ಆ್ಯಪ್ನಗರ

ಮೈಸೂರಿನಲ್ಲಿ ಭತ್ತ, ರಾಗಿ ಖರೀದಿ ಕೇಂದ್ರ ಆರಂಭ; ಈಡೇರಿತು ರೈತರ ಬಹುದಿನದ ಬೇಡಿಕೆ

ರೈತರ ಬಹುದಿನದ ಬೇಡಿಕೆಗೆ ಸರ್ಕಾರ ಕಡೆಗೂ ಸ್ಪಂದಿಸಿದೆ. ಮೈಸೂರು- ನಂಜನಗೂಡು ಎಪಿಎಂಸಿ ಯಾರ್ಡ್ ನಲ್ಲಿ ಭತ್ತ ಹಾಗೂ ರಾಗಿ ಖರೀದಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಖರೀದಿ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿದರು. ಇದೇ ವೇಳೆ, ಕೊಬ್ಬರಿ ಖರೀದಿ ಕೇಂದ್ರ ಸ್ಥಾಪಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿರುವುದಾಗಿ ಅವರು ತಿಳಿಸಿದರು. ಒಂದೆರಡು ದಿನದಲ್ಲಿ ತೊಗರಿಗೂ ಬೆಂಬಲ ಬೆಲೆ ಘೋಷಿಸಲಾಗುವುದು ಎಂದು ತಿಳಿಸಿದರು.

Edited byಚೇತನ್ ಓ.ಆರ್. | Vijaya Karnataka Web 25 Jan 2023, 8:19 am

ಹೈಲೈಟ್ಸ್‌:

  • ರೈತರ ಬಹುದಿನದ ಬೇಡಿಕೆಗೆ ಸರ್ಕಾರದಿಂದ ಸ್ಪಂದನೆ.
  • ಮೈಸೂರು- ನಂಜನಗೂಡು ಎಪಿಎಂಸಿ ಯಾರ್ಡ್ ನಲ್ಲಿ ಭತ್ತ ಹಾಗೂ ರಾಗಿ ಖರೀದಿ ಕೇಂದ್ರ ಸ್ಥಾಪನೆ.
  • ಖರೀದಿ ಕೇಂದ್ರವನ್ನು ಉದ್ಘಾಟಿಸಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್.
  • ಇದೇ ವೇಳೆ, ಕೊಬ್ಬರಿ ಖರೀದಿ ಕೇಂದ್ರ ಸ್ಥಾಪಿಸಲು ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿರುವುದಾಗಿ ತಿಳಿಸಿದ ಸಚಿವರು.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Ragi
ಮೈಸೂರು: ರೈತರ ಬಹುದಿನದ ಬೇಡಿಕೆಯಾದ ಭತ್ತ, ರಾಗಿ ಖರೀದಿಗೆ ಕೇಂದ್ರಕ್ಕೆ ಕೊನೆಗೂ ಚಾಲನೆ ದೊರೆತಿದೆ. ಜಿಲ್ಲಾಡಳಿತ, ಆಹಾರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕೃಷಿ ವಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ವಾರಾಟ ಮಂಡಳಿ ಸಹಯೋಗದಲ್ಲಿ ನಂಜನಗೂಡು ರಸ್ತೆಯಲ್ಲಿ ಬಂಡಿಪಾಳ್ಯದಲ್ಲಿರುವ ಎಪಿಎಂಸಿ ಪ್ರಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌, ಭತ್ತ, ರಾಗಿಗೆ ಪೂಜೆ ಸಲ್ಲಿಸುವ ಮೂಲಕ ಕೇಂದ್ರ ಉದ್ಘಾಟಿಸಿದರು. ಬಳಿಕ ರೈತರು ತಂದಿದ್ದ ಭತ್ತ, ರಾಗಿ ಚೀಲಗಳನ್ನು ತೂಕ ಹಾಕುವ ಮೂಲಕ ಖರೀದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ''ರಾಜ್ಯದಲ್ಲಿಬೆಂಬಲ ಬೆಲೆಯಡಿ 50 ಲಕ್ಷ ಭತ್ತ ,ರಾಗಿ ಕ್ವಿಂಟಾಲ್‌ ಖರೀದಿಸಲು ಕೇಂದ್ರ ಸರಕಾರ ಅನುಮತಿ ನೀಡಿದೆ. ಈಗಾಗಲೇ 11 ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಶುರುವಾಗಿದೆ'' ಎಂದು ಅವರು ಹೇಳಿದರು. ''ರಾಜ್ಯಕ್ಕೆ ಅಗತ್ಯವಿರುವ ರಾಗಿಯನ್ನು ಉಳಿಸಿಕೊಂಡು ಉಳಿದನ್ನು ಬೇರೆ ಕಡೆಗೆ ಕಳುಹಿಸುವಂತೆ ಹೇಳಿದೆ. ಮುಂದಿನ ದಿನಗಳಲ್ಲಿ ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ ಒಂದೆರಡು ದಿನದಲ್ಲಿ ತೊಗರಿಗೂ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು'' ಎಂದರು.

ಒಂದು ಆ್ಯಂಬುಲೆನ್ಸ್ ಗೂ ಜಾಗ ಕೊಡದಷ್ಟು ಕಿಷ್ಕಿಂದೆಯಾಗಿರುವ ಮೈಸೂರು ಎಂಜಿ ರಸ್ತೆ
''ರೈತರಿಗೆ ಮೊದಲ ಬಾರಿಗೆ 3 ಸಾವಿರಕ್ಕೂ ಹೆಚ್ಚು ಬೆಲೆ ನೀಡಿ ಭತ್ತ ಖರೀದಿ ಮಾಡಲಾಗುತ್ತಿದೆ'' ಎಂದು ಮಾಹಿತಿ ನೀಡಿದರು. ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ''ರೈತರಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಿ ಖರೀದಿ ಮಾಡಲು ರಾಜ್ಯ ಸರಕಾರ ತೀರ್ಮಾನ ಮಾಡಿದ್ದು, ದಲ್ಲಾಳಿಗಳ ಮೊರೆ ಹೋಗದೇ ರೈತರು ನೇರವಾಗಿ ತಂದು ಕೊಡಬೇಕು. ಇದರಿಂದ ಹೆಚ್ಚು ಆದಾಯ ಗಳಿಸಬಹುದು'' ಎಂದು ಹೇಳಿದರು.

''ನಬಾರ್ಡ್‌ ಮೂಲಕ 30 ಕೋಟಿ ರೂ.ಅನುದಾನವನ್ನು ಕೊಡಿಸಿ ಎಪಿಎಂಸಿ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರು ಮುಂದಾಗಿರುವುದು ಶ್ಲಾಘನೀಯ,'' ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮೇಯರ್‌ ಶಿವಕುಮಾರ್‌, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ ಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕಿ ಕುಮುದಾ, ರಾಜ್ಯ ಕೃಷಿ ಮಾರಾಟ ಮಂಡಳಿ ಮುಖ್ಯ ಪ್ರಧಾನ ವ್ಯವಸ್ಥಾಪಕ ಚಂದ್ರಕಾಂತ ಪಾಟೀಲ..., ಪ್ರಧಾನ ವ್ಯವಸ್ಥಾಪಕಿ ಪುಷ್ಪಾ, ಮೈಸೂರು ಎಪಿಎಂಸಿ ಕಾರ್ಯದರ್ಶಿ ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಎಸ್‌.ಚಂದ್ರಶೇಖರ್‌,ಪಿರಿಯಾಪಟ್ಟಣ ಎಪಿಎಂಸಿ ಕಾರ್ಯದರ್ಶಿ ರೇವತಿ ಇದ್ದರು.

ಮೈಸೂರಿಗೆ ಹೆಚ್ಚು ಎಲೆಕ್ಟ್ರಿಕ್‌ ಬಸ್‌ ಸೇವೆ; ಸಾವಿರ ಬಸ್ ಗಳ ಖರೀದಿಗೆ ಕೆಎಸ್ ಆರ್ ಟಿಸಿ ಚಿಂತನೆ
ಏಳು ತಾಲೂಕುಗಳಲ್ಲಿ ಖರೀದಿ ಕೇಂದ್ರ

ಬೆಂಬಲ ಬೆಲೆಯಲ್ಲಿಖರೀದಿ: 2022-2023 ನೇ ಸಾಲಿನ ಮುಂಗಾರು ಋುತುವಿನ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿಮಾ.31 ರವರೆಗೆ ಜಿಲ್ಲೆಯ ಏಳು ತಾಲೂಕುಗಳಲ್ಲಿತೆರೆದಿರುವ ಕೇಂದ್ರಗಳಲ್ಲಿಖರೀದಿ ಮಾಡಲಾಗುತ್ತದೆ. ಪ್ರತಿ ಕ್ವಿಂಟಾಲ್... ಸಾಮಾನ್ಯ ಭತ್ತವನ್ನು 2040 ರೂ., ಗ್ರೇಡ್‌ -ಎ ಭತ್ತವನ್ನು 2060 ರೂ., ರಾಗಿಯನ್ನು 3578 ರೂ.ಗೆ ಖರೀದಿಸಲಾಗುತ್ತದೆ.

ಬಂಡೀಪಾಳ್ಯ, ನಂಜನಗೂಡು, ತಿ.ನರಸೀಪುರ, ಬನ್ನೂರು, ಹುಣಸೂರು, ರತ್ನಪುರಿ, ಕೃಷ್ಣರಾಜ ನಗರ, ಸಾಲಿಗ್ರಾಮ, ಸಂತೆ ಸರಗೂರು, ಎಚ್‌.ಡಿ.ಕೋಟೆ, ಪಿರಿಯಾಪಟ್ಟಣ, ಬೆಟ್ಟದಪುರ ಎಪಿಎಂಸಿ ಆವರಣ, ಬಿಳಿಗೆರೆ ಖರೀದಿ ಕೇಂದ್ರ, ಚುಂಚನಕಟ್ಟೆ ಪ್ರವಾಸಿಮಂದಿರ ಆವರಣದಲ್ಲಿ ಖರೀದಿಸಲಾಗುತ್ತದೆ ಎಂದು ಹೇಳಲಾಗಿದೆ. ಈಗಾಗಲೇ ರಾಗಿ ಖರೀದಿಗೆ 11,712 ರೈತರು, ಭತ್ತ ಖರೀದಿಗೆ 39,237 ರೈತರು ನೋಂದಣಿ ಮಾಡಿಕೊಂಡಿದ್ದಾರೆ. ಅವರಿಂದ 3,60,566 ಕ್ವಿಂಟಾಲ್ ಭತ್ತ, 6,19,733 ಕ್ವಿಂಟಾಲ ರಾಗಿಯನ್ನು ಖರೀದಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೇಖಕರ ಬಗ್ಗೆ
ಚೇತನ್ ಓ.ಆರ್.
ಪ್ರಸ್ತುತ, ವಿಜಯ ಕರ್ನಾಟಕ ವೆಬ್ ನಲ್ಲಿ ಪತ್ರಕರ್ತನಾಗಿ 2022ರಿಂದ ಪತ್ರಕರ್ತನಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ತುಮಕೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ 5ನೇ ರ‍್ಯಾಂಕ್ ನೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಮೈಸೂರು ವಿವಿಯಿಂದ ಪತ್ರಿಕೋದ್ಯಮದಲ್ಲಿ ಪಿಎಚ್ ಡಿ ಪದವಿ ಪಡೆದಿದ್ದಾರೆ. ಜಿಲ್ಲಾ ಸುದ್ದಿಗಳಿಂದ ಹಿಡಿದು ಕ್ರೀಡೆ, ದೇಶ- ವಿದೇಶ, ಸಿನಿಮಾ, ವಿಜ್ಞಾನ- ತಂತ್ರಜ್ಞಾನ ಇತ್ಯಾದಿ ವೈವಿಧ್ಯಯಮ ವಿಷಯಗಳ ಬಗ್ಗೆ ಬರೆಯುವ ಇವರಿಗೆ, ನಾನಾ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಈವರೆಗೆ 16 ವರ್ಷ ಕೆಲಸ ಮಾಡಿದ ಅನುಭವವಿದೆ. ಫೋಟೋಗ್ರಫಿ ಇವರ ಅಚ್ಚುಮೆಚ್ಚಿನ ಹವ್ಯಾಸ. ಸಿನಿಮಾ, ಸಾಕ್ಷ್ಯಚಿತ್ರ, ಸಾಹಿತ್ಯ, ವಿಡಿಯೋ ಸಂಕಲನ, ಪತ್ರಿಕೆ ಪುಟ ವಿನ್ಯಾಸ, ಹಾಡುಗಾರಿಕೆ, ಚಿತ್ರಕಲೆ, ಅನಿಮೇಶನ್, ಸಂಗೀತದಲ್ಲಿಯೂ ಆಸಕ್ತಿಯಿದೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ