ಆ್ಯಪ್ನಗರ

ಮೈಸೂರು: ಮಾವ ಸರಿಯಾಗಿ ಮಾತನಾಡಿಸುತ್ತಿಲ್ಲ ಎಂದು ಪೊಲೀಸ್‌ ಪೇದೆ ಪತ್ನಿ ಆತ್ಮಹತ್ಯೆಗೆ ಶರಣು

ಮಾವ ಸರಿಯಾಗಿ ಮಾತನಾಡಿಸಿಲ್ಲ, ಮಾವನಿಂದ ತನ್ನ ತಂದೆ-ತಾಯಿಗೆ ಅವಮಾನ ಆಗಿದೆ ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪೊಲೀಸ್‌ ಪೇದೆಯ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ 5 ತಿಂಗಳ ಹಿಂದಷ್ಟೇ ದಂಪತಿಗೆ ಮದುವೆಯಾಗಿತ್ತು.

Lipi 27 Jan 2021, 5:51 pm

ಹೈಲೈಟ್ಸ್‌:


  • ಮಾವ ಸರಿಯಾಗಿ ಮಾತನಾಡಿಸಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಮಹಿಳೆ
  • ಮೈಸೂರಿನ ಪೊಲೀಸ್‌ ಪೇದೆಯ ಪತಿ ಚೈತ್ರಾ (25) ಆತ್ಮಹತ್ಯೆ ಮಾಡಿಕೊಂಡಾಕೆ
  • ಡೆತ್‌ನೋಟ್‌ ಸಿಕ್ಕಿಲ್ಲ ಎಂದು ಹೇಳಿ ಅನುಮಾನ ಮೂಡಿಸಿದ ಪೊಲೀಸರು
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಮೈಸೂರು: ತನ್ನ ಮಾವ ಸರಿಯಾಗಿ ಮಾತನಾಡಿಸುತ್ತಿಲ್ಲವೆಂದು ಮನನೊಂದು ಪೊಲೀಸ್ ಕಾನ್‌ಸ್ಟೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಹೆಬ್ಬಾಳದಲ್ಲಿರುವ ಪೊಲೀಸ್ ಬಡಾವಣೆಯಲ್ಲಿ ಮೇಟಗಳ್ಳಿ ಪೊಲೀಸ್ ಠಾಣೆ ಕಾನ್‌ಸ್ಟೇಬಲ್ ಮೋಹನ್‌ ಆರಾಧ್ಯ ಪತ್ನಿ ಚೈತ್ರಾ (25) ಆತ್ಮಹತ್ಯೆ ಮಾಡಿಕೊಂಡಾಕೆ. ಮೋಹನ್‌ ಹಾಗೂ ಚೈತ್ರಾಗೆ ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಅಲ್ಲದೇ ಸದ್ಯ ಚೈತ್ರಾ 3 ತಿಂಗಳ ಗರ್ಭಿಣಿಯಾಗಿದ್ದರು.

ಮೋಹನ್‌ ಅವರನ್ನು ಮದುವೆಯಾದ ದಿನದಿಂದ ಮಾವ ಸರಿಯಾಗಿ ಮಾತನಾಡಿಸಿಲ್ಲ ಎಂದು ಆರೋಪಿಸಿದ್ದು, ನನ್ನ ಜೊತೆಗೆ ತಂದೆ ಹಾಗೂ ತಾಯಿಗೂ ಮಾವನವರಿಂದ ಗೌರವ ಸಿಕ್ಕಿಲ್ಲ. ತವರು ಮನೆಗೆ ಹೋಗುವ ವೇಳೆ ಕೂಡ ಅವಮಾನ ಮಾಡಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ.

ಚೈತ್ರಾ ಬರೆದಿದೆದ್ದಾರೆ ಎಂದು ಹೇಳಲಾದ ಡೆತ್‌ ನೋಟ್‌ನಲ್ಲಿ ನಿಮ್ಮ ಅಪ್ಪನೇ ನನಗೆ ಹೀಗೆ ಆಗಲು ಕಾರಣ. ನಿಮ್ಮ ಅಪ್ಪ ನಮ್ಮ ಇಷ್ಟದಂತೆ ಮದುವೆ ಮಾಡಿಕೊಟ್ಟಿಲ್ಲ. ಆದರೆ ನಮ್ಮ ಮನೆಯವರ ಶಕ್ತಿಯಾನುಸಾರ ಮದುವೆ ಮಾಡಿದ್ದಾರೆ ಎಂದು ತಿಳಿಸಿದ್ದು, ಮಾವ ಮಲ್ಲಾರಾಧ್ಯ ಮೇಲೆ ಆರೋಪ ಹೊರಿಸಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ಘಟನೆ ಕುರಿತು ಹೆಬ್ಬಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿಲ್ಲಿ ರೈತ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಖಂಡಿಸಿದ ಶಾಸಕ ಸಾ ರಾ ಮಹೇಶ್ಡೆತ್‌ ನೋಟ್‌ ಸಿಕ್ಕಿಲ್ಲ ಎಂದ ಪೊಲೀಸರು
ಘಟನೆ ಸಂಬಂಧ ತಮಗೆ ಯಾವುದೇ ಡೆತ್‌ ನೋಟ್‌ ಸಿಕ್ಕಿಲ್ಲವೆಂದು ಡಿಸಿಪಿ ಪ್ರಕಾಶ ಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಟ್ಟೆ ನೋವಿನ ಕಾರಣಕ್ಕೆ ಚೈತ್ರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಾಗ ಚೈತ್ರಾ 3 ತಿಂಗಳ‌ ಗರ್ಭಿಣಿ. ಚೈತ್ರಾ ಪತಿ ಮೋಹನ್‌ ಆರಾಧ್ಯ ನಮ್ಮ ಇಲಾಖೆಯಲ್ಲಿ ಕಾನ್ಸ್‌ಸ್ಟೇಬಲ್ ಆಗಿದ್ದರು ಎಂದಿದ್ದಾರೆ.
ಅತ್ತೆ ಮನೆಯಲ್ಲಿ ಚಿನ್ನ ಕದ್ದು ಕಬ್ಬಿನ ಗದ್ದೆಯಲ್ಲಿ ಹೂತಿಟ್ಟ ಖತರ್ನಾಕ್‌ ಕಳ್ಳರು..!ನಮಗೆ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಚೈತ್ರಾ ತಂದೆ ಅವರ ದೂರಿನ ಆದಾರದಲ್ಲಿ‌ ಪ್ರಕರಣ ದಾಖಲಿಸಿದ್ದೇವೆ. ಮದುವೆ ಆಗಿ 5 ತಿಂಗಳು ಆದ ಕಾರಣಕ್ಕೆ ತಹಸೀಲ್ದಾರ್ ಸಮ್ಮುಖದಲ್ಲಿ ಪಂಚನಾಮೆ ಮಾಡಿಸಿದ್ದೇವೆ ಎಂದು ಡಿಸಿಪಿ ಪ್ರಕಾಶ್‌ಗೌಡ ಹೇಳಿಕೆ ನೀಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ