ಆ್ಯಪ್ನಗರ

ಶ್ರೀಗಳ ದೂರವಾಣಿ ಕದ್ದಾಲಿಕೆ: ಸಿಬಿಐ ತನಿಖೆಯಿಂದ ಸತ್ಯ ಹೊರಬಲಿದೆ, ತಪ್ಪಿತಸ್ಥರಿಗೆ ಶಾಸ್ತಿಯಾಗಲಿದೆ: ಬಿಎಸ್‌ವೈ

ಪ್ರಧಾನಿ ಮೋದಿ ಅವರು ಬುದ್ದಿವಂತರಾಗಿದ್ದು ಅವರಿಗೆ ಎಲ್ಲ ರಾಜ್ಯದ ಪರಿಸ್ಥಿತಿ ಗೊತ್ತಿದೆ. ಶೀಘ್ರದಲ್ಲಿ ಪರಿಹಾರ ಘೋಷಣೆ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.

Vijaya Karnataka Web 2 Oct 2019, 4:07 pm
ಮೈಸೂರು: ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಸುತ್ತೂರು ಶ್ರೀಗಳ ಪೋನ್ ಕದ್ದಾಲಿಕೆ ಮಾಡಿರುವ ವಿಚಾರ. ಯಾರ ಪೋನ್ ಕದ್ದಾಲಿಕೆ ಆಗಿದ್ದರೂ ಸತ್ಯ ಹೊರಬರಲಿದೆ.
Vijaya Karnataka Web ಯಡಿಯೂರಪ್ಪ
ಯಡಿಯೂರಪ್ಪ

ಸಿಬಿಐ ತನಿಖೆಯ ಸಂಪೂರ್ಣ ವರದಿ ಬಂದ ನಂತರ ಆ ಬಗ್ಗೆ ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಿದರು.

ಸುತ್ತೂರು ಶ್ರೀಗಳ ಪೋನ್ ಕದ್ದಾಲಿಕೆ ಆಗಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಮಾಹಿತಿ ಸಿಕ್ಕ ನಂತರ ಹೆಚ್ಚಿನ ವಿವರ ನೀಡುತ್ತೇನೆ. ಆದರೆ ತಪ್ಪಿತಸ್ಥರು ಕಾನೂನು ಪ್ರಕಾರ ಶಿಕ್ಷೆ ಅನುಭವಿಸಬೇಕಾಗುತ್ತದೆ. ಸಿಬಿಐ ತನಿಖೆಯಿಂದ ಸತ್ಯ ಹೊರಗೆ ಬರಲಿದೆ ಎಂದರು

ಬಂಡಿಪುರ ರಸ್ತೆ ಮಾರ್ಗದಲ್ಲಿ ರಾತ್ರಿ ಸಂಚಾರ ವಿಚಾರ. ನಾನು ಕೋರ್ಟ್ ವ್ಯಾಪ್ತಿ ಮೀರಿ ನಡೆಯೋಕಾಗೋದಿಲ್ಲ. ಕೋರ್ಟ್ ರಾತ್ರಿ ಸಂಚಾರ ಬೇಡ ಅಂದಿದೆ. ಹಾಗಾಗಿ ಕೋರ್ಟ್ ಆದೇಶ ವಯನಾಡ್‌ನ ಸಂಸದ ರಾಹುಲ್ ಗಾಂ ಅವರಿಗೂ ಗೊತ್ತಿದೆ ಎಂದುಕೊಳ್ಳುತ್ತೇನೆ. ಬಂಡೀಪುರ ಮಾರ್ಗದಲ್ಲಿ ರಾತ್ರಿ ಸಂಚಾರ ನಿಷೇಧ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.

ರಾಜ್ಯದಲ್ಲಿ ಉಂಟಾದ ನೆರೆಯ ಪರಿಹಾರಕ್ಕೆ ಯಾರ ಪ್ರಭಾವವೂ ಬೇಕಾಗಿಲ್ಲ. ಯಾವ ಪಕ್ಷದವರೂ ಗೊಂದಲ ಉಂಟು ಮಾಡಿಕೊಳ್ಳುವ ಅಗತ್ಯವಿಲ್ಲ. ಈವರೆಗೂ ದೇಶದ ಯಾವ ರಾಜ್ಯಕ್ಕೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಮೋದಿಯವರು ಈಗಷ್ಟೇ ದೇಶಕ್ಕೆ ವಾಪಸಾಗಿದ್ದಾರೆ. ಇನ್ನೆರಡು ಮೂರು ದಿನಗಳಲ್ಲಿ ಪರಿಹಾರ ಘೋಷಣೆಯಾಗುವ ಭರವಸೆ ಇದೆ. ಯಾರೂ ಹೊಸದಿಲ್ಲಿಗೆ ಹೋಗಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ