ನಾಗರಾಜ್ ನವೀಮನೆ
ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿದೆ. ಮೈಸೂರು ಯೋಗ ಹಬ್ ಆಗಿರುವುದರಿಂದ ಮೋದಿ ಬರುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಇದೀಗ ಯೋಗ ದಿನಾಚರಣೆಯಂದು (international yoga day) ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ (narendra modi) ಆಗಮಿಸುವುದು ಖಚಿತಗೊಂಡಿದ್ದು, ಕೇಂದ್ರದ ಆಯುಷ್ ಇಲಾಖೆ ಕಾರ್ಯದರ್ಶಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದು ಮೋದಿ ಬರುವುದನ್ನು ಖಚಿತಪಡಿಸಿದ್ದಾರೆ.
ಕೇಂದ್ರ ಆಯುಷ್ ಸಚಿವಾಲಯವು 2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗ ಆಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು.
2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ಇಲ್ಲೆಲ್ಲಾ ನರೇಂದ್ರ ಮೋದಿ ಅವರು ಭಾಗವಹಿಸಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಪ್ರಾಮುಖ್ಯತೆ ಯನ್ನು ಪ್ರಚುರಪಡಿಸಿದ್ದರು. ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಶಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿಲ್ಲ.
2017ರಿಂದ ಪ್ರಯತ್ನ
2017ರಿಂದಲೂ ಯೋಗದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆತರಬೇಕೆಂಬ ಪ್ರಯತ್ನಗಳು ನಡೆಯುತ್ತಲೇ ಇತ್ತು. 2018ರಲ್ಲಿ ಮೋದಿ ಅವರು ಮೈಸೂರಿಗೆ ಬರುವುದು ಬಹುತೇಕ ಖಚಿತವಾಗಿದ್ದರೂ ಕಡೆಕ್ಷಣದಲ್ಲಿ ಅದು ಡೆಹ್ರಾಡೂನ್ ಪಾಲಾಯಿತು. ಆದರೆ, ಈ ಬಾರಿ ಸಂಸದ ಪ್ರತಾಪಸಿಂಹ ಅವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ದೆಹಲಿಗೆ ತೆರಳಿ ಮೋದಿ ಅವರಿಗೆ ಆಹ್ವಾನ ನೀಡಿ ಬಂದಿದ್ದಾರೆ. ಇತ್ತ ಸ್ಥಳೀಯ ಶಾಸಕರೂ ಮೋದಿ ಅವರನ್ನು ಕರೆಯಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿದೆ. ಎಲ್ಲಿ ನಿರ್ಗಮನ ದ್ವಾರ ಇದೆ, ಪ್ರವೇಶ ದ್ವಾರ ಹೇಗಿದೆ, ಭದ್ರತೆ ವ್ಯವಸ್ಥೆ ಕುರಿತ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ ಡಿಸಿ ನೇತೃತ್ವದಲ್ಲಿ ಸಭೆಯನ್ನೂ ನಡೆಸಿ ಹೋಗಿದ್ದಾರೆ.
ಚುನಾವಣೆ ದೃಷ್ಟಿಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೆ ಈಗಿನಿಂದಲೇ ಬಿಜೆಪಿ ತಯಾರಿ ನಡೆಸುತ್ತಿದೆ. ಈಗಾಗಲೇ ಕೇಂದ್ರದ ಗೃಹ ಸಚಿವ ಅಮಿತಾ ಶಾ ಬೆಂಗಳೂರಿಗೆ ಭೇಟಿ ನೀಡಿ ಎಲ್ಲಾ ಮುಖಂಡರನ್ನು ಭೇಟಿ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ನೀಡಿ ಹೋಗಿದ್ದಾರೆ. ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಕರ್ನಾಟಕ ಬೆಸ್ಟ್ ಪ್ಲೇಸ್. ಈ ನಿಟ್ಟಿನಲ್ಲಿ ಯೋಗ ದಿನಾಚರಣೆಗೆ ನರೇಂದ್ರ ಮೋದಿ ಅವರನ್ನು ಕರೆ ತರುವ ವಿಚಾರ ಮಹತ್ವ ಪಡೆದುಕೊಂಡಿದೆ.
ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿದೆ.
ಕೇಂದ್ರ ಆಯುಷ್ ಸಚಿವಾಲಯವು 2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿಕೊಂಡು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗ ಆಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು.
2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡ್ನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ಇಲ್ಲೆಲ್ಲಾ ನರೇಂದ್ರ ಮೋದಿ ಅವರು ಭಾಗವಹಿಸಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಪ್ರಾಮುಖ್ಯತೆ ಯನ್ನು ಪ್ರಚುರಪಡಿಸಿದ್ದರು. ಸಾವಿರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ಶಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿಲ್ಲ.
2017ರಿಂದ ಪ್ರಯತ್ನ
2017ರಿಂದಲೂ ಯೋಗದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆತರಬೇಕೆಂಬ ಪ್ರಯತ್ನಗಳು ನಡೆಯುತ್ತಲೇ ಇತ್ತು. 2018ರಲ್ಲಿ ಮೋದಿ ಅವರು ಮೈಸೂರಿಗೆ ಬರುವುದು ಬಹುತೇಕ ಖಚಿತವಾಗಿದ್ದರೂ ಕಡೆಕ್ಷಣದಲ್ಲಿ ಅದು ಡೆಹ್ರಾಡೂನ್ ಪಾಲಾಯಿತು. ಆದರೆ, ಈ ಬಾರಿ ಸಂಸದ ಪ್ರತಾಪಸಿಂಹ ಅವರು ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತೆ ದೆಹಲಿಗೆ ತೆರಳಿ ಮೋದಿ ಅವರಿಗೆ ಆಹ್ವಾನ ನೀಡಿ ಬಂದಿದ್ದಾರೆ. ಇತ್ತ ಸ್ಥಳೀಯ ಶಾಸಕರೂ ಮೋದಿ ಅವರನ್ನು ಕರೆಯಲು ಪ್ರಯತ್ನಿಸುತ್ತಿದ್ದಾರೆ. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿದೆ. ಎಲ್ಲಿ ನಿರ್ಗಮನ ದ್ವಾರ ಇದೆ, ಪ್ರವೇಶ ದ್ವಾರ ಹೇಗಿದೆ, ಭದ್ರತೆ ವ್ಯವಸ್ಥೆ ಕುರಿತ ಬಗ್ಗೆ ಮಾಹಿತಿಯನ್ನು ಕಲೆ ಹಾಕಿ ಡಿಸಿ ನೇತೃತ್ವದಲ್ಲಿ ಸಭೆಯನ್ನೂ ನಡೆಸಿ ಹೋಗಿದ್ದಾರೆ.
ಚುನಾವಣೆ ದೃಷ್ಟಿಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೆ ಈಗಿನಿಂದಲೇ ಬಿಜೆಪಿ ತಯಾರಿ ನಡೆಸುತ್ತಿದೆ. ಈಗಾಗಲೇ ಕೇಂದ್ರದ ಗೃಹ ಸಚಿವ ಅಮಿತಾ ಶಾ ಬೆಂಗಳೂರಿಗೆ ಭೇಟಿ ನೀಡಿ ಎಲ್ಲಾ ಮುಖಂಡರನ್ನು ಭೇಟಿ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ನೀಡಿ ಹೋಗಿದ್ದಾರೆ. ದಕ್ಷಿಣ ಭಾರತದಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಕರ್ನಾಟಕ ಬೆಸ್ಟ್ ಪ್ಲೇಸ್. ಈ ನಿಟ್ಟಿನಲ್ಲಿ ಯೋಗ ದಿನಾಚರಣೆಗೆ ನರೇಂದ್ರ ಮೋದಿ ಅವರನ್ನು ಕರೆ ತರುವ ವಿಚಾರ ಮಹತ್ವ ಪಡೆದುಕೊಂಡಿದೆ.