ಆ್ಯಪ್ನಗರ

ಅತ್ಯಾಚಾರ: ಮೂವರು ಪಾದ್ರಿಗಳ ವಿರುದ್ಧ ಕೇಸ್‌

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರು ಕ್ರೈಸ್ತ ಪಾದ್ರಿಗಳ ವಿರುದ್ಧ ನಗರದ ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Vijaya Karnataka 4 Feb 2019, 7:35 am
ಮೈಸೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮೂವರು ಕ್ರೈಸ್ತ ಪಾದ್ರಿಗಳ ವಿರುದ್ಧ ನಗರದ ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
Vijaya Karnataka Web rape


ಮೈಸೂರಿನ ಒಬ್ಬರು ಹಾಗೂ ಮಂಗಳೂರಿನ ಇಬ್ಬರು ಪಾದ್ರಿಗಳ ವಿರುದ್ಧ ಅತ್ಯಾಚಾರ, ಅಪಹರಣ, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಪಾದ್ರಿಯು ನಗರದ 16 ವರ್ಷದ ಬಾಲಕಿಗೆ ನರ್ಸಿಂಗ್‌ ಕೆಲಸ ಕೊಡಿಸುವುದಾಗಿ ನಂಬಿಸಿದ್ದು, ಆಕೆಯ ತಾಯಿಗೆ ಮನೆ ಕಟ್ಟಲು ಒಂದು ಲಕ್ಷ ರೂ. ನೆರವು ನೀಡುವುದಾಗಿ ಆಮಿಷವೊಡ್ಡಿ ಮಂಗಳೂರಿಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಆಕೆಗೆ ನರ್ಸಿಂಗ್‌ ಕೆಲಸ ನೀಡದೇ ಮನೆಗೆಲಸಕ್ಕೆ ಇರಿಸಿಕೊಂಡಿದ್ದರು. ಈ ವೇಳೆ ಮೂವರೂ ಪಾದ್ರಿಗಳು ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿಯ ತಾಯಿ ಸ್ವಯಂ ಸೇವಾ ಸಂಸ್ಥೆಯ ಮೂಲಕ ಹೈಕೋರ್ಟ್‌ಗೆ ದೂರು ನೀಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಹೈಕೋರ್ಟ್‌ ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ