ಆ್ಯಪ್ನಗರ

ಎಚ್ಡಿಕೆ ನನ್ನನ್ನು ವೈರಿಯಂತೆ ನೋಡಿದ್ದೇ ಸಮಸ್ಯೆಯಾಗಿದ್ದು: ಸಿದ್ದರಾಮಯ್ಯ

ಮತ್ತೀಗ ಕುಮಾರಸ್ವಾಮಿ ತಾವು ಹಾಗೆ ಹೇಳಿಯೇ ಇಲ್ಲ ಎನ್ನುವುದರ ಮೂಲಕ ಸಿದ್ದರಾಮಯ್ಯನವರನ್ನು ತಣ್ಣಗಾಗಿಸಲು ಯತ್ನಿಸಿದ್ದಾರೆ.

Vijaya Karnataka Web 25 Aug 2019, 5:19 pm
ಮೈಸೂರು: ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ನೋಡಿದ್ದೇ ಸಮಸ್ಯೆಯಾಗಿದ್ದು, ಮಿತ್ರನಂತೆ ನೋಡದಿದ್ರೆ ಸಮಸ್ಯೆಯೇ ಆಗುತ್ತಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
Vijaya Karnataka Web Siddaramaiah


ಬಿಜೆಪಿಗಿಂತ ಮೊದಲು ಸಿದ್ದರಾಮಯ್ಯನವರೇ ನನ್ನ ಮೊದಲ ಶತ್ರು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದು ಆಂಗ್ಲ ವೆಬ್‌ಸೈಟ್‌ ಒಂದರಲ್ಲಿ ಸುದ್ದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ.

ನಾನು ಮುಖ್ಯಮಂತ್ರಿಯಂತಿರಲಿಲ್ಲ, ಕ್ಲರ್ಕ್ ‌ರೀತಿ ಕೆಲಸ ಮಾಡುತ್ತಿದ್ದೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಅವರು, ಅಧಿಕಾರ ನಡೆಸಲು ಬಾರದವರು ಹೀಗೆ ಮಾತನಾಡುತ್ತಾರೆ ಎಂದು ಟಾಂಗ್ ನೀಡಿದರು.

ಸಿದ್ದರಾಮಯ್ಯನವರು ನನ್ನ ಮೊದಲ ಶತ್ರುವಲ್ಲ: ಮಾಜಿ ಸಿಎಂ ಹೆಚ್ಡಿಕೆ ಸ್ಪಷ್ಟನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ