ಆ್ಯಪ್ನಗರ

ಚಾಮುಂಡಿಬೆಟ್ಟದ ಅರ್ಚಕರ ಪ್ರತಿಭಟನೆ ವಾಪಸ್‌

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗಾಗಿ ಚಾಮುಂಡೇಶ್ವರಿ ಸಮೂಹ ದೇವಸ್ಥಾನದ ಅರ್ಚಕರು ಶುಕ್ರವಾರ ಆರಂಭಿಸಿದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಮುಜರಾಯಿ ಸಚಿವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಶನಿವಾರ ವಾಪಸ್‌ ಪಡೆದರು.

Vijaya Karnataka 16 Dec 2018, 5:00 am
ಮೈಸೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗಾಗಿ ಚಾಮುಂಡೇಶ್ವರಿ ಸಮೂಹ ದೇವಸ್ಥಾನದ ಅರ್ಚಕರು ಶುಕ್ರವಾರ ಆರಂಭಿಸಿದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಮುಜರಾಯಿ ಸಚಿವರು ನೀಡಿದ ಭರವಸೆ ಹಿನ್ನೆಲೆಯಲ್ಲಿ ಶನಿವಾರ ವಾಪಸ್‌ ಪಡೆದರು.
Vijaya Karnataka Web priests return protest of the chamundi hills
ಚಾಮುಂಡಿಬೆಟ್ಟದ ಅರ್ಚಕರ ಪ್ರತಿಭಟನೆ ವಾಪಸ್‌


ಮುಜರಾಯಿ ಇಲಾಖೆ ಸಚಿವ ರಾಜಶೇಖರ್‌ ಪಾಟೀಲ್‌ ಅವರು ದೂರವಾಣಿ ಕರೆಮಾಡಿ ಭರವಸೆ ನೀಡಿದ ಹಿನ್ನಲೆಯಲ್ಲಿ ಶನಿವಾರ ಸಂಜೆ 4ಕ್ಕೆ ಕರ್ತವ್ಯಕ್ಕೆ ಹಾಜರಾದರು. ನಂತರ ವಿವಿಧ ಸೇವೆ ಹಾಗೂ ಧಾರ್ಮಿಕ ಪೂಜಾ ಕೈಂಕರ್ಯಗಳು ಆರಂಭಗೊಂಡಿತು.

6ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಕಲ್ಪಿಸಬೇಕು. 75 ಮಂದಿ ನೌಕರರ ಕಾಯಂ ಸೇರಿದಂತೆ ನೌಕರರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತೆ ಶುಕ್ರವಾರ ಶಾಸಕ ಎಸ್‌.ಎ.ರಾಮದಾಸ್‌ ವಿಧಾನಸಭೆ ಕಲಾಪದಲ್ಲಿ ಪ್ರಶ್ನಿಸಿದರು. ಇದಕ್ಕೆ ಸಚಿವರು ಪ್ರತಿಕ್ರಿಯಿಸಿ, ನೌಕರರ ಕಾಯಂಗೆ ತುರ್ತು ಕ್ರಮ ಕೈಗೊಳ್ಳಲಾಗುವುದು. ವೇತನ ಆಯೋಗದ ಶಿಫಾರಸಿನಂತೆ ಸಂಬಳ ಹಾಗೂ ಇನ್ನಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ 24ರಂದು ಖುದ್ದು ಅಧಿಕಾರಿಗಳೊಂದಿಗೆ ಚಾಮುಂಡಿ ಬೆಟ್ಟದಲ್ಲಿ ಸಭೆ ನಡೆಸಿ ಇತ್ಯರ್ಥಗೊಳಿಸಲಾಗುವುದಾಗಿ ಭರವಸೆ ನೀಡಿದ್ದರು. ಶನಿವಾರ ಸತ್ಯಾಗ್ರಹ ಸ್ಥಳಕ್ಕೆ ಶಾಸಕ ರಾಮದಾಸ್‌ ಆಗಮಿಸಿ ದೂರವಾಣಿಯಲ್ಲಿ ಸಚಿವರಿಗೆ ಕರೆಮಾಡಿ ಪ್ರತಿಭಟನಾನಿತರಿಗೆ ಭರವಸೆ ಕೊಡಿಸಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.

''ಡಿ.24ರಂದು ಚಾಮುಂಡಿ ಬೆಟ್ಟದಲ್ಲೇ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಟ್ಟಿದ್ದೇವೆ,'' ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಸಮೂಹ ದೇವಸ್ಥಾನಗಳ ನೌಕರರ ಸಂಘದ ಕಾರ್ಯದರ್ಶಿ ವಿಶ್ವನಾಥ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ