ಆ್ಯಪ್ನಗರ

ಮೃಗಾಲಯ ತೆರೆಯಲು ಆಗ್ರಹಿಸಿ ಧರಣಿ

ಹಕ್ಕಿ ಜ್ವರದ ನೆಪ ಹೇಳಿಕೊಂಡು ಮೈಸೂರಿನ ಚಾಮರಾಜೇಂದ್ರ ಮೃಗಾಲಯ ನಿರ್ದೇಶಕರು ತಪ್ಪು ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ‌್ಯಕರ್ತರು ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 29 Jan 2017, 5:15 am
ಮೈಸೂರು: ಹಕ್ಕಿ ಜ್ವರದ ನೆಪ ಹೇಳಿಕೊಂಡು ಮೈಸೂರಿನ ಚಾಮರಾಜೇಂದ್ರ ಮೃಗಾಲಯ ನಿರ್ದೇಶಕರು ತಪ್ಪು ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆ ಕಾರ‌್ಯಕರ್ತರು ಪ್ರತಿಭಟನೆ ನಡೆಸಿದರು.
Vijaya Karnataka Web protest demanding open zoo
ಮೃಗಾಲಯ ತೆರೆಯಲು ಆಗ್ರಹಿಸಿ ಧರಣಿ


ಮೈಸೂರು ಮೃಗಾಲಯದ ಎದುರು ಶನಿವಾರ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಪ್ರವಾಸಿಗರ ಪ್ರಮುಖ ತಾಣವಾದ ಮೃಗಾಲಯಕ್ಕೆ 124ವರ್ಷಗಳ ಇತಿಹಾಸವಿದ್ದು, ಈವರಗೆ ಯಾವ ಪರಿಸ್ಥಿತಿಯಲ್ಲೂ ಒಂದು ತಿಂಗಳ ಕಾಲ ಮೃಗಾಲಯವನ್ನು ಬಂದ್ ಮಾಡಿರಲಿಲ್ಲ. ಇದೇ ಮೊದಲ ಬಾರಿಗೆ ಬಂದ್ ಮಾಡಲಾಗಿದೆ ಎಂದು ಆರೋಪಿಸಿದರು.

ಮೃಗಾಲಯದ ನಿರ್ದೇಶಕಿ ಮತ್ತು ಮೃಗಾಲಯದ ನೌಕರರಲ್ಲಿ ಅಸಮಾಧಾನವಿದೆ. ಇವರ ಮತ್ತು ನೌಕರರ ನಡುವಿನ ಹೊಂದಾಣಿಕೆ ಸಮಸ್ಯೆಯಿಂದಲೇ ಮೃಗಾಲಯದಲ್ಲಿ ಪಕ್ಷಿಗಳ ಸಾವು ಸಂಭವಿಸಿದೆ ಎಂದು ಆರೋಪಿಸಿ ನಿರ್ದೇಶಕಿ ವಿರುದ್ಧ ಘೋಷಣೆ ಕೂಗಿದರು.

ಮೃಗಾಲಯ ಬಂದ್ ಮಾಡಿರುವುದರಿಂದ ಪ್ರವಾಸೋದ್ಯಮಕ್ಕೆ ಹಾಗೂ ರಾಜ್ಯ ಬೊಕ್ಕಸಕ್ಕೆ ಕೋಟ್ಯಾಂತರ ರೂ.ನಷ್ಟವಾಗಿದೆ. ಹಾಗಾಗಿ ಸರಕಾರ ಕೂಡಲೇ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಪ್ರವಾಸಿಗರಿಗೆ ಮೃಗಾಲಯಕ್ಕೆ ಪ್ರವೇಶ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ನಗರಾಧ್ಯಕ್ಷ ಪಿ. ಪ್ರಜೇಶ್, ಆರ್. ಶಾಂತಮೂರ್ತಿ, ರವಿತೇಜ, ಬಂಗಾರಪ್ಪ, ನಂದಕುಮಾರ್, ಶ್ರೀನಿವಾಸ ರಾಜಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ