ಆ್ಯಪ್ನಗರ

ಪಥ ಸಂಚಲನ ವೇಳೆ ಅಸ್ವಸ್ಥ: ಗೃಹ ರಕ್ಷಕ ಸಿಬ್ಬಂದಿ ಸಾವು

ಮೈಸೂರು ನಗರ ಪಾಲಿಕೆ ಚುನಾವಣೆ ವೇಳೆ ನಡೆದ ಪೊಲೀಸ್‌ ಪಥ ಸಂಚಲನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

Vijaya Karnataka 6 Sep 2018, 5:00 am
ಮೈಸೂರು: ಮೈಸೂರು ನಗರ ಪಾಲಿಕೆ ಚುನಾವಣೆ ವೇಳೆ ನಡೆದ ಪೊಲೀಸ್‌ ಪಥ ಸಂಚಲನದಲ್ಲಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗೃಹ ರಕ್ಷಕ ದಳದ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Vijaya Karnataka Web path trajectory the home guardian staff death
ಪಥ ಸಂಚಲನ ವೇಳೆ ಅಸ್ವಸ್ಥ: ಗೃಹ ರಕ್ಷಕ ಸಿಬ್ಬಂದಿ ಸಾವು


ಮೈಸೂರಿನ ಗಾಯತ್ರಿಪುರಂ ನಿವಾಸಿ ಎಂ.ಅನಂತು(49) ಮೃತರು. ಇವರು ಮೈಸೂರು ನಗರದ ಕೆ.ಆರ್‌.ಸಂಚಾರ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.

ಆ.31ರಂದು ಸ್ಥಳೀಯ ಸಂಸ್ಥೆ ಚುನಾವಣೆಯ ಮತದಾನದ ಹಿನ್ನಲೆಯಲ್ಲಿ 29ರಂದು ನಡೆದ ಪೊಲೀಸ್‌ ಪಥ ಸಂಚಲನದಲ್ಲಿ ಅನಂತು ಕೂಡ ಭಾಗವಹಿಸಿದ್ದರು. ಈ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದರು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಲಷ್ಕರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ