ಆ್ಯಪ್ನಗರ

ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ಗೆ ವಿರೋಧ ವ್ಯಕ್ತವಾದರೆ ಸ್ಥಗಿತ: ಸಿಎಂ

ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ ಆಚರಣೆಗೆ ಜನರಿಂದ ವಿರೋಧ ವ್ಯಕ್ತವಾದರೆ ಸ್ಥಗಿತಗೊಳಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

Vijaya Karnataka 20 Oct 2018, 5:00 am
ಮೈಸೂರು : ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ ಆಚರಣೆಗೆ ಜನರಿಂದ ವಿರೋಧ ವ್ಯಕ್ತವಾದರೆ ಸ್ಥಗಿತಗೊಳಿಸುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.
Vijaya Karnataka Web opposition to open street festival breaksdown cm
ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ಗೆ ವಿರೋಧ ವ್ಯಕ್ತವಾದರೆ ಸ್ಥಗಿತ: ಸಿಎಂ


ದಸರಾ ಮಹೋತ್ಸವದ ಪ್ರಯುಕ್ತ ಅ. 13ರಂದು ಕೃಷ್ಣ ಬುಲೇವಾರ್ಡ್‌ ರಸ್ತೆಯಲ್ಲಿ ನಡೆದ 'ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌' ನಲ್ಲಿ ಕೆಲ ಯುವತಿಯರಿಗೆ ಕಿರುಕುಳ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಪ್ರಸ್ತಾಪಿಸಿದ ಸಿಎಂ, ಸರಕಾರ ಪರ ವಿಷಾದ ವ್ಯಕ್ತಪಡಿಸಿದರು.

''ಘಟನೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಂಡು ಪರಿಶೀಲಿಸಿದೆ. ತೆರೆದ ಬೀದಿ ಉತ್ಸವದಲ್ಲಿ ನಿರೀಕ್ಷೆಗೂ ಮೀರಿ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಸೇರಿದ್ದರು. ಇಂಥ ಸಮಯದಲ್ಲಿ ಲೋಪವಾಗಿದೆ ಎಂದು ಅಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ. ಮುಂದಿನ ಬಾರಿ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗುವುದು'' ಎಂದು ಭರವಸೆ ನೀಡಿದರು.

''ಸಾಂಸ್ಕೃತಿಕತೆಯ ಪ್ರತೀಕವಾದ ದಸರಾ ಮಹೋತ್ಸವದ ವೇಳೆ ಓಪನ್‌ ಸ್ಟ್ರೀಟ್‌ ಫೆಸ್ಟಿವಲ್‌ ಆಚರಣೆ ಬೇಕಿತ್ತೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ''ಉತ್ಸವಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾದರೆ ಸ್ಥಗಿತಗೊಳಿಸಲಾಗುವುದು'' ಎಂದರು.

ಮುಖ್ಯಮಂತ್ರಿ ಅವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಿದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌, ''ಎರಡನೇ ಬಾರಿ ನಡೆದ ತೆರೆದ ಬೀದಿ ಉತ್ಸವ ಸಂಪೂರ್ಣ ಯಶಸ್ವಿಯಾಗಿದೆ. ಒಂದೇ ದಿನ 1.25 ಲಕ್ಷ ಮಂದಿ ಸೇರಿದ್ದು, ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಫೆಸ್ಟಿವಲ್‌ ಯಶಸ್ವಿಯಾಗಿದೆ. ಸಣ್ಣ ಪುಟ್ಟ ತೊಂದರೆಗಳಾಗಿದ್ದರೂ ಜನ ಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ'', ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ