ಆ್ಯಪ್ನಗರ

ಮೇಲ್ವರ್ಗದ ಬಡವರಿಗೂ ಮೀಸಲು ಚುನಾವಣಾ ಗಿಮಿಕ್‌

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲು ನೀಡಬೇಕೆಂಬ ಮಸೂದೆ ಮಂಡನೆ ಮಾಡಿರುವುದು ಸ್ವಾಗತಾರ್ಹ. ಆದರೆ, ಚುನಾವಣೆ ದೃಷ್ಟಿಕೋನದಲ್ಲಿ ನೋಡಿದರೆ ಇದು ಬಿಜೆಪಿಯ ಚುನಾವಣಾ ಗಿಮಿಕ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

Vijaya Karnataka 10 Jan 2019, 5:00 am
ಮೈಸೂರು: ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲು ನೀಡಬೇಕೆಂಬ ಮಸೂದೆ ಮಂಡನೆ ಮಾಡಿರುವುದು ಸ್ವಾಗತಾರ್ಹ. ಆದರೆ, ಚುನಾವಣೆ ದೃಷ್ಟಿಕೋನದಲ್ಲಿ ನೋಡಿದರೆ ಇದು ಬಿಜೆಪಿಯ ಚುನಾವಣಾ ಗಿಮಿಕ್‌ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.
Vijaya Karnataka Web reservation for upper castes election gimmick
ಮೇಲ್ವರ್ಗದ ಬಡವರಿಗೂ ಮೀಸಲು ಚುನಾವಣಾ ಗಿಮಿಕ್‌


ಮೈಸೂರಿನ ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದ ಎದುರು ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಬಿಜೆಪಿಯವರು ಮೀಸಲು ವಿರೋಧಿಸುತ್ತಿದ್ದರು. ಇವರಿಗೆ ಮೀಸಲು ಮೇಲೆ ನಂಬಿಕೆಯೇ ಇರಲಿಲ್ಲ. ಆದರೀಗ ಅವರೇ ಈ ಕುರಿತು ಮಸೂದೆ ಮಂಡನೆಗೆ ಮುಂದಾಗಿರುವುದು ಕೇವಲ ಚುನಾವಣಾ ಗಿಮಿಕ್‌,'' ಎಂದು ದೂರಿದರು.

''ಚುನಾವಣಾ ಹೊಸ್ತಿಲಲ್ಲಿ ಮೀಸಲು ನೀಡುತ್ತೇವೆ ಎನ್ನುವುದಕ್ಕೆ ಯಾವ ಅರ್ಥವೂ ಇಲ್ಲ. ಇದೊಂದು ರಾಜಕೀಯ ಲಾಭ ಪಡೆಯುವ ಹುನ್ನಾರ,'' ಎಂದು ಆರೋಪಿಸಿದರು.

ಹಾದಿ ಬೀದಿಯಲ್ಲಿ ಮಾತನಾಡಲ್ಲ: ಸಚಿವ ಎಚ್‌.ಡಿ.ರೇವಣ್ಣ ನಿಗಮ ಮಂಡಳಿ ನೇಮಕ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ''ಈ ವಿಚಾರವನ್ನು ಹಾದಿ ಬೀದಿಯಲ್ಲಿ ಮಾತನಾಡುವುದಿಲ್ಲ. ಈ ಬಗ್ಗೆ ಚರ್ಚಿಸಲು ಬಯಸಲ್ಲ. ಮುಂದಿನ ವಾರ ಸಮನ್ವಯ ಸಮಿತಿ ಸಭೆ ನಡೆಯಲಿದೆ. ಸಮನ್ವಯ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಮುಂಬರುವ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಲಾಗುತ್ತದೆ,'' ಎಂದರು.

ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಲಿ: ''ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಮುಷ್ಕರದಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳನ್ನು ಹೊರತುಪಡಿಸಿ ಉಳಿದ ಕಾರ್ಮಿಕ ಸಂಘಟನೆಗಳೆಲ್ಲಾ ಭಾಗಿಯಾಗಿವೆ. ಕಾರ್ಮಿಕರ ಮುಷ್ಕರ ನ್ಯಾಯಯುತವಾಗಿದೆ. ಕಾರ್ಮಿಕರ ಮುಷ್ಕರ ಕಾಂಗ್ರೆಸ್‌ ಪ್ರೇರಿತವಲ್ಲ. ಕಾರ್ಮಿಕರ ಸಮಸ್ಯೆಗಳನ್ನು ನಿವಾರಿಸಲು ಕೇಂದ್ರ ಸರಕಾರ ಮುಂದಾಗಬೇಕು,'' ಎಂದು ಒತ್ತಾಯಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ