ಆ್ಯಪ್ನಗರ

PM Modi Mysuru Tour: ಪ್ರಧಾನಿ ಮೋದಿ ಮೈಸೂರು ಪ್ರವಾಸಕ್ಕೆ 25 ಕೋಟಿ ರೂ. ವೆಚ್ಚ..!

PM Narendra Modi Mysuru Visit: ​​ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಚರಿಸುವ ರಸ್ತೆ ಡಾಂಬರೀಕರಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 15 ಕೋಟಿ ರೂ. ಹಣವನ್ನು ಪ್ರಧಾನಿ ಭಾಗವಹಿಸುವ ಅರಮನೆ ಆವರಣದ ಯೋಗ, ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮ, ಚಾಮುಂಡಿ ಬೆಟ್ಟ ಭೇಟಿ, ಹೋಟೆಲ್‌ ವಾಸ್ತವ್ಯ ಸೇರಿದಂತೆ ನಾನಾ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ. ಮೋದಿ ಅವರ ಭೇಟಿಗೂ ಮುನ್ನವೇ ಮೈಸೂರಿನ ಪ್ರತಿ ಕ್ಷೇತ್ರಕ್ಕೂ 50 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ನೀಡಿದ್ದಾರೆ.

Edited byದಿಲೀಪ್ ಡಿ. ಆರ್. | Vijaya Karnataka 23 Jun 2022, 12:48 pm

ಹೈಲೈಟ್ಸ್‌:

  • 25 ಕೋಟಿ ರೂ. ಪೈಕಿ 10 ಕೋಟಿ ರೂ. ಗಳನ್ನು ಮೈಸೂರು ನಗರ ಪಾಲಿಕೆ ವೆಚ್ಚ ಮಾಡಿದೆ
  • ಮೋದಿ ಸಂಚರಿಸುವ ರಸ್ತೆ ಡಾಂಬರೀಕರಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ
  • ಉಳಿದ 15 ಕೋಟಿ ರೂ. ಹಣಅರಮನೆ, ಮಹಾರಾಜ ಕಾಲೇಜು, ಚಾಮುಂಡಿ ಬೆಟ್ಟ ಭೇಟಿಗೆ ವಿನಿಯೋಗ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web modi mysuru
PM Modi Mysuru Tour: ಪ್ರಧಾನಿ ಮೋದಿ ಮೈಸೂರು ಪ್ರವಾಸಕ್ಕೆ 25 ಕೋಟಿ ರೂ. ವೆಚ್ಚ..!
ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಎರಡು ದಿನಗಳ ಮೈಸೂರು ಭೇಟಿ ಕಾರ್ಯಕ್ರಮಕ್ಕೆ ಬರೋಬ್ಬರಿ 25 ಕೋಟಿ ರೂ. ವೆಚ್ಚವಾಗಿದೆ. ಈ 25 ಕೋಟಿ ರೂ. ವೆಚ್ಚದಲ್ಲಿ 10 ಕೋಟಿ ರೂ. ಗಳನ್ನು ಮೈಸೂರು ನಗರ ಪಾಲಿಕೆ ವೆಚ್ಚ ಮಾಡಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂಚರಿಸುವ ರಸ್ತೆ ಡಾಂಬರೀಕರಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ 15 ಕೋಟಿ ರೂ. ಹಣವನ್ನು ಪ್ರಧಾನಿ ಭಾಗವಹಿಸುವ ಅರಮನೆ ಆವರಣದ ಯೋಗ, ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಕಾರ್ಯಕ್ರಮ, ಚಾಮುಂಡಿ ಬೆಟ್ಟ ಭೇಟಿ, ಹೋಟೆಲ್‌ ವಾಸ್ತವ್ಯ ಸೇರಿದಂತೆ ನಾನಾ ಕಾರ್ಯಗಳಿಗೆ ವಿನಿಯೋಗಿಸಲಾಗಿದೆ.

PM Modi Karnataka Tour: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಪ್ರವಾಸದ ವೇಳೆ ಬಿಬಿಎಂಪಿಯಿಂದ 23 ಕೋಟಿ ರೂ. ವೆಚ್ಚ..!
ಮೈಸೂರು ನಗರದ ಸರಕಾರಿ ಅತಿಥಿ ಗೃಹದಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್‌ ಈ ವಿಷಯ ತಿಳಿಸಿದರು. 'ರಾಜ್ಯದ ಪ್ರತಿ ವಿಧಾನ ಸಭಾ ಕ್ಷೇತ್ರಗಳಿಗೂ ಮುಖ್ಯಮಂತ್ರಿಗಳು 50 ಕೋಟಿ ರೂ. ಅನುದಾನ ನೀಡಿದ್ದು, ನಾನಾ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಆದ್ಯತೆ ಮೇರೆಗೆ ಕೆಲ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಉಳಿದ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ನಡೆಸಲಾಗುವುದು' ಎಂದು ಮಾಹಿತಿ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂಚರಿಸಿದ ರಸ್ತೆಗಳಿಗೆ ಮಾತ್ರ ಡಾಂಬರೀಕರಣ ಮಾಡಲಾಗಿದೆ. ಉಳಿದ ರಸ್ತೆಗಳ ಅಭಿವೃದ್ಧಿ ಯಾವಾಗ? ಎಂಬ ಪ್ರತಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಶೀಘ್ರದಲ್ಲಿಯೇ ನಗರದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು' ಎಂದರು.

ಅರಮನೆಯಲ್ಲಿ ಮೈಸೂರು ಪಾಕ್‌ಗೆ ನರೇಂದ್ರ ಮೋದಿ ಫಿದಾ
'ಮೈಸೂರು ನಗರಕ್ಕೆ ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಿಲ್ಲ. ಮೋದಿ ಅವರ ಭೇಟಿಗೂ ಮುನ್ನವೇ ಮೈಸೂರಿನ ಪ್ರತಿ ಕ್ಷೇತ್ರಕ್ಕೂ 50 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿ ನೀಡಿದ್ದಾರೆ. ಶಾಸಕ ರಾಮದಾಸ್‌ ಅವರ ಕ್ಷೇತ್ರಕ್ಕೆ 100 ಕೋಟಿ ರೂ. ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರಧಾನಿ ನನ್ನ ಕ್ಷೇತ್ರಕ್ಕೂ ಭೇಟಿ ನೀಡಿದ್ದರು. ಅದಕ್ಕೂ ಮುನ್ನ 400 ಕೋಟಿ ರೂ. ನೀಡಲಾಗಿತ್ತು' ಎಂದು ಉತ್ತರಿಸಿದರು.

ಮೈಸೂರು ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌. ಎ. ರಾಮದಾಸ್‌, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್‌. ಆರ್‌. ಮಹದೇವ ಸ್ವಾಮಿ, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ. ಪು. ಸಿದ್ದಲಿಂಗ ಸ್ವಾಮಿ, ಮೈಲ್ಯಾಕ್‌ ಅಧ್ಯಕ್ಷ ಎನ್‌. ವಿ. ಫಣೀಶ್‌, ಮಾಜಿ ಶಾಸಕರಾದ ತೋಂಟದಾರ್ಯ, ಗೋ. ಮಧುಸೂದನ್‌, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರ ಗುಪ್ತ, ಮೈಸೂರು ನಗರ ಪಾಲಿಕೆ ಆಯುಕ್ತ ಜಿ. ಲಕ್ಷ್ಮೀ ಕಾಂತ್‌ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಮಂಜುನಾಥ್‌ ಸ್ವಾಮಿ, ಜಿಪಂ ಸಿಇಒ ಪೂರ್ಣಿಮಾ, ಡಿಸಿಪಿಗಳಾದ ಪ್ರದೀಪ್‌ ಗುಂಟಿ, ಗೀತಾ ಪ್ರಸನ್ನ ಇದ್ದರು.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ