ಆ್ಯಪ್ನಗರ

ಅಭಿವೃದ್ಧಿಗೆ ಪೂರಕವಾದ ಯೋಜನೆ ಅಗತ್ಯ

ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರಕಾರ ಹೆಚ್ಚು ಅಭಿವೃದ್ಧಿ ಕಾರ‌್ಯಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದರು.

Vijaya Karnataka 11 Jan 2018, 5:15 am
ಮೈಸೂರು: ಗ್ರಾಮೀಣ ಭಾಗದ ಜನರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಸರಕಾರ ಹೆಚ್ಚು ಅಭಿವೃದ್ಧಿ ಕಾರ‌್ಯಗಳನ್ನು ಕೈಗೊಳ್ಳಬೇಕು ಎಂದು ಮೈಸೂರು ವಿವಿ ಪ್ರಭಾರ ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದರು.
Vijaya Karnataka Web require a complementary plan for development
ಅಭಿವೃದ್ಧಿಗೆ ಪೂರಕವಾದ ಯೋಜನೆ ಅಗತ್ಯ


ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಮಾನಸಗಂಗೋತ್ರಿಯ ವಿಜ್ಞಾನ ಭವನದ ಸಭಾಂಗಣದಲ್ಲಿ ಅಯೋಜಿಸಿದ್ದ ಭಾರತದ ಗ್ರಾಮೀಣ ಭಾಗದಲ್ಲಿ ಆರೋಗ್ಯದ ಸಮಸ್ಯೆಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

‘‘ಬಡತನ ಮತ್ತು ಅನಕ್ಷರತೆಯಿಂದ ಸಮಸ್ಯೆ ಉಂಟಾಗಿದ್ದು, ಅವುಗಳನ್ನು ಬಗೆಹರಿಸುವ ಮೂಲಕ ಆರೋಗ್ಯ ಸೇವೆಗಳನ್ನು ಒದಗಿಸಿ ದೇಶದ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ಕೈಗೊಳ್ಳಬೇಕು. ವಿಶ್ವಸಂಸ್ಥೆ ಯು ಜನರ ಆರೋಗ್ಯದ ದೃಷ್ಟಿಯಿಂದ ಪೂರಕವಾದ ಅನೇಕ ಕಾರ‌್ಯಕ್ರಮಗಳನ್ನು ಕೈಗೊಂಡಿದೆ. ಆ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಯೋಜನೆಗಳನ್ನು ಜಾರಿಗೊಳಿಸ ಬೇಕಿದೆ,’’ ಎಂದರು.

‘‘ಗ್ರಾಮೀಣ ಭಾಗದ ಜನರಿಗೆ ಮೂಲ ಸೌಕರ‌್ಯಗಳ ಜತೆಗೆ ಪರಿಸರ ರಕ್ಷಣೆ, ವೈಜ್ಞಾನಿಕ ಕೃಷಿ ಪದ್ಧತಿ ಕುರಿತು ಮಾಹಿತಿ ನೀಡುವ ಕಾರ‌್ಯವಾಗಬೇಕು,’’ ಎಂದು ತಿಳಿಸಿದರು.

ಮೈಸೂರು ವಿವಿ ಕುಲಸಚಿವೆ ಡಿ.ಭಾರತಿ ಮಾತನಾಡಿ, ‘‘ಪ್ರಸ್ತುತ ರೈತರು ಕೃಷಿಯಲ್ಲಿ ಹೆಚ್ಚು ಇಳುವರಿಯನ್ನು ಪಡೆಯುವ ಉದ್ದೇಶದಿಂದ ಕ್ರಿಮಿನಾಶಕಗಳನ್ನು ಹೆಚ್ಚು ಬಳಸುತ್ತಿರುವುದರಿಂದ ಪೌಷ್ಟ್ಠಕಾಂಶಯುಕ್ತವಾದ ಆಹಾರ ದೊರೆಯದಂತ್ತಾಗಿದೆ. ಕ್ರಿಮಿನಾಶಕಗಳ ಬಳಕೆ ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಕೃಷಿ ಭೂಮಿ ಫಲವತ್ತತೆಯನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ,’’ ಎಂದರು.

‘‘ಹಿಂದಿಗಿಂತ ಇಂದು ಆಹಾರದಲ್ಲಿ ಅಪಾರ ಪ್ರಮಾಣ ದಲ್ಲಿ ಬದಲಾವಣೆಯಾಗಿರುವ ಕಾರಣ ಹೆಣ್ಣು ಮಕ್ಕಳು 8ವರ್ಷಕ್ಕೆ ಋತಿಮತಿಯಾಗುತ್ತಿದ್ದಾರೆ. ಹೀಗೆ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಎದುರಾಗುತ್ತಿದ್ದು, ಜನರಿಗೆ ಈ ಕುರಿತು ಅರಿವು ಮೂಡಿಸುವ ಕಾರ‌್ಯಕ್ರಮಗಳು ಹೆಚ್ಚು ನಡೆಯಬೇಕು,’’ ಎಂದರು.

‘‘ಕೋಲಾರ ಮತ್ತು ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ರಾಜ್ಯದ ಬಹುತೇಕ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ಪರದಾಡುವಂತಹ ಪರಿಸ್ಥಿತಿಯಿದೆ. ಸರಕಾರವು ಪ್ರತಿಯೊಬ್ಬ ವ್ಯಕ್ತಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಬೇಕಿದೆ. ಜನರು ಅನಗತ್ಯವಾಗಿ ನೀರನ್ನು ವ್ಯರ್ಥ ಮಾಡದೇ ಮಿತವಾಗಿ ಬಳಸುವ, ಮಳೆಯ ನೀರನ್ನು ಶೇಖರಿಸುವ, ಅಂತರ್ಜಲವನ್ನು ಹೆಚ್ಚಿಸುವ ಕಾರ‌್ಯವನ್ನು ಮಾಡಬೇಕು,’’ ಎಂದು ತಿಳಿಸಿದರು.

ಕಾರ‌್ಯಕ್ರಮದಲ್ಲಿ ಸ್ಟಡಿ ಆಫ್ ಸೋಷಿಯಲ್ ಎಕ್ಸಿಕ್ಲುಷನ್ ಅಂಡ್ ಇನ್‌ಕ್ಸುಸಿವ್ ಪಾಲಿಸಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ನಂಜುಂಡ ಉಪಸ್ಥಿತರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ