ಆ್ಯಪ್ನಗರ

ಮೈಸೂರು: ದಕ್ಷಿಣ ವಲಯದ ನೂತನ ಐಜಿಪಿಯಾಗಿ ಪ್ರವೀಣ್ ಪವಾರ್ ಅಧಿಕಾರ ಸ್ವೀಕಾರ

ತಂತ್ರಜ್ಞಾನ ಬಳಸಿಕೊಂಡು ಕಾನೂನು ಮತ್ತು ಸುವ್ಯವಸ್ಥತೆ ಕಾಪಾಡುವತ್ತ ಹೆಚ್ಚು ಗಮನ ಹರಿಸುತ್ತೇನೆ. ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲ್ಲಿನ ಸ್ಥಳೀಯ ಮಾಹಿತಿ ಸಂಗ್ರಹಿಸುತ್ತೇನೆ

Vijaya Karnataka Web 1 Jan 2021, 7:33 pm
ಮೈಸೂರು: ದಕ್ಷಿಣ ವಲಯ ನೂತನ ಐಜಿಪಿಯಾಗಿ ಪ್ರವೀಣ್ ಪವಾರ್ ಮಧುಕರ್ ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಪೊಲೀಸ್ ಕಚೇರಿಯಲ್ಲಿ ಪ್ರವೀಣ್ ಅವರನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಹೂಗುಚ್ಛ ನೀಡಿ ಅವರನ್ನು ಬರಮಾಡಿಕೊಂಡರು.
Vijaya Karnataka Web ಪ್ರವೀಣ್‌ ಪವಾರ್ ಮಧುಕರ್‌
ಪ್ರವೀಣ್‌ ಪವಾರ್ ಮಧುಕರ್‌


ಈ ವೇಳೆ ಅವರೊಂದಿಗೆ ಕೆಲ ಕಾಲ ಮಾತುಕತೆ ಸಹ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರವೀಣ್‌ ಹಲವು ವಿಷಯ ಪ್ರಸ್ತಾಪಿಸಿದರು.

ನಾನು ದಕ್ಷಿಣ ವಲಯದಲ್ಲಿ ಮೊದಲ ಬಾರಿಗೆ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗಾಗಲೇ ಕಲಬುರಗಿ, ಕೊಪ್ಪಳದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಗೊಳಿಸುವುದೇ ನನ್ನ ಉದ್ದೇಶವಾಗಿದೆ. ತಂತ್ರಜ್ಞಾನ ಬಳಸಿಕೊಂಡು ಕಾನೂನು ಮತ್ತು ಸುವ್ಯವಸ್ಥತೆ ಕಾಪಾಡುವತ್ತ ಹೆಚ್ಚು ಗಮನ ಹರಿಸುತ್ತೇನೆ. ಎಲ್ಲಾ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲ್ಲಿನ ಸ್ಥಳೀಯ ಮಾಹಿತಿ ಸಂಗ್ರಹಿಸುತ್ತೇನೆ ಎಂದರು.

ಮೈಸೂರು ಒಳ್ಳಯ ಜಾಗ. ಆದಷ್ಟು ಸಮಸ್ಯೆಗಳ ಶೀಘ್ರ ಪರಿಹಾರಕ್ಕೂ ಮುಂದಿನ ದಿನಗಳಲ್ಲಿ ಒತ್ತು ನೀಡಲಾಗುವುದು ಎಂದು ಪ್ರವೀಣ್ ಪವಾರ್ ಮಧುಕರ್ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ