ಆ್ಯಪ್ನಗರ

ಪಂಡಿತ್‌ ರಾಜೀವ್‌ ತಾರಾನಾಥ್‌ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರಿಗೆ ಸಂದಿರುವ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಸೋಮವಾರ ಅವರ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು.

Vijaya Karnataka 30 Apr 2019, 5:00 am
ಮೈಸೂರು: ಖ್ಯಾತ ಸರೋದ್‌ ವಾದಕ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರಿಗೆ ಸಂದಿರುವ 2019ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಯನ್ನು ಸೋಮವಾರ ಅವರ ಸ್ವಗೃಹದಲ್ಲಿ ಪ್ರದಾನ ಮಾಡಲಾಯಿತು.
Vijaya Karnataka Web pandit rajeev taranath was awarded the padma shri award
ಪಂಡಿತ್‌ ರಾಜೀವ್‌ ತಾರಾನಾಥ್‌ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ


2019ರ ಮಾರ್ಚ್‌ 16ರಂದು ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಎಲ್ಲಾ ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದರು. ಅಂದು ರಾಜೀವ್‌ ತಾರಾನಾಥ್‌ ಅವರು ಕಾರಣಾಂತರಗಳಿಂದ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಹಾಗಾಗಿ ಈ ಪ್ರಶಸ್ತಿಯನ್ನು ಸೋಮವಾರ ರಾಜೀವ್‌ ತಾರಾನಾಥ್‌ ಅವರ ಸ್ವಗೃಹದಲ್ಲೇ ಪ್ರದಾನ ಮಾಡಲಾಯಿತು.

ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜ್ಯೋತಿ, ಜಿಲ್ಲಾಧಿಕಾರಿ ಕಚೇರಿಯ ಶಿಷ್ಟಾಚಾರ ತಹಸೀಲ್ದಾರ್‌ ಎಸ್‌.ಎನ್‌.ನರಗುಂದ್‌ ಅವರು ಪ್ರಶಸ್ತಿ ಪ್ರದಾನ ನೆರವೇರಿಸಿ, ಗೌರವ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ