
ಖುದ್ದು ಮುಖ್ಯಮಂತ್ರಿಗಳೇ ಪ್ರತಿ ದಿನವೂ ಡ್ರಗ್ಸ್ ಪ್ರಕರಣದ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಡ್ರಗ್ಸ್ ನಿಂದ ಯುವ ಸಮೂಹ ಹಾಳಾಗುತ್ತದೆ. ಆದ್ದರಿಂದ ಡ್ರಗ್ಸ್ ವಿಚಾರದಲ್ಲಿ ಎಷ್ಟೇ ಪ್ರಭಾವ ಇರಲಿ, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ಹಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಅವರೇ ಮುಖ್ಯಮಂತ್ರಿಯಾಗಿದ್ದರು. ಅವರಿಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಪವರ್ ಇತ್ತು. ಯಾಕೆ ಅವರೇ ಖುದ್ದು ಕ್ರಮ ತೆಗೆದುಕೊಳ್ಳಲಿಲ್ಲ. ಅವರಿಗೆ ಅಧಿಕಾರದಲ್ಲಿದ್ದಾಗ ಗೊತ್ತಾಗಿಲ್ಲವಾ? ಈಗ ಅಧಿಕಾರ ಇಲ್ಲ. ಅದಕ್ಕೆ ಮಾತಾಡ್ತಿದ್ದಾರೆ. ಡ್ರಗ್ಸ್ ಹಣ ಬಳಸಿ ಸರ್ಕಾರ ಮಾಡುವ ದುರ್ಬುದ್ಧಿ ನಮ್ಮ ಬಿಜೆಪಿಗಿಲ್ಲ ಎಂದರು.
ಮತ್ತೆ ಲಕ್ಷ ಸಮೀಪಿಸಿದ ಸಕ್ರಿಯ ಪ್ರಕರಣ: ಒಂದೇ ದಿನ 9746 ಸೋಂಕು!
ದಸರಾ ಉತ್ಸವದ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರಿನಲ್ಲಿ ಸೆ.8ಕ್ಕೆ ಹೈಪರ್ ಕಮಿಟಿ ಸಭೆ ನಡೆಯತ್ತದೆ. ಅದಾದ ನಂತರ ಮೈಸೂರಿನಲ್ಲಿಯೂ ಸಭೆ ನಡೆಯತ್ತದೆ. ಹೈಪವರ್ ಕಮಿಟಿಯಲ್ಲಿ ಏನು ತೀರ್ಮಾನ ಮಾಡ್ತಾರೆ ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಟಿ ರಾಗಿಣಿ ಸಿಲುಕಿದ್ದು ಸಿಸಿಬಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಡ್ರಗ್ಸ್ ತೆಗೆದುಕೊಳ್ಳಿ ಎಂದು ಬಿಜೆಪಿ ರಾಗಿಣಿಗೆ ಹೇಳಿರಲಿಲ್ಲ. ಡ್ರಗ್ಸ್ ವಿಚಾರದಲ್ಲಿ ಆ ಪಕ್ಷ ಈ ಪಕ್ಷ ಅಂತ ಬರಲ್ಲ. ಯಾವ ಪಕ್ಷದವರು ತಪ್ಪು ಮಾಡಿದರೂ ಅದು ತಪ್ಪೇ. ಈ ಸಂಬಂಧ ಯಾರು ತಪ್ಪು ಮಾಡಿದರೂ ಕ್ರಮ ಕೈಗೊಳ್ಳುವಂತೆ ಕ್ಯಾಬಿನೆಟ್ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಒಂದರ್ಥದಲ್ಲಿ ಚಿತ್ರ ನಟ- ನಟಿಯರಿಗೆ ಸಮಾಜದಲ್ಲಿ ಜನಪ್ರಿಯತೆ ಇರುವುದು ಸಾಮಾನ್ಯ. ಅವರೇ ಡ್ರಗ್ಸ್ ಸೇವನೆ ಮಾಡಿದರೇ ಸಮಾಜಕ್ಕೆ ಯಾವ ರೀತಿ ಸಂದೇಶ ರವಾನೆ ಆಗುತ್ತದೆ ಎಂಬುದನ್ನು ತಿಳಿಯಬೇಕು. ಆದ್ದರಿಂದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಜಾನುವಾರುಗಳ ರಕ್ಷಣೆಗೂ ಬಂತು ಆಂಬ್ಯುಲೆನ್ಸ್ ವ್ಯವಸ್ಥೆ!
ಖುದ್ದು ಮುಖ್ಯಮಂತ್ರಿಗಳೇ ಪ್ರತಿ ದಿನವೂ ಡ್ರಗ್ಸ್ ಪ್ರಕರಣದ ವಿವರಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಡ್ರಗ್ಸ್ ನಿಂದ ಯುವ ಸಮೂಹ ಹಾಳಾಗುತ್ತದೆ. ಆದ್ದರಿಂದ ಡ್ರಗ್ಸ್ ವಿಚಾರದಲ್ಲಿ ಎಷ್ಟೇ ಪ್ರಭಾವ ಇರಲಿ, ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದರು.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ಹಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಈ ಹಿಂದೆ ಅವರೇ ಮುಖ್ಯಮಂತ್ರಿಯಾಗಿದ್ದರು. ಅವರಿಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವ ಪವರ್ ಇತ್ತು. ಯಾಕೆ ಅವರೇ ಖುದ್ದು ಕ್ರಮ ತೆಗೆದುಕೊಳ್ಳಲಿಲ್ಲ. ಅವರಿಗೆ ಅಧಿಕಾರದಲ್ಲಿದ್ದಾಗ ಗೊತ್ತಾಗಿಲ್ಲವಾ? ಈಗ ಅಧಿಕಾರ ಇಲ್ಲ. ಅದಕ್ಕೆ ಮಾತಾಡ್ತಿದ್ದಾರೆ. ಡ್ರಗ್ಸ್ ಹಣ ಬಳಸಿ ಸರ್ಕಾರ ಮಾಡುವ ದುರ್ಬುದ್ಧಿ ನಮ್ಮ ಬಿಜೆಪಿಗಿಲ್ಲ ಎಂದರು.
ಮತ್ತೆ ಲಕ್ಷ ಸಮೀಪಿಸಿದ ಸಕ್ರಿಯ ಪ್ರಕರಣ: ಒಂದೇ ದಿನ 9746 ಸೋಂಕು!
ದಸರಾ ಉತ್ಸವದ ಕುರಿತು ಪ್ರತಿಕ್ರಿಯಿಸಿ, ಬೆಂಗಳೂರಿನಲ್ಲಿ ಸೆ.8ಕ್ಕೆ ಹೈಪರ್ ಕಮಿಟಿ ಸಭೆ ನಡೆಯತ್ತದೆ. ಅದಾದ ನಂತರ ಮೈಸೂರಿನಲ್ಲಿಯೂ ಸಭೆ ನಡೆಯತ್ತದೆ. ಹೈಪವರ್ ಕಮಿಟಿಯಲ್ಲಿ ಏನು ತೀರ್ಮಾನ ಮಾಡ್ತಾರೆ ಅಂತ ನಾನು ಹೇಳಲು ಸಾಧ್ಯವಿಲ್ಲ ಎಂದರು.