ಆ್ಯಪ್ನಗರ

ಅನುಮತಿ ಪಡೆಯದೆ ಪ್ರಚಾರ: ತಡೆ

ಅನುಮತಿ ಪಡೆಯದೇ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಮುಂದಾದ ಟೀಂ ಮೋದಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

Vijaya Karnataka 8 Apr 2019, 5:00 am
ಪೊಲೀಸರೊಂದಿಗೆ ಟೀಂ ಮೋದಿ ಕಾರ್ಯಕರ್ತನ ವಾಗ್ವಾದ
Vijaya Karnataka Web promotion without permission interruption
ಅನುಮತಿ ಪಡೆಯದೆ ಪ್ರಚಾರ: ತಡೆ


ಮೈಸೂರು:
ಅನುಮತಿ ಪಡೆಯದೇ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಚುನಾವಣಾ ಪ್ರಚಾರ ನಡೆಸಲು ಮುಂದಾದ ಟೀಂ ಮೋದಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು.

ಬೆಳಗ್ಗೆ 7ರ ಸುಮಾರಿಗೆ 20ಕ್ಕೂ ಹೆಚ್ಚು ಸಂಘಟನೆಗಳೊಂದಿಗೆ ಟೀಂ ಮೋದಿ ಕಾರ್ಯಕರ್ತರು, ಚಾಮುಂಡಿ ಬೆಟ್ಟದಲ್ಲಿ ಮೆಟ್ಟಿಲು ಹತ್ತುವ ಮೂಲಕ ಚುನಾವಣಾ ಪ್ರಚಾರ ಕೈಗೊಂಡಿದ್ದರು. ಈ ವೇಳೆ ಮೋದಿ ಸಾಧನೆಯ ಕರಪತ್ರಗಳನ್ನು ಹಂಚಲು ತಂದಿದ್ದರು. ಆದರೆ ಕಾರ್ಯಕ್ರಮಕ್ಕೆ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಸ್ಥಳದಲ್ಲಿದ್ದ ಕೆ.ಆರ್‌.ಠಾಣೆ ಪೊಲೀಸರು ಅನುಮತಿ ಇಲ್ಲದೇ ಚುನಾವಣಾ ಪ್ರಚಾರ ನಡೆಸಲು ಅವಕಾಶವಿಲ್ಲ ಎಂದು ಟೀಂ ಮೋದಿ ಕಾರ್ಯಕರ್ತರ ಕೈಯಲ್ಲಿದ್ದ ಕರಪತ್ರಗಳನ್ನು ನೀಡುವಂತೆ ಸೂಚನೆ ನೀಡಿದರು. ಆದರೆ ಟೀಂ ಮೋದಿ ಸಂಘಟನೆಯ ಸದಸ್ಯರೊಬ್ಬರು, ಕರಪತ್ರಗಳನ್ನು ನೀಡದೇ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಶಾಸಕ ರಾಮದಾಸ್‌, ಕಾರ್ಯಕರ್ತರನ್ನು ಸಮಾಧಾನಗೊಳಿಸಿ, ಕರಪತ್ರಗಳನ್ನು ನೀಡುವಂತೆ ಹೇಳಿದರು. ಬಳಿಕ ಎಲ್ಲಾ ಕಾರ್ಯಕರ್ತರು ಕರಪತ್ರಗಳನ್ನು ಹಂಚದೇ 'ಮೋದಿ ಮತ್ತೊಮ್ಮೆ ಪ್ರಧಾನಿ' ಎಂದು ಘೋಷಣೆ ಕೂಗುವ ಮೂಲಕ ಬೆಟ್ಟವನ್ನು ಹತ್ತಿ ಹಿಂದಿರುಗಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ