ಆ್ಯಪ್ನಗರ

Mangaluru Blast - ಮೈಸೂರಲ್ಲಿ ಬಾಡಿಗೆ ಮನೆ ಪಡೆಯಬೇಕಿದ್ರೆ ಹೊಸ ರೂಲ್ಸ್!: ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯ!

ಮಂಗಳೂರು ಕುಕ್ಕರ್ ಬ್ಲಾಸ್ಟ್ ಆರೋಪಿ ಉಗ್ರ ಮೈಸೂರಿನಲ್ಲಿ ನಕಲಿ ದಾಖಲೆಗಳನ್ನು ಮನೆ ನೀಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿರುವ ಹಿನ್ನೆೆಲೆಯಲ್ಲಿ ಇದೀಗ ಮನೆ ಬಾಡಿಗೆ ಪಡೆಯುವ ನಿಯಮಗಳನ್ನು ಬಿಗಿಗೊಳಿಸಿದ್ದಾರೆ. ಮೈಸೂರು ನಗರದಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು, ಬಾಡಿಗೆದಾರರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಪೊಲೀಸ್​ ಇಲಾಖೆ ಸ್ಪಷ್ಟವಾದ ಸೂಚನೆ ನೀಡಿದೆ.

Edited byGanesh | Vijaya Karnataka Web 28 Nov 2022, 10:20 am

ಹೈಲೈಟ್ಸ್‌:

  • ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೈಸೂರು ಲಿಂಕ್ ಸಿಕ್ಕಿರುವ ಹಿನ್ನೆೆಲೆಯಲ್ಲಿ ಬಾಡಿಗೆ ಮನೆ ಪಡೆಯಲು ಮೈಸೂರಲ್ಲಿ ಹೊಸ ನಿಯಮ ಜಾರಿ
  • 100 ರೂ ಪಾವತಿಸಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು
  • ಬ್ಯಾಚುಲರ್, ಕುಟುಂಬಗಳಿಗೆ, ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿ ಹಾಕಬೇಕು
  • ಈಗಾಗಲೇ ಬಾಡಿಗೆ ಇರುವವರ ಬಗ್ಗೆ ಮನೆ ಮಾಲೀಕರು ಮಾಹಿತಿ ನೀಡಬೇಕು
  • ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web hosmani
ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್
ಮೈಸೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಗೆ ಮೈಸೂರು ಲಿಂಕ್ ಸಿಕ್ಕಿದ್ದೇ ತಡ ಸಾಂಸ್ಕೃತಿಕ ನಗರಿ ಮೈಸೂರಿನ ಪೊಲೀಸರು ಬಹಳ ಗಂಭೀರವಾಗಿ ಪರಿಗಣಿಸಿದ್ದು ನಗರದಾದ್ಯಂತ ಬಿಗಿ ಭದ್ರತೆ ಮಾಡಿದ್ದಾರೆ. ಈ ನಡುವೆ ಬಾಡಿಗೆ ಮನೆ ಪಡೆಯಲು ಮೈಸೂರಲ್ಲಿ ಹೊಸ ನಿಯಮ ಜಾರಿಯಾಗಿದೆ. ಮೈಸೂರಿನಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯ ಎಂದು ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸುತ್ತೋಲೆ ಹೊರಡಿಸಿದ್ದಾರೆ.
ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆ ನೀಡಿ ಮನೆ ಬಾಡಿಗೆ ಪಡೆದಿದ್ದನು. ಬ್ಲಾಸ್ಟ್ ಗೆ ಮೈಸೂರಲ್ಲಿ ಸಕಲ ತಯಾರಿ ನಡೆಸಿದ್ದನು. ಈ ಹಿನ್ನೆಲೆ ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದಾರೆ.

ಮೈಸೂರು ನಗರದಲ್ಲಿ ಮನೆ ಬಾಡಿಗೆಗೆ ಪಡೆಯಬೇಕಾದರೇ ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಹಾಗೂ ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು, ಬಾಡಿಗೆದಾರರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

Mangaluru Blast - ಶಂಕಿತ ಉಗ್ರನಿಗೆ ಬಾಡಿಗೆ ಕೊಟ್ಟಿದ್ದ ಮನೆ ಮಾಲೀಕ ಈಗ ಪೊಲೀಸ್‌ ವಶದಲ್ಲಿ!

100 ರೂ. ಪಾವತಿಸಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಿರಿ

100 ರೂ ಪಾವತಿಸಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಬ್ಯಾಚುಲರ್, ಕುಟುಂಬಗಳಿಗೆ, ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿ ಹಾಕಬೇಕು. ಈಗಾಗಲೇ ಬಾಡಿಗೆ ಇರುವವರ ಬಗ್ಗೆ ಮಾಹಿತಿ ನೀಡಬೇಕು. ಈ ನಿಯಮವನ್ನು ಎಲ್ಲಾ ಠಾಣೆಗಳು ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ಹೊರಡಿಸಿದ್ದಾರೆ.

ಶಾರಿಕ್ ಓಡಾಡಿದ ಕಡೆ ವಿಚಾರಣೆ

ಶಂಕಿತ ಉಗ್ರ ಶಾರಿಕ್ ಮೈಸೂರು ನಗರದಲ್ಲಿ ಎಲ್ಲೆಲ್ಲಿ ಓಡಾಡಿದ್ದಾನೆ ಅನ್ನುವ ವಿಚಾರವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಆತ ಓಡಾಟ ನಡೆಸಿದ ಪ್ರತಿಯೊಂದು ಕಡೆಯೂ ವಿಚಾರಣೆ ನಡೆಸಿದ್ದಾರೆ. ಆತನಿಗೆ ನಕಲಿ ಆಧಾರ್ ಕಾರ್ಡ್ ಯಾರು ಮಾಡಿಕೊಟ್ಟರು ಅನ್ನೋ ವಿಚಾರವಾಗಿ ಸಾಕಷ್ಟು ತನಿಖೆ ನಡೆಯುತ್ತಿದೆ. ಹಾಗೂ ಆತ ಸಂಪರ್ಕ ಹೊಂದಿದ್ದ ಜನರ ಬಗ್ಗೆಯೂ ವಿಚಾರಣೆ ನಡೆಸಲಾಗುತ್ತಿದೆ . ಮಂಗಳೂರು ಮತ್ತು ಮೈಸೂರು ನಗರ ಪೊಲೀಸರು ಜಂಟಿಯಾಗಿ ಕೇಸ್ ನ ಭೇದಿಸೋ ಪ್ರಯತ್ನ ಮಾಡುತ್ತಿದ್ದಾರೆ. ಈಗಾಗ್ಲೇ ಆತ ವಾಸವಿದ್ದ ಮನೆಯನ್ನ ವಶಕ್ಕೆ ಪಡೆಯಲಾಗಿದೆ.

Mangaluru Blast - ಮೈಸೂರಿನಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಲೇ ದೊಡ್ಡ ಬ್ಲಾಸ್ಟ್ ಗೆ ಸ್ಕೆಚ್ ಹಾಕಿದ್ದ ಶಾರಿಕ್!

ಶಂಕಿತ ಉಗ್ರ ಶಾರಿಕ್ ಬ್ಲಾಸ್ಟ್ ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ತನಿಖೆ ವೇಳೆ ಆತ ಮೈಸೂರಲ್ಲಿ ಬ್ಲಾಸ್ಟ್ ಗೆ ತಯಾರಿ ನಡೆಸಿದ್ದ ಅನ್ನೋ ಅಂಶ ಬೆಳಕಿಗೆ ಬಂದಿತ್ತು. ಹೀಗಾಗಿ ಮೈಸೂರು ಉಗ್ರರಿಗೆ ಸೇಫ್ ಅನ್ನೋ ಆರೋಪ ಕೇಳಿಬಂದಿತ್ತು. ಹಲವಾರು ಮೈಸೂರು ಸ್ಲೀಪಿಂಗ್ ಸೆಲ್ ಅನ್ನೋ ಪ್ರತಿಕ್ರಿಯೆ ಕೊಟ್ಟಿದ್ದರು. ಇವೆಲ್ಲವನ್ನೂ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬಂದೋಬಸ್ತ್ ದೃಷ್ಟಿಯಿಂದ ಹೊಸ ರೂಲ್ಸ್ ಜಾರಿಗೆ ತಂದಿದ್ದಾರೆ.
ಲೇಖಕರ ಬಗ್ಗೆ
Ganesh

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ