ಆ್ಯಪ್ನಗರ

ಪೌರ ಕಾರ್ಮಿಕರಿಗೆ ಸಾಮಾಜಿಕ ಸ್ವಾತಂತ್ರ್ಯ ಅಗತ್ಯ: ಸಿದ್ದರಾಮಯ್ಯ

ಪೌರಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡೋದು ಮುಖ್ಯ ಅಂತಿದ್ದರು. ಪೌರಕಾರ್ಮಿಕರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯ ಮಾಡಿದ್ದರು. ಪೌರಕಾರ್ಮಿಕರನ್ನ ಸಿಂಗಾಪುರಕ್ಕೆ ಗೆ ಕಳಿಸುವ ಕೆಲಸ ಮಾಡಿದ್ದೆ. ಕೆಲ ಐಎಎಸ್ ಅಧಿಕಾರಿಗಳು ವಿರೋಧ ಮಾಡಿದ್ದರು ಎಂದು ತಿಳಿಸಿದರು.

Vijaya Karnataka Web 27 Nov 2021, 10:01 pm
ಮೈಸೂರು: ಪೌರ ಕಾರ್ಮಿಕರು ಸೇರಿ ಸಮಾಜದ ಹಿಂದುಳಿದ ಜನರಿಗೆ ಸಾಮಾಜಿಕ ಆರ್ಥಿಕ ಸ್ವಾತಂತ್ರ್ಯ ಸಿಗಬೇಕು. ಮತ್ತೆ ಹಣ ಇರುವವರ ಬಳಿ ಅಧಿಕಾರ ಹೋದ್ರೆ ಮತ್ತೆ ಶೋಷಣೆ ಪ್ರಾರಂಭ ಆಗುತ್ತೆ. ಹಾಗಾಗಿ ಎಲ್ಲಾ ಯುವಕರು ಸಂವಿಧಾನ ಓದಬೇಕು. ಒಂದು ವೇಳೆ ಭಾರತದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಹುಟ್ಟದಿದ್ರೆ, ಸಂವಿಧಾನ ಕೊಡದಿದ್ರೆ ಸಾಮಾಜಿಕ ನ್ಯಾಯ ಸಿಕ್ತಿತ್ತಾ.? ಅಂತಹ ಸಂವಿಧಾನವನ್ನ ಬದಲಾವಣೆ ಮಾಡ್ತಿವಿ ಅನ್ನೋದು ಎಷ್ಟು ಸರಿ ಅಂತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Vijaya Karnataka Web ಸಿದ್ದರಾಮಯ್ಯ
ಸಿದ್ದರಾಮಯ್ಯ


ಮೈಸೂರಲ್ಲಿ ಮಾಜಿ ಮೇಯರ್ ನಾರಾಯಣ್ ರವರ ಆತ್ಮಚರಿತ್ರೆ ಕುರಿತು “ಪೌರ ಬಂಧು” ಕೃತಿಯನ್ನ ಬಿಡುಗಡೆ ಮಾಡಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾತನಾಡಿದರು.

ಎಲ್ಲಾ ಕಡೆಯೂ ಬಿಜೆಪಿ-ಜೆಡಿಎಸ್ ಒಳ ಒಪ್ಪಂದ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ನಾನು ಅನೇಕ ಬಾರಿ ಹೇಳಿದ್ದೇನೆ. ಸಂವಿಧಾನ ಬದಲಾವಣೆ ಆದರೆ ರಕ್ತ ಕ್ರಾಂತಿ ಆಗುತ್ತೆ ಅಂತ ಎಚ್ಚರಿಕೆ ನೀಡಿದ್ದೇನೆ. ಸಂವಿಧಾನ ಕೆಟ್ಟವರ ಕೈಯಲ್ಲಿ ಇದ್ದಾಗ ಕೆಟ್ಟದಾಗುತ್ತೆ ಎಂದು ಸಿದ್ಧರಾಮಯ್ಯ ಹೇಳಿದರು.

ನಾರಾಯಣ್ ಪೌರಕಾರ್ಮಿಕ ವರ್ಗಕ್ಕೆ ಸೇರಿದವರು. ಅವರ ತಂದೆ, ತಾಯಿ ಪೌರಕಾರ್ಮಿಕರಾಗಿದ್ದರು. ನಾರಾಯಣ್ ಪೌರಕಾರ್ಮಿಕರ ಅಭಿವೃದ್ಧಿಗಾಗಿ ಹೋರಾಟ ಮಾಡ್ತಾ ಬಂದಿದ್ದಾರೆ. ನನಗೆ ಮತ್ತು ಪೌರಕಾರ್ಮಿಕರ ನಡುವೆ ಸಂಬಂಧ ಬೆಳೆಯಲು ನಾರಾಯಣ್ ಕಾರಣ. ನನ್ನ ಭೇಟಿಯಾದಾಗೆಲ್ಲಾ ಪೌರಕಾರ್ಮಿಕರ ಸಮಸ್ಯೆ ಬಗ್ಗೆ ಚರ್ಚೆ ಮಾಡ್ತಿದ್ರು. ಬಹುಮತ ಇಲ್ಲದಿದ್ರೂ ಮಹಳಷ್ಟು ಜನ ಕಾರ್ಪೋರೇಟರ್ ಬೆಂಬಲಿಸಿ ಮೇಯರ್ ಮಾಡಿದ್ರು. ಆಗ ನಮ್ಮ ಸರಕಾರ ಅಧಿಕಾರದಲ್ಲಿರಲಿಲ್ಲ. ನಾನು ಹಠ ಮಾಡಿ ನಾರಾಯಣ್ ಅವರ ಮೇಯರ್ ಮಾಡಿದೆ ಎಂದರು.

ಕಟ್ಟಕಡೆಯ ಮನುಷ್ಯನನ್ನು ಮೊದಲ ಪ್ರಜೆ ಮಾಡಿದೆ. ಅವರೂ ಆ ಜವಾಬ್ದಾರಿಯನ್ನ ಬಳಸಿಕೊಂಡು ಪೌರಕಾರ್ಮಿಕರನ್ನ ಸಂಘಟಿಸಿ, ಸಮಸ್ಯೆ ಬಗೆಹರಿಸಲು ಮುಂದಾದರು. ಅವರ ಸಾರ್ವಜನಿಕ ಬದುಕಿನಲ್ಲಿ ಮರೆಯಲಾಗದ ಹೆಜ್ಜೆ ಗುರುತು ಬಿಟ್ಟಿದ್ದಾರೆ ಎಂದರು.ಕೆಲವೊಂದು ಸಾರಿ ಚಳುವಳಿ ಮಾಡ್ಬೇಡ ಅಂದ್ರೂ ಮಾಡಿದ್ದರು. ಪೌರಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡೋದು ಮುಖ್ಯ ಅಂತಿದ್ದರು. ಪೌರಕಾರ್ಮಿಕರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯ ಮಾಡಿ ಮಾಡಿಸಿದ್ದರು. ಪೌರಕಾರ್ಮಿಕರನ್ನ ಸಿಂಗಾಪುರಕ್ಕೆ ಗೆ ಕಳಿಸುವ ಕೆಲಸ ಮಾಡಿದ್ದೆ. ಇದಕ್ಕೆ ಕೆಲ ಐಎಎಸ್ ಅಧಿಕಾರಿಗಳು ವಿರೋಧ ಮಾಡಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು.

ನಾರಾಯಣ ದಸರಾದಲ್ಲಿ ಕುದುರೆ ಮೇಲೆ ಕೂರು ಅಂದಿದ್ದೆ. ಅವರು ಹೆದರಿಕೊಂಡು ಬೇಡ ಅಂತಿದ್ದರು. ನಾನು ಅವರಿಗೆ ಧೈರ್ಯ ಹೇಳಿ ಕುದುರೆ ಸವಾರಿ ಮಾಡಿಸಿದ್ದೆ. ಒಬ್ಬ ಹಿಂದುಳಿದ ವರ್ಗದ ವ್ಯಕ್ತಿ ಮೇಯರ್ ಆಗಿ, ಕುದುರೆ ಮೇಲೆ ಕೂತು ದಸರಾದಲ್ಲಿ ಮೆರವಣಿಗೆ ಮಾಡಿಸಿದ್ದು ನನಗೆ ಖುಷಿ ಕೊಟ್ಟಿದ್ದು ಎಂದು ಸಿದ್ಧರಾಮಯ್ಯ ಸ್ಮರಿಸಿದರು

ಮೈಸೂರಲ್ಲಿ ಕಾಂಗ್ರೆಸ್‌ಗೆ ಬಿಗ್‌ ರಿಲೀಫ್‌..! ಪರಿಷತ್‌ ಎಲೆಕ್ಷನ್‌ಗೆ ಡಿ.ತಿಮ್ಮಯ್ಯ ನಾಮಪತ್ರ ಅಂಗೀಕಾರ

ಮೈಸೂರು ವಿಶ್ವವಿದ್ಯಾನಿಲಯದ ಎನ್.ರಾಚಯ್ಯ ಅಧ್ಯಯನ ಪೀಠದಿಂದ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ಸಮಾರಂಭ ಆಯೋಜನೆ ಮಾಡಲಾಗಿತ್ತು. ದೀಪಾ ಬೆಳಗಿಸುವ ಮೂಲಕ ಮಾಜಿ ಸಿಎಂ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿ, ಕೃತಿ ಲೋಕಾರ್ಪಣೆ ಮಾಡಿದರು.

ನಂತರ ಸಮಕಾಲೀನ ಕರ್ನಾಟಕದಲ್ಲಿ ಪೌರಕಾರ್ಮಿಕರ ಸ್ಥಿತಿ ಗತಿಗಳ ವಿಚಾರ ಸಂಕಿರಣ ನಡೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ